Advertisement
Opinion

‘ಸಾವಯವ’ ಪರಸ್ಪರ ಪೋಷಿಸುವ ಪ್ರಾಕೃತಿಕ ಸ್ವರೂಪ | ಅದನ್ನು ರಾಸಾಯನಿಕ ಜೊತೆ ಮಿಳಿತಗೊಳಿಸದಿರಿ..

Share

‘ಅಪಾಯಕಾರಿ ರಾಸಾಯನಿಕಗಳ(Chemical) ಬದಲು ಹಲವು ಸಾವಯವ(Organic) ಪರ್ಯಾಯಗಳಿವೆ’ ಎಂಬ ಮಾತು ಸಾವಯವ ಚಿಂತನಗಳಲ್ಲಿ ಕೇಳುತ್ತೇವೆ. ಕೃತಕ ಅಪಾಯಕಾರಿ(Danger) ರಾಸಾಯನಿಕಗಳ ಬದಲು ಅಷ್ಟೇ ಅಪಾಯಕಾರಿಯಾಗಿರುವ ಸಾವಯವ ಪರ್ಯಾಯಗಳನ್ನು ಹುಡುಕುವುದು ಸಾವಯವದ ಮೂಲ ಆಶಯ ಅಲ್ಲ. ‘ಸಾವಯವ’ ಪರಸ್ಪರ ಪೋಷಿಸುವ ಪ್ರಾಕೃತಿಕ ಸ್ವರೂಪ(Natural).

‘ಸಾವಯವ’ ಅನ್ನುವುದು ಪ್ರಾಕೃತಿಕ ಸಂಬಂಧಗಳನ್ನು -ಗುಣಗಳನ್ನು ಅರಿವಿಗೆ ತರುವ-ಅವೆಲ್ಲವುಗಳ ಜೊತೆ ಅವಿನಾಭಾವತೆ ಅರಳಿಸುವ-ಉಳಿಸುವ ವಿಶಿಷ್ಠ ಜೀವಕಲೆ. – ಗೋಮೂತ್ರ-ಗೋಮಯವನ್ನೇ ಹಾಕಿ ಬೆಳೆದು ಕೊನೆಯಲ್ಲಿ ‘ನಾನೇ ಬೆಳೆದದ್ದು’, ‘ನನ್ನ ಕ್ಷೇತ್ರದ ಇಳುವರಿ ಇಷ್ಟು’ ಎಂದು ಬೀಗುವ ಮಾತು ‘ಸಾವಯವ’ ಆದೀತೆ ? – ‘ನಾವು ಬೆಳೆದೆವು-ನಮ್ಮಲ್ಲಿ ಬೆಳೆಯಿತು – ಪ್ರಕೃತಿ ಬೆಳೆಸಿತು’ ಎನ್ನುವ ಮಾತುಗಳು ‘ಸಾವಯವ’. ಉಪಕೃತಭಾವದ ಮಾತು ‘ಸಾವಯವ’. – ವಿನೀತಭಾವದಿಂದ ಬೆಳೆದ ಬೆಳೆಗೆ ಪ್ರಕೃತಿ ಕೊಡುವ ಪ್ರಮಾಣ ‘ಸಾವಯವ’. – ‘ರಾಸಾಯನಿಕ ರಹಿತ’ ಎನ್ನುವುದಷ್ಟಕ್ಕೆ ‘ಸಾವಯವ’ ಸೀಮಿತವಾದ್ದಲ್ಲ. – ‘ಸಾವಯವ’ ಎನ್ನುವುದು ನಮ್ಮನ್ನು ಹಿರಿದು ಮಾಡುವ ಮಾತು. ಎಲ್ಲದರೊಳಗೊಂದು ಮಾಡುವ ಮಾತು. ‘ನಾನು’ ಎಂಬ ಭಾವವನ್ನು ಅಳಿಸುವ ಮಾತು. ‘ನಾವು’ ಎಂಬ ಪ್ರಜ್ಞೆಯನ್ನು ಪೋಷಿಸುವ ಮಾತು. – ‘ನಾನು’ ಎನ್ನುವುದೆ ರಾಸಾಯನಿಕ. ‘ನಾವು’ ಎನ್ನುವುದು ‘ಸಾವಯವ’. ದೃಷ್ಟಿ ಸರಿಯಿರದೆ ನೋಟ ಸರಿಯಾಗುವುದೆ ? ಎಂಬ ಪ್ರಶ್ನೆ ಹಲವು ಸಾವಯವ ಗೋಷ್ಠಿಗಳಲ್ಲಿ ಕಾಡುತ್ತಿರುತ್ತದೆ…

ಬರಹ :
ಆನಂದ ಆ. ಶ್ರೀ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

14 minutes ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

14 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

18 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

1 day ago

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

1 day ago