ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ. ಮಳೆಗಾಲ ಬಂದರೆ ಸಾಕು ತೋಟಕ್ಕೆ ಗಾಡಿ ಅಂದರೆ ಟ್ರಾಕ್ಟರ್ ಹೋಗಲು ಸಾಧ್ಯವಿಲ್ಲದೆ ಸಂಕಟ ಪಡಬೇಕಾಗುತ್ತದೆ. ಈಗ ಈ ಎಲ್ಲಾ ಸಮಸ್ಯೆಗಳಿಗೂ ರಾಜ್ಯ ಸರ್ಕಾರವೂ ಹೊಸ ಯೋಜನೆಯನ್ನು ಜಾರಿಗೊಳಿಸಿದೆ.
ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಮತ್ತು ರಾಜ್ಯ ಸರ್ಕಾರ ಅನುದಾನ ಸೇರಿ ನಮ್ಮ ಹೊಲ- ನಮ್ಮ ದಾರಿ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯ ಮೂಲಕ ಪ್ರತಿ 1 ಕಿ.ಮಿ ರಸ್ತೆ ನಿರ್ಮಾಣಕ್ಕೆ ಸರ್ಕಾರ ಒಟ್ಟು ರೂ 12.50 ಲಕ್ಷ ಖರ್ಚು ಮಾಡಲಾಗುತ್ತದೆ. ಕನಿಷ್ಠ3.75 ಮೀಟರ್ ಆಗಲದ ರಸ್ತೆ ನಿರ್ಮಾಣ ಮಾಡಲಾಗುತ್ತದೆ. ಇದರಿಂದ ಲಾರಿ, ಟ್ರ್ಯಾಕ್ಟರ್ ಸುಲಭವಾಗಿ ಹೊಲಕ್ಕೆ ಹೋಗಬಹುದು.
ಆದರೆ, ಈ ಯೋಜನೆಯನ್ನು ಆಯಾ ರೈತನ ಜಮೀನಿನಲ್ಲೇ ಮಾಡಲಾಗುತ್ತದೆ. ಯಾವುದೇ ಕಾರಣಕ್ಕೂ ದಾರಿಗಾಗಿ ಜಮೀನು ನೀಡುವ ರೈತನಿಗೆ ಸರ್ಕಾರದಿಂದ ಯಾವುದೇ ಹಣ ಸಿಗುವುದಿಲ್ಲ. ಆತ ಸ್ವ ಇಚ್ಛೆಯಿಂದ ಉಪನೋಂದಣಾಧಿಕಾರಿ ಕಚೇರಿಯಲ್ಲಿ ನೋಂದಾಯಿತ ದಾನ ಪತ್ರ ಮೂಲಕ ಜಾಗವನ್ನು ಗ್ರಾಮ ಪಂಚಾಯಿತಿ ಹೆಸರಿಗೆ ಬರೆದುಕೊಡಬೇಕು. ಅರ್ಜಿ ಯನ್ನು ಸಲ್ಲಿಸಲು ಪಂಚಾಯಿತಿಗೆ ಹೋಗಬೇಕು ವಿನಾಃ ಯಾವುದೇ ಆನ್ ಲೈನ್ ನಿಯಮವಿಲ್ಲ. ಈ ಯೋಜನೆಯನ್ನು ಜಾರಿಗೊಳಿಸಲು ನೀವೇ ಸ್ವತಃ ಕ್ಷೇತ್ರದ ಶಾಸಕರನ್ನು ಭೇಟಿ ಮಾಡಬೇಕಾಗುತ್ತದೆ.
ಬೇಕಾಗುವ ದಾಖಲೆಗಳು:
• ರೈತರ ಅರ್ಜಿ
• ಪಹಣಿ
• ಗ್ರಾಮ ನಕ್ಷೆ
• ಆಧಾರ್ ಕಾರ್ಡ್
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…