Advertisement
ಸುದ್ದಿಗಳು

ತಾಲೂಕು ಮಟ್ಟದಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸಿ

Share

ಯುವನಿಧಿ ಯೋಜನೆಯಡಿಯಲ್ಲಿ ತಾಲೂಕು ಮಟ್ಟದಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸಬೇಕು. ಯುವನಿಧಿ ಬಗ್ಗೆ ಅರಿವು ಮೂಡಿಸಲು ಯುವಜನತೆಗೆ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು  ಎಂದು ದ ಕ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ಸೂಚಿಸಿದ್ದಾರೆ.

ಅವರು ಮಂಗಳವಾರ  ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ  ನಡೆದ ಜಿಲ್ಲಾ  ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಪ್ರಗತಿ ಪರಿಶೀಲನಾ ಸಭೆಯ  ಅಧ್ಯಕ್ಷತೆ ವಹಿಸಿ  ಮಾತನಾಡಿದರು. ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಲು ಸಮಸ್ಯೆಯಾದಲ್ಲಿ ಇಲಾಖೆ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಫಲಾನುಭವಿಗಳಿಗೆ  ನೆರವು ನೀಡಬೇಕು ಎಂದು ಸೂಚಿಸಿದ್ದಾರೆ. ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಟಾನ ಮಾಡಲು ಸಮಿತಿಯ ಎಲ್ಲಾ ಸದಸ್ಯರು ತಮ್ಮ ಹಂತದಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಎಂದು ಭರತ್‌ ಮುಂಡೋಡಿ ಹೇಳಿದರು.

ಅಪಘಾತ ತಡೆಗಟ್ಟಲು ಘಟಕಗಳಲ್ಲಿ ಚಾಲನಾ ಸಿಬ್ಬಂದಿಗಳಿಗೆ ಸುರಕ್ಷಿತ ಚಾಲನೆಯ ಕುರಿತು ನಿರಂತರವಾಗಿ ಸೂಕ್ತ ತಿಳುವಳಿಕೆಯನ್ನು ಈಗಾಗಲೇ ಘಟಕ/ವಿಭಾಗೀಯ ಮಟ್ಟದಲ್ಲಿ ನೀಡುತ್ತಾ ಬರುತ್ತಿದ್ದು ಹಾಗೂ ನಿಗಮದ ತರಬೇತಿ ಕೇಂದ್ರಗಳಲ್ಲಿಯೂ ಸಹ ತರಬೇತಿಗಳನ್ನು ನೀಡುವ ಮೂಲಕ ಅಗತ್ಯ ಕ್ರಮ ಕೈಗೊಳ್ಳಲಾಗಿರುತ್ತದೆ ಎಂದು  ಕೆ.ಎಸ್.ಆರ್.ಟಿ.ಸಿ  ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಕಾಂಟ್ರಾಕ್ಟ್ ಕ್ಯಾರೇಜ್ ಬಸ್ಸುಗಳು ಪರವಾನಗಿಯನ್ನು ದುರುಪಯೋಗ  ಪಡಿಸಿಕೊಂಡು  ಓಡಾಡುತ್ತಿದ್ದು,  ಬಸ್ಸಿನ ಪರವಾನಗಿಯನ್ನು ರದ್ದು ಮಾಡುವಂತೆ  ಹಾಗೂ ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಅಧ್ಯಕ್ಷರು ಸೂಚಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ನೇತೃತ್ವದಲ್ಲಿ ಮೈಸೂರು ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ ಮಾಡಲಾಯಿತು.


ಸಭೆಯಲ್ಲಿ  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ನರ್ವಾಡೆ ವಿನಾಯಕ್  ಕಾರ್ಭಾರಿ,  ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ  ಜಯಲಕ್ಷ್ಮಿ,  ಯೋಜನಾ ಅಂದಾಜು ಮತ್ತು ಮೌಲ್ಯಮಾಪನ ಅಧಿಕಾರಿ ಸುಷ್ಮಾ ಕೆ ಎಸ್,   ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಉಪಾಧ್ಯಕ್ಷ  ಜೋಕಿಂ ಡಿಸೋಜಾ, ಸುರೇಖಾ ಚಂದ್ರಹಾಸ್,  ಸದಸ್ಯರಾದ ಅರುಣ್ ಕುಮಾರ್ ಶೆಟ್ಟಿ, ಆಲ್ವಿನ್ ಕ್ಲೆಮೆಂಟ್ ಕುಟಿನ್ಹ, ಜಯಂತಿ ಬಿ. ಎ, ಶಾಹುಲ್ ಹಮೀದ್   ಕೆ, ಉಮಾನಾಥ್ ಶೆಟ್ಟಿ, ಬಿ ಪದ್ಮನಾಭ ಸಾಲ್ಯಾನ್ , ಸುರೇಂದ್ರ ಕಂಬಳಿ, ರಂಜಿತ್ ರೈ, ಆಲ್‍ಸ್ಟನ್ ಕ್ಲೈವ್ ಡಿಕುನ್ಹ, ವಿವಿಧ ಇಲಾಖಾಧಿಕಾರಿಗಳು  ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

7 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

1 day ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago