ಸಾವಯವ ಕೃಷಿ ಇಂದಿನ ಅವಶ್ಯಕತೆಯೇ ಆಗಿದೆ ಎಂದು ‘ಭಾರತದ ಗ್ರೀನ್ ಹೀರೋ’ ಎಂದು ಖ್ಯಾತರಾಗಿರುವ ಆರ್.ಕೆ. ನಾಯರ್ ಅಭಿಪ್ರಾಯಪಟ್ಟಿದ್ದಾರೆ.
ಸಾವಯವ ಕೃಷಿಕ ಗ್ರಾಹಕ ಬಳಗದ ವತಿಯಿಂದ ಮಂಗಳೂರಿನಲ್ಲಿ ಆಯೋಜಿಸಲಾದ ‘ವ್ಯಸ್ತ ಜೀವನ – ಸ್ವಸ್ಥ ಭೋಜನ’ ಆರೋಗ್ಯಕ್ಕಾಗಿ ಪಾರಂಪರಿಕ ಆಹಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾವು ಪ್ರಕೃತಿಗೆ ಏನು ಕೊಡುತ್ತೇವೆಯೋ ಅದೇ ನಮಗೆ ವಾಪಾಸಾಗಿ ಸಿಗುತ್ತದೆ ಎಂದು ಹೇಳಿದರು.
ಪ್ರಕೃತಿಯ ಮಡಿಲಿಗೆ ವಿಷವನ್ನು ಹಾಕಿದ ಪರಿಣಾಮವಾಗಿ ಇಂದು ನಾವು ತಿನ್ನುವ ಆಹಾರ, ಕುಡಿಯುವ ನೀರು, ಇರುವ ಮಣ್ಣು ಮತ್ತು ಉಸಿರಾಡುವ ಗಾಳಿಯೂ ವಿಷಪೂರಿತವಾಗಿದೆ ಎಂದು ಎಚ್ಚರಿಸಿದರು. ನಾವು ಬದಲಾದರೆ ಮಾತ್ರ ವ್ಯವಸ್ಥೆ ಬದಲಾಗುತ್ತದೆ; ಆಗ ಗ್ರಾಮ, ರಾಜ್ಯ ಮತ್ತು ದೇಶವೂ ಬದಲಾಗಬಹುದು ಎಂದು ಅವರು ತಿಳಿಸಿದರು.
ಇನ್ನು ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಹೇಳಿದ ಆರ್.ಕೆ. ನಾಯರ್, ಸಾವಯವ ಕೃಷಿ ಹಾಗೂ ಆರೋಗ್ಯಕರ ಆಹಾರದ ಅಗತ್ಯತೆಯನ್ನು ಮಕ್ಕಳಿಗೆ ತಿಳಿಹೇಳಬೇಕಾದ ಜವಾಬ್ದಾರಿ ನಮ್ಮದೆ ಎಂದು ಕರೆ ನೀಡಿದರು.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…