‘ಅಪಾಯಕಾರಿ ರಾಸಾಯನಿಕಗಳ(Chemical) ಬದಲು ಹಲವು ಸಾವಯವ(Organic) ಪರ್ಯಾಯಗಳಿವೆ’ ಎಂಬ ಮಾತು ಸಾವಯವ ಚಿಂತನಗಳಲ್ಲಿ ಕೇಳುತ್ತೇವೆ. ಕೃತಕ ಅಪಾಯಕಾರಿ(Danger) ರಾಸಾಯನಿಕಗಳ ಬದಲು ಅಷ್ಟೇ ಅಪಾಯಕಾರಿಯಾಗಿರುವ ಸಾವಯವ ಪರ್ಯಾಯಗಳನ್ನು ಹುಡುಕುವುದು ಸಾವಯವದ ಮೂಲ ಆಶಯ ಅಲ್ಲ. ‘ಸಾವಯವ’ ಪರಸ್ಪರ ಪೋಷಿಸುವ ಪ್ರಾಕೃತಿಕ ಸ್ವರೂಪ(Natural).
‘ಸಾವಯವ’ ಅನ್ನುವುದು ಪ್ರಾಕೃತಿಕ ಸಂಬಂಧಗಳನ್ನು -ಗುಣಗಳನ್ನು ಅರಿವಿಗೆ ತರುವ-ಅವೆಲ್ಲವುಗಳ ಜೊತೆ ಅವಿನಾಭಾವತೆ ಅರಳಿಸುವ-ಉಳಿಸುವ ವಿಶಿಷ್ಠ ಜೀವಕಲೆ. – ಗೋಮೂತ್ರ-ಗೋಮಯವನ್ನೇ ಹಾಕಿ ಬೆಳೆದು ಕೊನೆಯಲ್ಲಿ ‘ನಾನೇ ಬೆಳೆದದ್ದು’, ‘ನನ್ನ ಕ್ಷೇತ್ರದ ಇಳುವರಿ ಇಷ್ಟು’ ಎಂದು ಬೀಗುವ ಮಾತು ‘ಸಾವಯವ’ ಆದೀತೆ ? – ‘ನಾವು ಬೆಳೆದೆವು-ನಮ್ಮಲ್ಲಿ ಬೆಳೆಯಿತು – ಪ್ರಕೃತಿ ಬೆಳೆಸಿತು’ ಎನ್ನುವ ಮಾತುಗಳು ‘ಸಾವಯವ’. ಉಪಕೃತಭಾವದ ಮಾತು ‘ಸಾವಯವ’. – ವಿನೀತಭಾವದಿಂದ ಬೆಳೆದ ಬೆಳೆಗೆ ಪ್ರಕೃತಿ ಕೊಡುವ ಪ್ರಮಾಣ ‘ಸಾವಯವ’. – ‘ರಾಸಾಯನಿಕ ರಹಿತ’ ಎನ್ನುವುದಷ್ಟಕ್ಕೆ ‘ಸಾವಯವ’ ಸೀಮಿತವಾದ್ದಲ್ಲ. – ‘ಸಾವಯವ’ ಎನ್ನುವುದು ನಮ್ಮನ್ನು ಹಿರಿದು ಮಾಡುವ ಮಾತು. ಎಲ್ಲದರೊಳಗೊಂದು ಮಾಡುವ ಮಾತು. ‘ನಾನು’ ಎಂಬ ಭಾವವನ್ನು ಅಳಿಸುವ ಮಾತು. ‘ನಾವು’ ಎಂಬ ಪ್ರಜ್ಞೆಯನ್ನು ಪೋಷಿಸುವ ಮಾತು. – ‘ನಾನು’ ಎನ್ನುವುದೆ ರಾಸಾಯನಿಕ. ‘ನಾವು’ ಎನ್ನುವುದು ‘ಸಾವಯವ’. ದೃಷ್ಟಿ ಸರಿಯಿರದೆ ನೋಟ ಸರಿಯಾಗುವುದೆ ? ಎಂಬ ಪ್ರಶ್ನೆ ಹಲವು ಸಾವಯವ ಗೋಷ್ಠಿಗಳಲ್ಲಿ ಕಾಡುತ್ತಿರುತ್ತದೆ…
ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು…
ನೈಸರ್ಗಿಕ ರಬ್ಬರ್ ಮತ್ತು ಅದರ ಉತ್ಪನ್ನಗಳು ಅರಣ್ಯನಾಶ ಮುಕ್ತ ನಿಯಮಗಳಿಗಾಗಿ ಯುರೋಪಿಯನ್ ಒಕ್ಕೂಟ…
ಮುನ್ಸೂಚನೆಯಂತೆ ಮೇ 1 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಖಾಸಗಿಯವರಿಂದ ಒತ್ತುವರಿಯಾಗಿರುವ ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ…
ಭಾರತವು 4.8 ಟನ್ ಲಸಿಕೆಗಳನ್ನು ಅಫ್ಘಾನಿಸ್ತಾನಕ್ಕೆಕಳುಹಿಸುವ ಮೂಲಕ ಮಾನವೀಯ ನೆರವು ನೀಡಿದೆ. ಇದರಲ್ಲಿ…
ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದು, ಭ್ರಷ್ಟಾಚಾರದ ವಿರುದ್ಧ…