ಮೆದುಳು ನಿಷ್ಕ್ರಿಯಗೊಂಡ ಯುವತಿ ರಕ್ಷಿತಾಳ ಅಂಗಾಗ ದಾನ ಮಾಡಿದ ಪೋಷಕರು | ಚಿಕ್ಕಮಗಳೂರು ಆಸ್ಪತ್ರೆಯಿಂದ ಹೃದಯ ಬೆಂಗಳೂರಿಗೆ ಏರ್ ಲಿಫ್ಟ್ | 9 ಜನರಿಗೆ ಅಂಗಾಂಗ ಕಸಿ |

September 22, 2022
3:18 PM

ಬಸ್ಸಿಂದ ಕೆಳಗೆ ಬಿದ್ದು ಮೆದುಳು ನಿಷ್ಕ್ರಿಯಗೊಂಡ  ಚಿಕ್ಕಮಗಳೂರಿನ ಕಾಲೇಜು ವಿದ್ಯಾರ್ಥಿನಿ ರಕ್ಷಿತಾಳ ಅಂಗಾಗ ದಾನ(Organ Donation) ಮಾಡಲು ಪೋಷಕರು ನಿರ್ಧರಿಸಿದ್ದರು. ಇದೀಗ ಗುರುವಾರ ರಕ್ಷಿತಾಳ ಹೃದಯ ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಯಿಂದ ಬೆಂಗಳೂರಿಗೆ ಏರ್​ಲಿಫ್ಟ್ ಮಾಡಲಾಯಿತು. ಯುವತಿಯ 9 ಅಂಗಗಳನ್ನು ಪೋಷಕರು ದಾನ ಮಾಡಿದ್ದು, ಒಂಭತ್ತು ಜನರಿಗೆ ಅಂಗಾಂಗ ಕಸಿ ಮಾಡಲಾಗುತ್ತದೆ.

ಹೃದಯ, ಶ್ವಾಸಕೋಶ, ಕಿಡ್ನಿ, ಯಕೃತ್ತು, ಕಣ್ಣುಗಳನ್ನು ಹೆಲಿಕಾಪ್ಟರ್ ಒಂದರಲ್ಲಿ ಬೆಂಗಳೂರಿಗೆ ತೆಗೆದುಕೊಂಡು ಹೋದರೆ , ಕಿಡ್ನಿಗಳನ್ನು ಆಂಬ್ಯುಲೆನ್ಸ್ ಮೂಲಕ ಮಂಗಳೂರಿಗೆ ರವಾನೆ ಮಾಡಲಾಗಿದೆ. ಚಿಕ್ಕಮಗಳೂರಿನಿಂದ ಮೂಡಿಗೆರೆ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಉಜಿರೆ, ಬೆಳ್ತಂಗಡಿ ಮಾರ್ಗವಾಗಿ ಮಂಗಳೂರು ತಲುಪಲಿದೆ.

ಸಾರಿಗೆ ಬಸ್ ನಿರ್ವಾಹಕನ ಬೇಜವಾಬ್ದಾರಿತನಕ್ಕೆ ಯುವತಿ ರಕ್ಷಿತಾ ಬಸ್​ನಿಂದ ಕೆಳಗೆ ಬಿದ್ದು ಮೆದುಳು ಸಂಪೂರ್ಣ ನಿಷ್ಕ್ರಿಯಗೊಂಡಿತ್ತು.ರಕ್ಷಿತಾ ಕಡೂರು ತಾಲೂಕಿನ ಸೋಮನಹಳ್ಳಿಯ ತಾಂಡಾದ ರಕ್ಷಿತಾ ಬಸವನಹಳ್ಳಿ ಸರ್ಕಾರಿ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಇವರು ಕಡೂರು ತಾಲೂಕಿನ ಸೋಮನಹಳ್ಳಿ ತಾಂಡ್ಯಾದ ಶೇಖರ್ ನಾಯ್ಕ್ ಹಾಗೂ ಲಕ್ಷ್ಮಿ ದಂಪತಿಯ ಪುತ್ರಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!
July 9, 2026
2:37 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ..! ಜುಲೈ 11 ರಿಂದ ಮಳೆ ಮತ್ತಷ್ಟು ಇಳಿಕೆ, ಬಿಸಿಲಿನ ಅವಧಿ ಹೆಚ್ಚಳ ಸಾಧ್ಯ
July 9, 2026
1:18 PM
by: ಸಾಯಿಶೇಖರ್ ಕರಿಕಳ
ಜುಲೈ ಮಳೆಯಿಂದ ದೇಶಕ್ಕೆ ನೆಮ್ಮದಿ…! ಮಳೆ ಕೊರತೆ 12%ಕ್ಕೆ ಇಳಿಕೆ
July 9, 2026
1:04 PM
by: ದ ರೂರಲ್ ಮಿರರ್.ಕಾಂ
ಇಂಧನಕ್ಕೂ ರೈತನೇ ಆಧಾರ…! ಇಥೆನಾಲ್‌ ಯೋಜನೆಯಿಂದ ರೈತರಿಗೆ ₹1.6 ಲಕ್ಷ ಕೋಟಿ ಹೆಚ್ಚುವರಿ ಆದಾಯ
July 9, 2026
12:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror