Advertisement
ಧಾರ್ಮಿಕ

ಮನುಷ್ಯ ಜೀವಿಯ ವಿಷ ಹಲ್ಲಿನಲ್ಲಿ ಇರಲ್ಲ, ಆತನ ಶಬ್ದಗಳಲ್ಲಿ ಇರುತ್ತದೆ…! | ನಮ್ಮ ಶಬ್ದಗಳ ಸಹ ನಮ್ಮ ಕರ್ಮಗಳೇ ಆಗಿರುತ್ತವೆ…. | ಇದೊಂದು ಘಟನೆ ಶ್ರೀಕೃಷ್ಣ ವಿವರಿಸುತ್ತಾನೆ….! |

Share

ಮಾತು ಆಡಿದರೆ ಹೋಯ್ತು, ಮುತ್ತು ಒಡೆದರೆ ಹೋಯ್ತು.. ಇದು ರೂಢಿಯಲ್ಲಿ ಬಂದ ಹಳೇ ಗಾದೆ ಮಾತು. ಅದು ಸತ್ಯ ಕೂಡ. ಕೆಲವು ಬಾರಿ ನಾವು ಆಡುವ ಮಾತುಗಳು ನಮಗೆ ಮುಳುವಾಗುತ್ತವೆ. ಅದರಿಂದ ನಾವೇ ಪಶ್ಚತಾಪ ಪಡುವ ಸಂಗತಿಗಳು ಎದುರಾಗುತ್ತದೆ. ಮಹಾಭಾರತದಲ್ಲಿ ದ್ರೌಪದಿ ಆಡಿದ ಮಾತುಗಳು, ಮಾಡಿದ ಅವಮಾನಗಳು, ತಪ್ಪು ನಿರ್ಧಾರಗಳಿಂದ ಅದೆಂತ ಕೆಟ್ಟ ಘಟನೆಗಳಿಗೆ ಸಾಕ್ಷಿಯಾಯ್ತು ಅನ್ನೋದು ನಮಗೆ ತಿಳಿದಿದೆ. ಅದೊಂದು ಘಟನೆ ಇಲ್ಲಿದೆ….

ಕೃಷ್ಣ ಪರಮಾತ್ಮ ದ್ರೌಪದಿಗೆ ತನ್ನ ತಪ್ಪಿನ ಬಗ್ಗೆ ಎಷ್ಟು ನಿಖರವಾಗಿ ತನ್ನ ಮಾತುಗಳಲ್ಲಿ ಅವಳಿಗೆ ವಿವರಿಸುತ್ತಾನೆ ನೋಡಿ.

ಮಹಾಭಾರತ ಯುದ್ಧ ಮುಗಿದಿತ್ತು. 18 ದಿನಗಳ ಯುದ್ಧ ದ್ರೌಪತಿಯನ್ನು 80 ನೇ ವಯಸ್ಸಿನವರೆಗೂ ಕೊಂಡೊಯ್ದಿತ್ತು. ಮಾನಸಿಕ ಮತ್ತು ದೈಹಿಕ ರೂಪದಲ್ಲಿ.

ಊರಲ್ಲಿ ಎಲ್ಲಿ ನೋಡಿದರಲ್ಲಿ ವಿಧವೆಯರೇ ಕಾಣಿಸುತ್ತಿದ್ದರು. ಕೈ ಕಾಲು ಮುರಿದುಕೊಂಡು ಅಂಗವೈಕಲ್ಯಗೊಂಡ ಪುರುಷರು. ಅನಾಥ ಮಕ್ಕಳು ಓಡಾಡುತ್ತಿದ್ದರು. ಸ್ಮಶಾನ ಮೌನಗೊಂಡಿತ್ತು ನಂದನವನದಂತಿದ್ದ ಹಸ್ತಿನಾಪುರ.

ರಾಣಿ ದ್ರೌಪತಿ ಶೂನ್ಯಮನಸ್ಕಳಾಗಿ ತದೇಕ ಚಿತ್ತದಿಂದ ಗೋಡೆಯನ್ನು ನೋಡುತ್ತಾ ಕುಳಿತಿದ್ದಳು. ಶ್ರೀ ಕೃಷ್ಣ ಪರಮಾತ್ಮ ಅಲ್ಲಿಗೆ ಬಂದ. ದ್ರೌಪತಿ ಓಡಿ ಹೋಗಿ ಕೃಷ್ಣನನ್ನು ತಬ್ಬಿಕೊಳ್ಳುತ್ತಾಳೆ ಮತ್ತು ಅಳಲು ಪ್ರಾರಂಭಿಸುತ್ತಾಳೆ. ಕೃಷ್ಣ ದ್ರೌಪದಿಯ ತಲೆಯನ್ನು ಸವರುತ್ತಾನೆ. ಮತ್ತು ಸಮೀಪದ ಪಲ್ಲಂಗದ ಮೇಲೆ ಕೂರಿಸುತ್ತಾನೆ.

ದ್ರೌಪದಿ: ಕೃಷ್ಣ ಏನಿದೆಲ್ಲ? ಹೀಗೆಲ್ಲ ಆಗುತ್ತೆ ಅಂತ ನಾನು ಅಂದುಕೊಂಡೇ ಇರಲಿಲ್ಲ.

ಕೃಷ್ಣ: ಕರ್ತವ್ಯ ಮತ್ತು ನಿಯತ್ತು ಬಹು ಕ್ರೂರಿ ಪಾಂಚಾಲಿ, ಅದು ನಾವು ಯೋಚಿಸಿಯಂತೆ ಇರುವುದಿಲ್ಲ. ನಮ್ಮ ಕರ್ಮಗಳನ್ನು ಪರಿಣಾಮಗಳಲ್ಲಿ ಬದಲಿಸಿಬಿಡುತ್ತದೆ….. ನೀನು ಸೇಡು ತೀರಿಸಿಕೊಳ್ಳಬೇಕು ಅಂದುಕೊಂಡಿದ್ದೆ, ನಿನ್ನ ಸೇಡು ತೀರಿತು ದುಶ್ಯಾಸನ ದುರ್ಯೋಧನರಷ್ಟೇ ಅಲ್ಲ, ಇಡೀ ಕೌರವ ವಂಶವೇ ನಿರ್ವಂಶವಾಯ್ತು. ಇದು ನೀನು ಖುಷಿ ಪಡುವ ವಿಚಾರ. ಯಾಕೆ …ನಿನಗೆ ಆನಂದವಾಗುತ್ತಿಲ್ಲವೇ?

ದ್ರೌಪತಿ: ಕೃಷ್ಣಾ….ನೀನು ನನ್ನ ದುಃಖವನ್ನು ಒರಿಸಲು ಬಂದಿರುವೆಯ ಅಥವಾ ನನ್ನ ಗಾಯಗಳ ಮೇಲೆ ಉಪ್ಪು ಸುರಿಯಲು ಬಂದಿರುವೆಯಾ?

ಕೃಷ್ಣ: ಇಲ್ಲ ದ್ರೌಪತಿ, ನಾನು ವಾಸ್ತವಿಕತೆಯನ್ನು ಅರ್ಥೈಸಲು ಬಂದಿದ್ದೇನೆ. ನಮ್ಮ ಕರ್ಮದ ಫಲಗಳ ಪರಿಣಾಮಗಳು ನಮ್ಮ ಕಣ್ಣಿಗೆ ಕಾಣುವುದಿಲ್ಲ. ಅವು ಹತ್ತಿರವಾದಾಗ ನಮ್ಮ ಕೈಯಲ್ಲಿ ಏನೂ ಇರುವುದಿಲ್ಲ.

ದ್ರೌಪತಿ: ಅಂದರೆ ……ಇದಕ್ಕೆಲ್ಲ ನಾನೇ ಕಾರಣನಾ ಕೃಷ್ಣ?

ಕೃಷ್ಣ: ಇಲ್ಲ ದ್ರೌಪತಿ…ನಿನ್ನನ್ನು ನೀನು ಇಷ್ಟೊಂದು ಮಹತ್ವಪೂರ್ಣಳು ಎಂದು ತಿಳಿದುಕೊಳ್ಳಬೇಡ, ಆದರೆ ನೀನು ನಿನ್ನ ಕರ್ಮಗಳಲ್ಲಿ ಕಿಂಚಿತ್ತಾದರೂ ದೂರದೃಷ್ಟಿ ಇಟ್ಟಿದ್ದಿದ್ದರೆ ಇಂದು ನೀನು ದುಃಖಿಸುವ ಈ ಪರಿಸ್ಥಿತಿ ಬರುತ್ತಿರಲಿಲ್ಲ.

ದ್ರೌಪತಿ: ???????

ಕೃಷ್ಣ: ಅಂದು ಸ್ವಯಂವರದಲ್ಲಿ ಕರ್ಣನಿಗೆ ನೀನು ಅವಮಾನಿಸದೇ ಇದ್ದಿದ್ದರೆ, ಭಾಗವಹಿಸಲು ಅವಕಾಶ ಕೊಟ್ಟಿದ್ದರೆ ಅದರ ಪರಿಣಾಮ ಬೇರೆನೇ ಇರುತ್ತಿತ್ತು. ನಂತರ ಕುಂತಿಮಾತಾ ನಿನಗೆ ಐದೂ ಪಾಂಡವರನ್ನು ವಿವಾಹವಾಗಲು ಆಹ್ವಾನಿಸಿದಾಗ ನೀನು ತಿರಸ್ಕರಿಸಿದ್ದರೆ ಅದರ ಪರಿಣಾಮವೂ ಇಂದು ಬೇರೆನೇ ಇರುತ್ತಿತ್ತು. ನಂತರ ನಿನ್ನ ಮಹಲಿನಲ್ಲಿ ದುರ್ಯೋಧನನಿಗೆ ಅವಮಾನ ಮಾಡಿರದೆ ಇದ್ದಿದ್ದರೆ. ನಿನ್ನ ವಸ್ತ್ರಾಪಹರಣವೇ ಆಗುತ್ತಿರಲಿಲ್ಲ. ಆಗಲೂ ಪರಿಸ್ಥಿತಿ ಬೇರೆನೇ ಆಗುತ್ತಿತ್ತು. ನಮ್ಮ ಶಬ್ದಗಳು ಸಹ ನಮ್ಮ ಕರ್ಮ ಗಳಾಗಿರುತ್ತವೆ ದ್ರೌಪದಿ.

ನಾವು ಶಬ್ದಗಳನ್ನು ಆಡುವ ಮುಂಚೆ ಅವುಗಳನ್ನು ಅಳತೆಮಾಡಬೇಕಾಗುತ್ತದೆ. ಇಲ್ಲವಾದರೆ ಅದರ ದುಷ್ಪರಿಣಾಮವನ್ನು ನಾವು ಮಾತ್ರ ಅಲ್ಲ, ನಮ್ಮ ಸುತ್ತಮುತ್ತಲಿನ ವಾತಾವರಣವೂ ಅನುಭವಿಸಬೇಕಾಗುತ್ತದೆ.

ಎಲ್ಲಾ ಜೀವರಾಶಿಗಳಲ್ಲಿ ಮನುಷ್ಯ ಏಕಮಾತ್ರ ಜೀವಿಯ ವಿಷ ಹಲ್ಲಿನಲ್ಲಿ ಇರಲ್ಲ,  ಬದಲಾಗಿ ಆತನ ಶಬ್ದಗಳಲ್ಲಿ ಇರುತ್ತದೆ.
ಅದಕ್ಕಾಗಿಯೇ ನಾವು ಆಡುವ ಶಬ್ದಗಳು ಇತರರಿಗೆ ನಾಟದಂತೆ ಅವರ ಭಾವನೆಗಳಿಗೆ ಧಕ್ಕೆಯಾಗದಂತೆ ಆಡಬೇಕು. ಅಂತಹ ಶಬ್ದಗಳನ್ನು ನಿಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ. ಆಗ ಜೀವನ ಚರಿತಾರ್ಥವಾಗಿರುತ್ತದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

34 minutes ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

7 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

7 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

22 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 day ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

1 day ago