ಸಾವಯವ ಕೃಷಿ ಇಂದಿನ ಅವಶ್ಯಕತೆ : ‘ಭಾರತದ ಗ್ರೀನ್ ಹೀರೋ’ ಆರ್.ಕೆ. ನಾಯರ್

January 12, 2026
7:17 AM
ಸಾವಯವ ಕೃಷಿ ಇಂದಿನ ಅವಶ್ಯಕತೆ ಎಂದು ‘ಭಾರತದ ಗ್ರೀನ್ ಹೀರೋ’ ಆರ್.ಕೆ. ನಾಯರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಪಾರಂಪರಿಕ ಆಹಾರ ಹಾಗೂ ಆರೋಗ್ಯದ ಮಹತ್ವದ ಕುರಿತು ಜಾಗೃತಿ.

ಸಾವಯವ ಕೃಷಿ ಇಂದಿನ ಅವಶ್ಯಕತೆಯೇ ಆಗಿದೆ ಎಂದು ‘ಭಾರತದ ಗ್ರೀನ್ ಹೀರೋ’ ಎಂದು ಖ್ಯಾತರಾಗಿರುವ ಆರ್.ಕೆ. ನಾಯರ್ ಅಭಿಪ್ರಾಯಪಟ್ಟಿದ್ದಾರೆ.

ಸಾವಯವ ಕೃಷಿಕ ಗ್ರಾಹಕ ಬಳಗದ ವತಿಯಿಂದ ಮಂಗಳೂರಿನಲ್ಲಿ ಆಯೋಜಿಸಲಾದ ‘ವ್ಯಸ್ತ ಜೀವನ – ಸ್ವಸ್ಥ ಭೋಜನ’ ಆರೋಗ್ಯಕ್ಕಾಗಿ ಪಾರಂಪರಿಕ ಆಹಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾವು ಪ್ರಕೃತಿಗೆ ಏನು ಕೊಡುತ್ತೇವೆಯೋ ಅದೇ ನಮಗೆ ವಾಪಾಸಾಗಿ ಸಿಗುತ್ತದೆ ಎಂದು ಹೇಳಿದರು.

ಪ್ರಕೃತಿಯ ಮಡಿಲಿಗೆ ವಿಷವನ್ನು ಹಾಕಿದ ಪರಿಣಾಮವಾಗಿ ಇಂದು ನಾವು ತಿನ್ನುವ ಆಹಾರ, ಕುಡಿಯುವ ನೀರು, ಇರುವ ಮಣ್ಣು ಮತ್ತು ಉಸಿರಾಡುವ ಗಾಳಿಯೂ ವಿಷಪೂರಿತವಾಗಿದೆ ಎಂದು ಎಚ್ಚರಿಸಿದರು. ನಾವು ಬದಲಾದರೆ ಮಾತ್ರ ವ್ಯವಸ್ಥೆ ಬದಲಾಗುತ್ತದೆ; ಆಗ ಗ್ರಾಮ, ರಾಜ್ಯ ಮತ್ತು ದೇಶವೂ ಬದಲಾಗಬಹುದು ಎಂದು ಅವರು ತಿಳಿಸಿದರು.

ಇನ್ನು ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಹೇಳಿದ ಆರ್.ಕೆ. ನಾಯರ್, ಸಾವಯವ ಕೃಷಿ ಹಾಗೂ ಆರೋಗ್ಯಕರ ಆಹಾರದ ಅಗತ್ಯತೆಯನ್ನು ಮಕ್ಕಳಿಗೆ ತಿಳಿಹೇಳಬೇಕಾದ ಜವಾಬ್ದಾರಿ ನಮ್ಮದೆ ಎಂದು ಕರೆ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ
July 26, 2026
3:04 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ
July 26, 2026
2:49 PM
by: ಸಾಯಿಶೇಖರ್ ಕರಿಕಳ
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror