‘ಅಪಾಯಕಾರಿ ರಾಸಾಯನಿಕಗಳ(Chemical) ಬದಲು ಹಲವು ಸಾವಯವ(Organic) ಪರ್ಯಾಯಗಳಿವೆ’ ಎಂಬ ಮಾತು ಸಾವಯವ ಚಿಂತನಗಳಲ್ಲಿ ಕೇಳುತ್ತೇವೆ. ಕೃತಕ ಅಪಾಯಕಾರಿ(Danger) ರಾಸಾಯನಿಕಗಳ ಬದಲು ಅಷ್ಟೇ ಅಪಾಯಕಾರಿಯಾಗಿರುವ ಸಾವಯವ ಪರ್ಯಾಯಗಳನ್ನು ಹುಡುಕುವುದು ಸಾವಯವದ ಮೂಲ ಆಶಯ ಅಲ್ಲ. ‘ಸಾವಯವ’ ಪರಸ್ಪರ ಪೋಷಿಸುವ ಪ್ರಾಕೃತಿಕ ಸ್ವರೂಪ(Natural).
‘ಸಾವಯವ’ ಅನ್ನುವುದು ಪ್ರಾಕೃತಿಕ ಸಂಬಂಧಗಳನ್ನು -ಗುಣಗಳನ್ನು ಅರಿವಿಗೆ ತರುವ-ಅವೆಲ್ಲವುಗಳ ಜೊತೆ ಅವಿನಾಭಾವತೆ ಅರಳಿಸುವ-ಉಳಿಸುವ ವಿಶಿಷ್ಠ ಜೀವಕಲೆ. – ಗೋಮೂತ್ರ-ಗೋಮಯವನ್ನೇ ಹಾಕಿ ಬೆಳೆದು ಕೊನೆಯಲ್ಲಿ ‘ನಾನೇ ಬೆಳೆದದ್ದು’, ‘ನನ್ನ ಕ್ಷೇತ್ರದ ಇಳುವರಿ ಇಷ್ಟು’ ಎಂದು ಬೀಗುವ ಮಾತು ‘ಸಾವಯವ’ ಆದೀತೆ ? – ‘ನಾವು ಬೆಳೆದೆವು-ನಮ್ಮಲ್ಲಿ ಬೆಳೆಯಿತು – ಪ್ರಕೃತಿ ಬೆಳೆಸಿತು’ ಎನ್ನುವ ಮಾತುಗಳು ‘ಸಾವಯವ’. ಉಪಕೃತಭಾವದ ಮಾತು ‘ಸಾವಯವ’. – ವಿನೀತಭಾವದಿಂದ ಬೆಳೆದ ಬೆಳೆಗೆ ಪ್ರಕೃತಿ ಕೊಡುವ ಪ್ರಮಾಣ ‘ಸಾವಯವ’. – ‘ರಾಸಾಯನಿಕ ರಹಿತ’ ಎನ್ನುವುದಷ್ಟಕ್ಕೆ ‘ಸಾವಯವ’ ಸೀಮಿತವಾದ್ದಲ್ಲ. – ‘ಸಾವಯವ’ ಎನ್ನುವುದು ನಮ್ಮನ್ನು ಹಿರಿದು ಮಾಡುವ ಮಾತು. ಎಲ್ಲದರೊಳಗೊಂದು ಮಾಡುವ ಮಾತು. ‘ನಾನು’ ಎಂಬ ಭಾವವನ್ನು ಅಳಿಸುವ ಮಾತು. ‘ನಾವು’ ಎಂಬ ಪ್ರಜ್ಞೆಯನ್ನು ಪೋಷಿಸುವ ಮಾತು. – ‘ನಾನು’ ಎನ್ನುವುದೆ ರಾಸಾಯನಿಕ. ‘ನಾವು’ ಎನ್ನುವುದು ‘ಸಾವಯವ’. ದೃಷ್ಟಿ ಸರಿಯಿರದೆ ನೋಟ ಸರಿಯಾಗುವುದೆ ? ಎಂಬ ಪ್ರಶ್ನೆ ಹಲವು ಸಾವಯವ ಗೋಷ್ಠಿಗಳಲ್ಲಿ ಕಾಡುತ್ತಿರುತ್ತದೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…