Advertisement
Opinion

‘ಸಾವಯವ’ ಪರಸ್ಪರ ಪೋಷಿಸುವ ಪ್ರಾಕೃತಿಕ ಸ್ವರೂಪ | ಅದನ್ನು ರಾಸಾಯನಿಕ ಜೊತೆ ಮಿಳಿತಗೊಳಿಸದಿರಿ..

Share

‘ಅಪಾಯಕಾರಿ ರಾಸಾಯನಿಕಗಳ(Chemical) ಬದಲು ಹಲವು ಸಾವಯವ(Organic) ಪರ್ಯಾಯಗಳಿವೆ’ ಎಂಬ ಮಾತು ಸಾವಯವ ಚಿಂತನಗಳಲ್ಲಿ ಕೇಳುತ್ತೇವೆ. ಕೃತಕ ಅಪಾಯಕಾರಿ(Danger) ರಾಸಾಯನಿಕಗಳ ಬದಲು ಅಷ್ಟೇ ಅಪಾಯಕಾರಿಯಾಗಿರುವ ಸಾವಯವ ಪರ್ಯಾಯಗಳನ್ನು ಹುಡುಕುವುದು ಸಾವಯವದ ಮೂಲ ಆಶಯ ಅಲ್ಲ. ‘ಸಾವಯವ’ ಪರಸ್ಪರ ಪೋಷಿಸುವ ಪ್ರಾಕೃತಿಕ ಸ್ವರೂಪ(Natural).

‘ಸಾವಯವ’ ಅನ್ನುವುದು ಪ್ರಾಕೃತಿಕ ಸಂಬಂಧಗಳನ್ನು -ಗುಣಗಳನ್ನು ಅರಿವಿಗೆ ತರುವ-ಅವೆಲ್ಲವುಗಳ ಜೊತೆ ಅವಿನಾಭಾವತೆ ಅರಳಿಸುವ-ಉಳಿಸುವ ವಿಶಿಷ್ಠ ಜೀವಕಲೆ. – ಗೋಮೂತ್ರ-ಗೋಮಯವನ್ನೇ ಹಾಕಿ ಬೆಳೆದು ಕೊನೆಯಲ್ಲಿ ‘ನಾನೇ ಬೆಳೆದದ್ದು’, ‘ನನ್ನ ಕ್ಷೇತ್ರದ ಇಳುವರಿ ಇಷ್ಟು’ ಎಂದು ಬೀಗುವ ಮಾತು ‘ಸಾವಯವ’ ಆದೀತೆ ? – ‘ನಾವು ಬೆಳೆದೆವು-ನಮ್ಮಲ್ಲಿ ಬೆಳೆಯಿತು – ಪ್ರಕೃತಿ ಬೆಳೆಸಿತು’ ಎನ್ನುವ ಮಾತುಗಳು ‘ಸಾವಯವ’. ಉಪಕೃತಭಾವದ ಮಾತು ‘ಸಾವಯವ’. – ವಿನೀತಭಾವದಿಂದ ಬೆಳೆದ ಬೆಳೆಗೆ ಪ್ರಕೃತಿ ಕೊಡುವ ಪ್ರಮಾಣ ‘ಸಾವಯವ’. – ‘ರಾಸಾಯನಿಕ ರಹಿತ’ ಎನ್ನುವುದಷ್ಟಕ್ಕೆ ‘ಸಾವಯವ’ ಸೀಮಿತವಾದ್ದಲ್ಲ. – ‘ಸಾವಯವ’ ಎನ್ನುವುದು ನಮ್ಮನ್ನು ಹಿರಿದು ಮಾಡುವ ಮಾತು. ಎಲ್ಲದರೊಳಗೊಂದು ಮಾಡುವ ಮಾತು. ‘ನಾನು’ ಎಂಬ ಭಾವವನ್ನು ಅಳಿಸುವ ಮಾತು. ‘ನಾವು’ ಎಂಬ ಪ್ರಜ್ಞೆಯನ್ನು ಪೋಷಿಸುವ ಮಾತು. – ‘ನಾನು’ ಎನ್ನುವುದೆ ರಾಸಾಯನಿಕ. ‘ನಾವು’ ಎನ್ನುವುದು ‘ಸಾವಯವ’. ದೃಷ್ಟಿ ಸರಿಯಿರದೆ ನೋಟ ಸರಿಯಾಗುವುದೆ ? ಎಂಬ ಪ್ರಶ್ನೆ ಹಲವು ಸಾವಯವ ಗೋಷ್ಠಿಗಳಲ್ಲಿ ಕಾಡುತ್ತಿರುತ್ತದೆ…

ಬರಹ :
ಆನಂದ ಆ. ಶ್ರೀ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

2 hours ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

11 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

12 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

18 hours ago

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ…

19 hours ago

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

21 hours ago