Advertisement
ರಾಜ್ಯ

ಮೆದುಳು ನಿಷ್ಕ್ರಿಯಗೊಂಡ ಯುವತಿ ರಕ್ಷಿತಾಳ ಅಂಗಾಗ ದಾನ ಮಾಡಿದ ಪೋಷಕರು | ಚಿಕ್ಕಮಗಳೂರು ಆಸ್ಪತ್ರೆಯಿಂದ ಹೃದಯ ಬೆಂಗಳೂರಿಗೆ ಏರ್ ಲಿಫ್ಟ್ | 9 ಜನರಿಗೆ ಅಂಗಾಂಗ ಕಸಿ |

Share

ಬಸ್ಸಿಂದ ಕೆಳಗೆ ಬಿದ್ದು ಮೆದುಳು ನಿಷ್ಕ್ರಿಯಗೊಂಡ  ಚಿಕ್ಕಮಗಳೂರಿನ ಕಾಲೇಜು ವಿದ್ಯಾರ್ಥಿನಿ ರಕ್ಷಿತಾಳ ಅಂಗಾಗ ದಾನ(Organ Donation) ಮಾಡಲು ಪೋಷಕರು ನಿರ್ಧರಿಸಿದ್ದರು. ಇದೀಗ ಗುರುವಾರ ರಕ್ಷಿತಾಳ ಹೃದಯ ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಯಿಂದ ಬೆಂಗಳೂರಿಗೆ ಏರ್​ಲಿಫ್ಟ್ ಮಾಡಲಾಯಿತು. ಯುವತಿಯ 9 ಅಂಗಗಳನ್ನು ಪೋಷಕರು ದಾನ ಮಾಡಿದ್ದು, ಒಂಭತ್ತು ಜನರಿಗೆ ಅಂಗಾಂಗ ಕಸಿ ಮಾಡಲಾಗುತ್ತದೆ.

Advertisement

ಹೃದಯ, ಶ್ವಾಸಕೋಶ, ಕಿಡ್ನಿ, ಯಕೃತ್ತು, ಕಣ್ಣುಗಳನ್ನು ಹೆಲಿಕಾಪ್ಟರ್ ಒಂದರಲ್ಲಿ ಬೆಂಗಳೂರಿಗೆ ತೆಗೆದುಕೊಂಡು ಹೋದರೆ , ಕಿಡ್ನಿಗಳನ್ನು ಆಂಬ್ಯುಲೆನ್ಸ್ ಮೂಲಕ ಮಂಗಳೂರಿಗೆ ರವಾನೆ ಮಾಡಲಾಗಿದೆ. ಚಿಕ್ಕಮಗಳೂರಿನಿಂದ ಮೂಡಿಗೆರೆ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಉಜಿರೆ, ಬೆಳ್ತಂಗಡಿ ಮಾರ್ಗವಾಗಿ ಮಂಗಳೂರು ತಲುಪಲಿದೆ.

ಸಾರಿಗೆ ಬಸ್ ನಿರ್ವಾಹಕನ ಬೇಜವಾಬ್ದಾರಿತನಕ್ಕೆ ಯುವತಿ ರಕ್ಷಿತಾ ಬಸ್​ನಿಂದ ಕೆಳಗೆ ಬಿದ್ದು ಮೆದುಳು ಸಂಪೂರ್ಣ ನಿಷ್ಕ್ರಿಯಗೊಂಡಿತ್ತು.ರಕ್ಷಿತಾ ಕಡೂರು ತಾಲೂಕಿನ ಸೋಮನಹಳ್ಳಿಯ ತಾಂಡಾದ ರಕ್ಷಿತಾ ಬಸವನಹಳ್ಳಿ ಸರ್ಕಾರಿ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಇವರು ಕಡೂರು ತಾಲೂಕಿನ ಸೋಮನಹಳ್ಳಿ ತಾಂಡ್ಯಾದ ಶೇಖರ್ ನಾಯ್ಕ್ ಹಾಗೂ ಲಕ್ಷ್ಮಿ ದಂಪತಿಯ ಪುತ್ರಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

2 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 day ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

1 day ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

1 day ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

1 day ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

1 day ago