‘ಸಾವಯವ’ ಪರಸ್ಪರ ಪೋಷಿಸುವ ಪ್ರಾಕೃತಿಕ ಸ್ವರೂಪ | ಅದನ್ನು ರಾಸಾಯನಿಕ ಜೊತೆ ಮಿಳಿತಗೊಳಿಸದಿರಿ..

February 9, 2024
12:18 PM
ಸಾವಯವ' ಅನ್ನುವುದು ಪ್ರಾಕೃತಿಕ ಸಂಬಂಧ. ಈ ಬಗ್ಗೆ ಆ ಶ್ರೀ ಆನಂದ ಅವರ ಬರಹ ಇಲ್ಲಿದೆ..

‘ಅಪಾಯಕಾರಿ ರಾಸಾಯನಿಕಗಳ(Chemical) ಬದಲು ಹಲವು ಸಾವಯವ(Organic) ಪರ್ಯಾಯಗಳಿವೆ’ ಎಂಬ ಮಾತು ಸಾವಯವ ಚಿಂತನಗಳಲ್ಲಿ ಕೇಳುತ್ತೇವೆ. ಕೃತಕ ಅಪಾಯಕಾರಿ(Danger) ರಾಸಾಯನಿಕಗಳ ಬದಲು ಅಷ್ಟೇ ಅಪಾಯಕಾರಿಯಾಗಿರುವ ಸಾವಯವ ಪರ್ಯಾಯಗಳನ್ನು ಹುಡುಕುವುದು ಸಾವಯವದ ಮೂಲ ಆಶಯ ಅಲ್ಲ. ‘ಸಾವಯವ’ ಪರಸ್ಪರ ಪೋಷಿಸುವ ಪ್ರಾಕೃತಿಕ ಸ್ವರೂಪ(Natural).

‘ಸಾವಯವ’ ಅನ್ನುವುದು ಪ್ರಾಕೃತಿಕ ಸಂಬಂಧಗಳನ್ನು -ಗುಣಗಳನ್ನು ಅರಿವಿಗೆ ತರುವ-ಅವೆಲ್ಲವುಗಳ ಜೊತೆ ಅವಿನಾಭಾವತೆ ಅರಳಿಸುವ-ಉಳಿಸುವ ವಿಶಿಷ್ಠ ಜೀವಕಲೆ. – ಗೋಮೂತ್ರ-ಗೋಮಯವನ್ನೇ ಹಾಕಿ ಬೆಳೆದು ಕೊನೆಯಲ್ಲಿ ‘ನಾನೇ ಬೆಳೆದದ್ದು’, ‘ನನ್ನ ಕ್ಷೇತ್ರದ ಇಳುವರಿ ಇಷ್ಟು’ ಎಂದು ಬೀಗುವ ಮಾತು ‘ಸಾವಯವ’ ಆದೀತೆ ? – ‘ನಾವು ಬೆಳೆದೆವು-ನಮ್ಮಲ್ಲಿ ಬೆಳೆಯಿತು – ಪ್ರಕೃತಿ ಬೆಳೆಸಿತು’ ಎನ್ನುವ ಮಾತುಗಳು ‘ಸಾವಯವ’. ಉಪಕೃತಭಾವದ ಮಾತು ‘ಸಾವಯವ’. – ವಿನೀತಭಾವದಿಂದ ಬೆಳೆದ ಬೆಳೆಗೆ ಪ್ರಕೃತಿ ಕೊಡುವ ಪ್ರಮಾಣ ‘ಸಾವಯವ’. – ‘ರಾಸಾಯನಿಕ ರಹಿತ’ ಎನ್ನುವುದಷ್ಟಕ್ಕೆ ‘ಸಾವಯವ’ ಸೀಮಿತವಾದ್ದಲ್ಲ. – ‘ಸಾವಯವ’ ಎನ್ನುವುದು ನಮ್ಮನ್ನು ಹಿರಿದು ಮಾಡುವ ಮಾತು. ಎಲ್ಲದರೊಳಗೊಂದು ಮಾಡುವ ಮಾತು. ‘ನಾನು’ ಎಂಬ ಭಾವವನ್ನು ಅಳಿಸುವ ಮಾತು. ‘ನಾವು’ ಎಂಬ ಪ್ರಜ್ಞೆಯನ್ನು ಪೋಷಿಸುವ ಮಾತು. – ‘ನಾನು’ ಎನ್ನುವುದೆ ರಾಸಾಯನಿಕ. ‘ನಾವು’ ಎನ್ನುವುದು ‘ಸಾವಯವ’. ದೃಷ್ಟಿ ಸರಿಯಿರದೆ ನೋಟ ಸರಿಯಾಗುವುದೆ ? ಎಂಬ ಪ್ರಶ್ನೆ ಹಲವು ಸಾವಯವ ಗೋಷ್ಠಿಗಳಲ್ಲಿ ಕಾಡುತ್ತಿರುತ್ತದೆ…

ಬರಹ :
ಆನಂದ ಆ. ಶ್ರೀ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-05-2026 | ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ – ಮೇ 30ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ
May 22, 2026
1:14 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror