ಸಾವಯವ ಕೃಷಿ ಇಂದಿನ ಅವಶ್ಯಕತೆಯೇ ಆಗಿದೆ ಎಂದು ‘ಭಾರತದ ಗ್ರೀನ್ ಹೀರೋ’ ಎಂದು ಖ್ಯಾತರಾಗಿರುವ ಆರ್.ಕೆ. ನಾಯರ್ ಅಭಿಪ್ರಾಯಪಟ್ಟಿದ್ದಾರೆ.
ಸಾವಯವ ಕೃಷಿಕ ಗ್ರಾಹಕ ಬಳಗದ ವತಿಯಿಂದ ಮಂಗಳೂರಿನಲ್ಲಿ ಆಯೋಜಿಸಲಾದ ‘ವ್ಯಸ್ತ ಜೀವನ – ಸ್ವಸ್ಥ ಭೋಜನ’ ಆರೋಗ್ಯಕ್ಕಾಗಿ ಪಾರಂಪರಿಕ ಆಹಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾವು ಪ್ರಕೃತಿಗೆ ಏನು ಕೊಡುತ್ತೇವೆಯೋ ಅದೇ ನಮಗೆ ವಾಪಾಸಾಗಿ ಸಿಗುತ್ತದೆ ಎಂದು ಹೇಳಿದರು.
ಪ್ರಕೃತಿಯ ಮಡಿಲಿಗೆ ವಿಷವನ್ನು ಹಾಕಿದ ಪರಿಣಾಮವಾಗಿ ಇಂದು ನಾವು ತಿನ್ನುವ ಆಹಾರ, ಕುಡಿಯುವ ನೀರು, ಇರುವ ಮಣ್ಣು ಮತ್ತು ಉಸಿರಾಡುವ ಗಾಳಿಯೂ ವಿಷಪೂರಿತವಾಗಿದೆ ಎಂದು ಎಚ್ಚರಿಸಿದರು. ನಾವು ಬದಲಾದರೆ ಮಾತ್ರ ವ್ಯವಸ್ಥೆ ಬದಲಾಗುತ್ತದೆ; ಆಗ ಗ್ರಾಮ, ರಾಜ್ಯ ಮತ್ತು ದೇಶವೂ ಬದಲಾಗಬಹುದು ಎಂದು ಅವರು ತಿಳಿಸಿದರು.
ಇನ್ನು ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಹೇಳಿದ ಆರ್.ಕೆ. ನಾಯರ್, ಸಾವಯವ ಕೃಷಿ ಹಾಗೂ ಆರೋಗ್ಯಕರ ಆಹಾರದ ಅಗತ್ಯತೆಯನ್ನು ಮಕ್ಕಳಿಗೆ ತಿಳಿಹೇಳಬೇಕಾದ ಜವಾಬ್ದಾರಿ ನಮ್ಮದೆ ಎಂದು ಕರೆ ನೀಡಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…