Advertisement
ಸುದ್ದಿಗಳು

ನಮ್ಮ ಹೊಲ ನಮ್ಮ ದಾರಿ : ರಸ್ತೆಗೆ 12.5 ಲಕ್ಷ ಸಹಾಯಧನ

Share

ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ. ಮಳೆಗಾಲ ಬಂದರೆ ಸಾಕು ತೋಟಕ್ಕೆ ಗಾಡಿ ಅಂದರೆ ಟ್ರಾಕ್ಟರ್ ಹೋಗಲು ಸಾಧ್ಯವಿಲ್ಲದೆ ಸಂಕಟ ಪಡಬೇಕಾಗುತ್ತದೆ.  ಈಗ ಈ ಎಲ್ಲಾ ಸಮಸ್ಯೆಗಳಿಗೂ ರಾಜ್ಯ ಸರ್ಕಾರವೂ ಹೊಸ ಯೋಜನೆಯನ್ನು ಜಾರಿಗೊಳಿಸಿದೆ.

ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಮತ್ತು ರಾಜ್ಯ ಸರ್ಕಾರ ಅನುದಾನ ಸೇರಿ ನಮ್ಮ ಹೊಲ- ನಮ್ಮ ದಾರಿ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯ ಮೂಲಕ ಪ್ರತಿ 1 ಕಿ.ಮಿ ರಸ್ತೆ ನಿರ್ಮಾಣಕ್ಕೆ ಸರ್ಕಾರ ಒಟ್ಟು ರೂ 12.50 ಲಕ್ಷ ಖರ್ಚು ಮಾಡಲಾಗುತ್ತದೆ. ಕನಿಷ್ಠ3.75 ಮೀಟರ್ ಆಗಲದ ರಸ್ತೆ ನಿರ್ಮಾಣ ಮಾಡಲಾಗುತ್ತದೆ. ಇದರಿಂದ ಲಾರಿ, ಟ್ರ್ಯಾಕ್ಟರ್ ಸುಲಭವಾಗಿ ಹೊಲಕ್ಕೆ ಹೋಗಬಹುದು.

ಆದರೆ, ಈ ಯೋಜನೆಯನ್ನು ಆಯಾ ರೈತನ ಜಮೀನಿನಲ್ಲೇ ಮಾಡಲಾಗುತ್ತದೆ. ಯಾವುದೇ ಕಾರಣಕ್ಕೂ ದಾರಿಗಾಗಿ ಜಮೀನು ನೀಡುವ ರೈತನಿಗೆ ಸರ್ಕಾರದಿಂದ ಯಾವುದೇ ಹಣ ಸಿಗುವುದಿಲ್ಲ. ಆತ ಸ್ವ ಇಚ್ಛೆಯಿಂದ ಉಪನೋಂದಣಾಧಿಕಾರಿ ಕಚೇರಿಯಲ್ಲಿ ನೋಂದಾಯಿತ ದಾನ ಪತ್ರ ಮೂಲಕ ಜಾಗವನ್ನು ಗ್ರಾಮ ಪಂಚಾಯಿತಿ ಹೆಸರಿಗೆ ಬರೆದುಕೊಡಬೇಕು.  ಅರ್ಜಿ ಯನ್ನು ಸಲ್ಲಿಸಲು ಪಂಚಾಯಿತಿಗೆ ಹೋಗಬೇಕು ವಿನಾಃ ಯಾವುದೇ ಆನ್ ಲೈನ್ ನಿಯಮವಿಲ್ಲ. ಈ ಯೋಜನೆಯನ್ನು ಜಾರಿಗೊಳಿಸಲು ನೀವೇ ಸ್ವತಃ ಕ್ಷೇತ್ರದ ಶಾಸಕರನ್ನು ಭೇಟಿ ಮಾಡಬೇಕಾಗುತ್ತದೆ.

ಬೇಕಾಗುವ ದಾಖಲೆಗಳು:
• ರೈತರ ಅರ್ಜಿ
• ಪಹಣಿ
• ಗ್ರಾಮ ನಕ್ಷೆ
• ಆಧಾರ್ ಕಾರ್ಡ್

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

48 minutes ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

5 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 day ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

1 day ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

1 day ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

1 day ago