ಸಾವಯವ ಕೃಷಿ ಇಂದಿನ ಅವಶ್ಯಕತೆಯೇ ಆಗಿದೆ ಎಂದು ‘ಭಾರತದ ಗ್ರೀನ್ ಹೀರೋ’ ಎಂದು ಖ್ಯಾತರಾಗಿರುವ ಆರ್.ಕೆ. ನಾಯರ್ ಅಭಿಪ್ರಾಯಪಟ್ಟಿದ್ದಾರೆ.
ಸಾವಯವ ಕೃಷಿಕ ಗ್ರಾಹಕ ಬಳಗದ ವತಿಯಿಂದ ಮಂಗಳೂರಿನಲ್ಲಿ ಆಯೋಜಿಸಲಾದ ‘ವ್ಯಸ್ತ ಜೀವನ – ಸ್ವಸ್ಥ ಭೋಜನ’ ಆರೋಗ್ಯಕ್ಕಾಗಿ ಪಾರಂಪರಿಕ ಆಹಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾವು ಪ್ರಕೃತಿಗೆ ಏನು ಕೊಡುತ್ತೇವೆಯೋ ಅದೇ ನಮಗೆ ವಾಪಾಸಾಗಿ ಸಿಗುತ್ತದೆ ಎಂದು ಹೇಳಿದರು.
ಪ್ರಕೃತಿಯ ಮಡಿಲಿಗೆ ವಿಷವನ್ನು ಹಾಕಿದ ಪರಿಣಾಮವಾಗಿ ಇಂದು ನಾವು ತಿನ್ನುವ ಆಹಾರ, ಕುಡಿಯುವ ನೀರು, ಇರುವ ಮಣ್ಣು ಮತ್ತು ಉಸಿರಾಡುವ ಗಾಳಿಯೂ ವಿಷಪೂರಿತವಾಗಿದೆ ಎಂದು ಎಚ್ಚರಿಸಿದರು. ನಾವು ಬದಲಾದರೆ ಮಾತ್ರ ವ್ಯವಸ್ಥೆ ಬದಲಾಗುತ್ತದೆ; ಆಗ ಗ್ರಾಮ, ರಾಜ್ಯ ಮತ್ತು ದೇಶವೂ ಬದಲಾಗಬಹುದು ಎಂದು ಅವರು ತಿಳಿಸಿದರು.
ಇನ್ನು ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಹೇಳಿದ ಆರ್.ಕೆ. ನಾಯರ್, ಸಾವಯವ ಕೃಷಿ ಹಾಗೂ ಆರೋಗ್ಯಕರ ಆಹಾರದ ಅಗತ್ಯತೆಯನ್ನು ಮಕ್ಕಳಿಗೆ ತಿಳಿಹೇಳಬೇಕಾದ ಜವಾಬ್ದಾರಿ ನಮ್ಮದೆ ಎಂದು ಕರೆ ನೀಡಿದರು.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…