ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ. ಮಳೆಗಾಲ ಬಂದರೆ ಸಾಕು ತೋಟಕ್ಕೆ ಗಾಡಿ ಅಂದರೆ ಟ್ರಾಕ್ಟರ್ ಹೋಗಲು ಸಾಧ್ಯವಿಲ್ಲದೆ ಸಂಕಟ ಪಡಬೇಕಾಗುತ್ತದೆ. ಈಗ ಈ ಎಲ್ಲಾ ಸಮಸ್ಯೆಗಳಿಗೂ ರಾಜ್ಯ ಸರ್ಕಾರವೂ ಹೊಸ ಯೋಜನೆಯನ್ನು ಜಾರಿಗೊಳಿಸಿದೆ.
ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಮತ್ತು ರಾಜ್ಯ ಸರ್ಕಾರ ಅನುದಾನ ಸೇರಿ ನಮ್ಮ ಹೊಲ- ನಮ್ಮ ದಾರಿ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯ ಮೂಲಕ ಪ್ರತಿ 1 ಕಿ.ಮಿ ರಸ್ತೆ ನಿರ್ಮಾಣಕ್ಕೆ ಸರ್ಕಾರ ಒಟ್ಟು ರೂ 12.50 ಲಕ್ಷ ಖರ್ಚು ಮಾಡಲಾಗುತ್ತದೆ. ಕನಿಷ್ಠ3.75 ಮೀಟರ್ ಆಗಲದ ರಸ್ತೆ ನಿರ್ಮಾಣ ಮಾಡಲಾಗುತ್ತದೆ. ಇದರಿಂದ ಲಾರಿ, ಟ್ರ್ಯಾಕ್ಟರ್ ಸುಲಭವಾಗಿ ಹೊಲಕ್ಕೆ ಹೋಗಬಹುದು.
ಆದರೆ, ಈ ಯೋಜನೆಯನ್ನು ಆಯಾ ರೈತನ ಜಮೀನಿನಲ್ಲೇ ಮಾಡಲಾಗುತ್ತದೆ. ಯಾವುದೇ ಕಾರಣಕ್ಕೂ ದಾರಿಗಾಗಿ ಜಮೀನು ನೀಡುವ ರೈತನಿಗೆ ಸರ್ಕಾರದಿಂದ ಯಾವುದೇ ಹಣ ಸಿಗುವುದಿಲ್ಲ. ಆತ ಸ್ವ ಇಚ್ಛೆಯಿಂದ ಉಪನೋಂದಣಾಧಿಕಾರಿ ಕಚೇರಿಯಲ್ಲಿ ನೋಂದಾಯಿತ ದಾನ ಪತ್ರ ಮೂಲಕ ಜಾಗವನ್ನು ಗ್ರಾಮ ಪಂಚಾಯಿತಿ ಹೆಸರಿಗೆ ಬರೆದುಕೊಡಬೇಕು. ಅರ್ಜಿ ಯನ್ನು ಸಲ್ಲಿಸಲು ಪಂಚಾಯಿತಿಗೆ ಹೋಗಬೇಕು ವಿನಾಃ ಯಾವುದೇ ಆನ್ ಲೈನ್ ನಿಯಮವಿಲ್ಲ. ಈ ಯೋಜನೆಯನ್ನು ಜಾರಿಗೊಳಿಸಲು ನೀವೇ ಸ್ವತಃ ಕ್ಷೇತ್ರದ ಶಾಸಕರನ್ನು ಭೇಟಿ ಮಾಡಬೇಕಾಗುತ್ತದೆ.
ಬೇಕಾಗುವ ದಾಖಲೆಗಳು:
• ರೈತರ ಅರ್ಜಿ
• ಪಹಣಿ
• ಗ್ರಾಮ ನಕ್ಷೆ
• ಆಧಾರ್ ಕಾರ್ಡ್
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…