ಸಾವಯವ ಕೃಷಿ ಇಂದಿನ ಅವಶ್ಯಕತೆಯೇ ಆಗಿದೆ ಎಂದು ‘ಭಾರತದ ಗ್ರೀನ್ ಹೀರೋ’ ಎಂದು ಖ್ಯಾತರಾಗಿರುವ ಆರ್.ಕೆ. ನಾಯರ್ ಅಭಿಪ್ರಾಯಪಟ್ಟಿದ್ದಾರೆ.
ಸಾವಯವ ಕೃಷಿಕ ಗ್ರಾಹಕ ಬಳಗದ ವತಿಯಿಂದ ಮಂಗಳೂರಿನಲ್ಲಿ ಆಯೋಜಿಸಲಾದ ‘ವ್ಯಸ್ತ ಜೀವನ – ಸ್ವಸ್ಥ ಭೋಜನ’ ಆರೋಗ್ಯಕ್ಕಾಗಿ ಪಾರಂಪರಿಕ ಆಹಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾವು ಪ್ರಕೃತಿಗೆ ಏನು ಕೊಡುತ್ತೇವೆಯೋ ಅದೇ ನಮಗೆ ವಾಪಾಸಾಗಿ ಸಿಗುತ್ತದೆ ಎಂದು ಹೇಳಿದರು.
ಪ್ರಕೃತಿಯ ಮಡಿಲಿಗೆ ವಿಷವನ್ನು ಹಾಕಿದ ಪರಿಣಾಮವಾಗಿ ಇಂದು ನಾವು ತಿನ್ನುವ ಆಹಾರ, ಕುಡಿಯುವ ನೀರು, ಇರುವ ಮಣ್ಣು ಮತ್ತು ಉಸಿರಾಡುವ ಗಾಳಿಯೂ ವಿಷಪೂರಿತವಾಗಿದೆ ಎಂದು ಎಚ್ಚರಿಸಿದರು. ನಾವು ಬದಲಾದರೆ ಮಾತ್ರ ವ್ಯವಸ್ಥೆ ಬದಲಾಗುತ್ತದೆ; ಆಗ ಗ್ರಾಮ, ರಾಜ್ಯ ಮತ್ತು ದೇಶವೂ ಬದಲಾಗಬಹುದು ಎಂದು ಅವರು ತಿಳಿಸಿದರು.
ಇನ್ನು ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಹೇಳಿದ ಆರ್.ಕೆ. ನಾಯರ್, ಸಾವಯವ ಕೃಷಿ ಹಾಗೂ ಆರೋಗ್ಯಕರ ಆಹಾರದ ಅಗತ್ಯತೆಯನ್ನು ಮಕ್ಕಳಿಗೆ ತಿಳಿಹೇಳಬೇಕಾದ ಜವಾಬ್ದಾರಿ ನಮ್ಮದೆ ಎಂದು ಕರೆ ನೀಡಿದರು.
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…