Advertisement
ಸುದ್ದಿಗಳು

ನಮ್ಮ ಹೊಲ ನಮ್ಮ ದಾರಿ : ರಸ್ತೆಗೆ 12.5 ಲಕ್ಷ ಸಹಾಯಧನ

Share

ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ. ಮಳೆಗಾಲ ಬಂದರೆ ಸಾಕು ತೋಟಕ್ಕೆ ಗಾಡಿ ಅಂದರೆ ಟ್ರಾಕ್ಟರ್ ಹೋಗಲು ಸಾಧ್ಯವಿಲ್ಲದೆ ಸಂಕಟ ಪಡಬೇಕಾಗುತ್ತದೆ.  ಈಗ ಈ ಎಲ್ಲಾ ಸಮಸ್ಯೆಗಳಿಗೂ ರಾಜ್ಯ ಸರ್ಕಾರವೂ ಹೊಸ ಯೋಜನೆಯನ್ನು ಜಾರಿಗೊಳಿಸಿದೆ.

ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಮತ್ತು ರಾಜ್ಯ ಸರ್ಕಾರ ಅನುದಾನ ಸೇರಿ ನಮ್ಮ ಹೊಲ- ನಮ್ಮ ದಾರಿ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯ ಮೂಲಕ ಪ್ರತಿ 1 ಕಿ.ಮಿ ರಸ್ತೆ ನಿರ್ಮಾಣಕ್ಕೆ ಸರ್ಕಾರ ಒಟ್ಟು ರೂ 12.50 ಲಕ್ಷ ಖರ್ಚು ಮಾಡಲಾಗುತ್ತದೆ. ಕನಿಷ್ಠ3.75 ಮೀಟರ್ ಆಗಲದ ರಸ್ತೆ ನಿರ್ಮಾಣ ಮಾಡಲಾಗುತ್ತದೆ. ಇದರಿಂದ ಲಾರಿ, ಟ್ರ್ಯಾಕ್ಟರ್ ಸುಲಭವಾಗಿ ಹೊಲಕ್ಕೆ ಹೋಗಬಹುದು.

ಆದರೆ, ಈ ಯೋಜನೆಯನ್ನು ಆಯಾ ರೈತನ ಜಮೀನಿನಲ್ಲೇ ಮಾಡಲಾಗುತ್ತದೆ. ಯಾವುದೇ ಕಾರಣಕ್ಕೂ ದಾರಿಗಾಗಿ ಜಮೀನು ನೀಡುವ ರೈತನಿಗೆ ಸರ್ಕಾರದಿಂದ ಯಾವುದೇ ಹಣ ಸಿಗುವುದಿಲ್ಲ. ಆತ ಸ್ವ ಇಚ್ಛೆಯಿಂದ ಉಪನೋಂದಣಾಧಿಕಾರಿ ಕಚೇರಿಯಲ್ಲಿ ನೋಂದಾಯಿತ ದಾನ ಪತ್ರ ಮೂಲಕ ಜಾಗವನ್ನು ಗ್ರಾಮ ಪಂಚಾಯಿತಿ ಹೆಸರಿಗೆ ಬರೆದುಕೊಡಬೇಕು.  ಅರ್ಜಿ ಯನ್ನು ಸಲ್ಲಿಸಲು ಪಂಚಾಯಿತಿಗೆ ಹೋಗಬೇಕು ವಿನಾಃ ಯಾವುದೇ ಆನ್ ಲೈನ್ ನಿಯಮವಿಲ್ಲ. ಈ ಯೋಜನೆಯನ್ನು ಜಾರಿಗೊಳಿಸಲು ನೀವೇ ಸ್ವತಃ ಕ್ಷೇತ್ರದ ಶಾಸಕರನ್ನು ಭೇಟಿ ಮಾಡಬೇಕಾಗುತ್ತದೆ.

ಬೇಕಾಗುವ ದಾಖಲೆಗಳು:
• ರೈತರ ಅರ್ಜಿ
• ಪಹಣಿ
• ಗ್ರಾಮ ನಕ್ಷೆ
• ಆಧಾರ್ ಕಾರ್ಡ್

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

19 minutes ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

1 hour ago

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…

9 hours ago

ಹಲಸಿನ ಬೀಜದ ಸಿಪ್ಪೆಯಿಂದ ಕೈಗಾರಿಕಾ ಬಳಕೆಯ ಸೆಲ್ಯುಲೋಸ್..! ರೈತರಿಗೆ ಮೌಲ್ಯವರ್ಧನೆಯ ಹೊಸ ಅವಕಾಶ

ಹಲಸಿನ ಬೀಜದ ಸಿಪ್ಪೆಯಿಂದ ಮೈಕ್ರೋಕ್ರಿಸ್ಟಲೈನ್ ಸೆಲ್ಯುಲೋಸ್ ಉತ್ಪಾದಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಕೃಷಿ ತ್ಯಾಜ್ಯವನ್ನು…

14 hours ago

ಅಪ್ಪ ಯಾಕೆ ವಿಚಿತ್ರವಾಗಿ ಕಾಣುತ್ತಾನೆ?

ಬಾಲ್ಯದಲ್ಲಿ ಕಠೋರನಂತೆ ಕಾಣುವ ಅಪ್ಪನ ನಿಜವಾದ ಪ್ರೀತಿ ಮತ್ತು ತ್ಯಾಗ ನಮ್ಮ ಬದುಕಿನ…

14 hours ago

ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ

ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ…

1 day ago