ಸಾವಯವ ಕೃಷಿ ಇಂದಿನ ಅವಶ್ಯಕತೆಯೇ ಆಗಿದೆ ಎಂದು ‘ಭಾರತದ ಗ್ರೀನ್ ಹೀರೋ’ ಎಂದು ಖ್ಯಾತರಾಗಿರುವ ಆರ್.ಕೆ. ನಾಯರ್ ಅಭಿಪ್ರಾಯಪಟ್ಟಿದ್ದಾರೆ.
ಸಾವಯವ ಕೃಷಿಕ ಗ್ರಾಹಕ ಬಳಗದ ವತಿಯಿಂದ ಮಂಗಳೂರಿನಲ್ಲಿ ಆಯೋಜಿಸಲಾದ ‘ವ್ಯಸ್ತ ಜೀವನ – ಸ್ವಸ್ಥ ಭೋಜನ’ ಆರೋಗ್ಯಕ್ಕಾಗಿ ಪಾರಂಪರಿಕ ಆಹಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾವು ಪ್ರಕೃತಿಗೆ ಏನು ಕೊಡುತ್ತೇವೆಯೋ ಅದೇ ನಮಗೆ ವಾಪಾಸಾಗಿ ಸಿಗುತ್ತದೆ ಎಂದು ಹೇಳಿದರು.
ಪ್ರಕೃತಿಯ ಮಡಿಲಿಗೆ ವಿಷವನ್ನು ಹಾಕಿದ ಪರಿಣಾಮವಾಗಿ ಇಂದು ನಾವು ತಿನ್ನುವ ಆಹಾರ, ಕುಡಿಯುವ ನೀರು, ಇರುವ ಮಣ್ಣು ಮತ್ತು ಉಸಿರಾಡುವ ಗಾಳಿಯೂ ವಿಷಪೂರಿತವಾಗಿದೆ ಎಂದು ಎಚ್ಚರಿಸಿದರು. ನಾವು ಬದಲಾದರೆ ಮಾತ್ರ ವ್ಯವಸ್ಥೆ ಬದಲಾಗುತ್ತದೆ; ಆಗ ಗ್ರಾಮ, ರಾಜ್ಯ ಮತ್ತು ದೇಶವೂ ಬದಲಾಗಬಹುದು ಎಂದು ಅವರು ತಿಳಿಸಿದರು.
ಇನ್ನು ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಹೇಳಿದ ಆರ್.ಕೆ. ನಾಯರ್, ಸಾವಯವ ಕೃಷಿ ಹಾಗೂ ಆರೋಗ್ಯಕರ ಆಹಾರದ ಅಗತ್ಯತೆಯನ್ನು ಮಕ್ಕಳಿಗೆ ತಿಳಿಹೇಳಬೇಕಾದ ಜವಾಬ್ದಾರಿ ನಮ್ಮದೆ ಎಂದು ಕರೆ ನೀಡಿದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…