Advertisement
ಧಾರ್ಮಿಕ

ಮನುಷ್ಯ ಜೀವಿಯ ವಿಷ ಹಲ್ಲಿನಲ್ಲಿ ಇರಲ್ಲ, ಆತನ ಶಬ್ದಗಳಲ್ಲಿ ಇರುತ್ತದೆ…! | ನಮ್ಮ ಶಬ್ದಗಳ ಸಹ ನಮ್ಮ ಕರ್ಮಗಳೇ ಆಗಿರುತ್ತವೆ…. | ಇದೊಂದು ಘಟನೆ ಶ್ರೀಕೃಷ್ಣ ವಿವರಿಸುತ್ತಾನೆ….! |

Share

ಮಾತು ಆಡಿದರೆ ಹೋಯ್ತು, ಮುತ್ತು ಒಡೆದರೆ ಹೋಯ್ತು.. ಇದು ರೂಢಿಯಲ್ಲಿ ಬಂದ ಹಳೇ ಗಾದೆ ಮಾತು. ಅದು ಸತ್ಯ ಕೂಡ. ಕೆಲವು ಬಾರಿ ನಾವು ಆಡುವ ಮಾತುಗಳು ನಮಗೆ ಮುಳುವಾಗುತ್ತವೆ. ಅದರಿಂದ ನಾವೇ ಪಶ್ಚತಾಪ ಪಡುವ ಸಂಗತಿಗಳು ಎದುರಾಗುತ್ತದೆ. ಮಹಾಭಾರತದಲ್ಲಿ ದ್ರೌಪದಿ ಆಡಿದ ಮಾತುಗಳು, ಮಾಡಿದ ಅವಮಾನಗಳು, ತಪ್ಪು ನಿರ್ಧಾರಗಳಿಂದ ಅದೆಂತ ಕೆಟ್ಟ ಘಟನೆಗಳಿಗೆ ಸಾಕ್ಷಿಯಾಯ್ತು ಅನ್ನೋದು ನಮಗೆ ತಿಳಿದಿದೆ. ಅದೊಂದು ಘಟನೆ ಇಲ್ಲಿದೆ….

ಕೃಷ್ಣ ಪರಮಾತ್ಮ ದ್ರೌಪದಿಗೆ ತನ್ನ ತಪ್ಪಿನ ಬಗ್ಗೆ ಎಷ್ಟು ನಿಖರವಾಗಿ ತನ್ನ ಮಾತುಗಳಲ್ಲಿ ಅವಳಿಗೆ ವಿವರಿಸುತ್ತಾನೆ ನೋಡಿ.

ಮಹಾಭಾರತ ಯುದ್ಧ ಮುಗಿದಿತ್ತು. 18 ದಿನಗಳ ಯುದ್ಧ ದ್ರೌಪತಿಯನ್ನು 80 ನೇ ವಯಸ್ಸಿನವರೆಗೂ ಕೊಂಡೊಯ್ದಿತ್ತು. ಮಾನಸಿಕ ಮತ್ತು ದೈಹಿಕ ರೂಪದಲ್ಲಿ.

ಊರಲ್ಲಿ ಎಲ್ಲಿ ನೋಡಿದರಲ್ಲಿ ವಿಧವೆಯರೇ ಕಾಣಿಸುತ್ತಿದ್ದರು. ಕೈ ಕಾಲು ಮುರಿದುಕೊಂಡು ಅಂಗವೈಕಲ್ಯಗೊಂಡ ಪುರುಷರು. ಅನಾಥ ಮಕ್ಕಳು ಓಡಾಡುತ್ತಿದ್ದರು. ಸ್ಮಶಾನ ಮೌನಗೊಂಡಿತ್ತು ನಂದನವನದಂತಿದ್ದ ಹಸ್ತಿನಾಪುರ.

ರಾಣಿ ದ್ರೌಪತಿ ಶೂನ್ಯಮನಸ್ಕಳಾಗಿ ತದೇಕ ಚಿತ್ತದಿಂದ ಗೋಡೆಯನ್ನು ನೋಡುತ್ತಾ ಕುಳಿತಿದ್ದಳು. ಶ್ರೀ ಕೃಷ್ಣ ಪರಮಾತ್ಮ ಅಲ್ಲಿಗೆ ಬಂದ. ದ್ರೌಪತಿ ಓಡಿ ಹೋಗಿ ಕೃಷ್ಣನನ್ನು ತಬ್ಬಿಕೊಳ್ಳುತ್ತಾಳೆ ಮತ್ತು ಅಳಲು ಪ್ರಾರಂಭಿಸುತ್ತಾಳೆ. ಕೃಷ್ಣ ದ್ರೌಪದಿಯ ತಲೆಯನ್ನು ಸವರುತ್ತಾನೆ. ಮತ್ತು ಸಮೀಪದ ಪಲ್ಲಂಗದ ಮೇಲೆ ಕೂರಿಸುತ್ತಾನೆ.

ದ್ರೌಪದಿ: ಕೃಷ್ಣ ಏನಿದೆಲ್ಲ? ಹೀಗೆಲ್ಲ ಆಗುತ್ತೆ ಅಂತ ನಾನು ಅಂದುಕೊಂಡೇ ಇರಲಿಲ್ಲ.

ಕೃಷ್ಣ: ಕರ್ತವ್ಯ ಮತ್ತು ನಿಯತ್ತು ಬಹು ಕ್ರೂರಿ ಪಾಂಚಾಲಿ, ಅದು ನಾವು ಯೋಚಿಸಿಯಂತೆ ಇರುವುದಿಲ್ಲ. ನಮ್ಮ ಕರ್ಮಗಳನ್ನು ಪರಿಣಾಮಗಳಲ್ಲಿ ಬದಲಿಸಿಬಿಡುತ್ತದೆ….. ನೀನು ಸೇಡು ತೀರಿಸಿಕೊಳ್ಳಬೇಕು ಅಂದುಕೊಂಡಿದ್ದೆ, ನಿನ್ನ ಸೇಡು ತೀರಿತು ದುಶ್ಯಾಸನ ದುರ್ಯೋಧನರಷ್ಟೇ ಅಲ್ಲ, ಇಡೀ ಕೌರವ ವಂಶವೇ ನಿರ್ವಂಶವಾಯ್ತು. ಇದು ನೀನು ಖುಷಿ ಪಡುವ ವಿಚಾರ. ಯಾಕೆ …ನಿನಗೆ ಆನಂದವಾಗುತ್ತಿಲ್ಲವೇ?

ದ್ರೌಪತಿ: ಕೃಷ್ಣಾ….ನೀನು ನನ್ನ ದುಃಖವನ್ನು ಒರಿಸಲು ಬಂದಿರುವೆಯ ಅಥವಾ ನನ್ನ ಗಾಯಗಳ ಮೇಲೆ ಉಪ್ಪು ಸುರಿಯಲು ಬಂದಿರುವೆಯಾ?

ಕೃಷ್ಣ: ಇಲ್ಲ ದ್ರೌಪತಿ, ನಾನು ವಾಸ್ತವಿಕತೆಯನ್ನು ಅರ್ಥೈಸಲು ಬಂದಿದ್ದೇನೆ. ನಮ್ಮ ಕರ್ಮದ ಫಲಗಳ ಪರಿಣಾಮಗಳು ನಮ್ಮ ಕಣ್ಣಿಗೆ ಕಾಣುವುದಿಲ್ಲ. ಅವು ಹತ್ತಿರವಾದಾಗ ನಮ್ಮ ಕೈಯಲ್ಲಿ ಏನೂ ಇರುವುದಿಲ್ಲ.

ದ್ರೌಪತಿ: ಅಂದರೆ ……ಇದಕ್ಕೆಲ್ಲ ನಾನೇ ಕಾರಣನಾ ಕೃಷ್ಣ?

ಕೃಷ್ಣ: ಇಲ್ಲ ದ್ರೌಪತಿ…ನಿನ್ನನ್ನು ನೀನು ಇಷ್ಟೊಂದು ಮಹತ್ವಪೂರ್ಣಳು ಎಂದು ತಿಳಿದುಕೊಳ್ಳಬೇಡ, ಆದರೆ ನೀನು ನಿನ್ನ ಕರ್ಮಗಳಲ್ಲಿ ಕಿಂಚಿತ್ತಾದರೂ ದೂರದೃಷ್ಟಿ ಇಟ್ಟಿದ್ದಿದ್ದರೆ ಇಂದು ನೀನು ದುಃಖಿಸುವ ಈ ಪರಿಸ್ಥಿತಿ ಬರುತ್ತಿರಲಿಲ್ಲ.

ದ್ರೌಪತಿ: ???????

ಕೃಷ್ಣ: ಅಂದು ಸ್ವಯಂವರದಲ್ಲಿ ಕರ್ಣನಿಗೆ ನೀನು ಅವಮಾನಿಸದೇ ಇದ್ದಿದ್ದರೆ, ಭಾಗವಹಿಸಲು ಅವಕಾಶ ಕೊಟ್ಟಿದ್ದರೆ ಅದರ ಪರಿಣಾಮ ಬೇರೆನೇ ಇರುತ್ತಿತ್ತು. ನಂತರ ಕುಂತಿಮಾತಾ ನಿನಗೆ ಐದೂ ಪಾಂಡವರನ್ನು ವಿವಾಹವಾಗಲು ಆಹ್ವಾನಿಸಿದಾಗ ನೀನು ತಿರಸ್ಕರಿಸಿದ್ದರೆ ಅದರ ಪರಿಣಾಮವೂ ಇಂದು ಬೇರೆನೇ ಇರುತ್ತಿತ್ತು. ನಂತರ ನಿನ್ನ ಮಹಲಿನಲ್ಲಿ ದುರ್ಯೋಧನನಿಗೆ ಅವಮಾನ ಮಾಡಿರದೆ ಇದ್ದಿದ್ದರೆ. ನಿನ್ನ ವಸ್ತ್ರಾಪಹರಣವೇ ಆಗುತ್ತಿರಲಿಲ್ಲ. ಆಗಲೂ ಪರಿಸ್ಥಿತಿ ಬೇರೆನೇ ಆಗುತ್ತಿತ್ತು. ನಮ್ಮ ಶಬ್ದಗಳು ಸಹ ನಮ್ಮ ಕರ್ಮ ಗಳಾಗಿರುತ್ತವೆ ದ್ರೌಪದಿ.

ನಾವು ಶಬ್ದಗಳನ್ನು ಆಡುವ ಮುಂಚೆ ಅವುಗಳನ್ನು ಅಳತೆಮಾಡಬೇಕಾಗುತ್ತದೆ. ಇಲ್ಲವಾದರೆ ಅದರ ದುಷ್ಪರಿಣಾಮವನ್ನು ನಾವು ಮಾತ್ರ ಅಲ್ಲ, ನಮ್ಮ ಸುತ್ತಮುತ್ತಲಿನ ವಾತಾವರಣವೂ ಅನುಭವಿಸಬೇಕಾಗುತ್ತದೆ.

ಎಲ್ಲಾ ಜೀವರಾಶಿಗಳಲ್ಲಿ ಮನುಷ್ಯ ಏಕಮಾತ್ರ ಜೀವಿಯ ವಿಷ ಹಲ್ಲಿನಲ್ಲಿ ಇರಲ್ಲ,  ಬದಲಾಗಿ ಆತನ ಶಬ್ದಗಳಲ್ಲಿ ಇರುತ್ತದೆ.
ಅದಕ್ಕಾಗಿಯೇ ನಾವು ಆಡುವ ಶಬ್ದಗಳು ಇತರರಿಗೆ ನಾಟದಂತೆ ಅವರ ಭಾವನೆಗಳಿಗೆ ಧಕ್ಕೆಯಾಗದಂತೆ ಆಡಬೇಕು. ಅಂತಹ ಶಬ್ದಗಳನ್ನು ನಿಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ. ಆಗ ಜೀವನ ಚರಿತಾರ್ಥವಾಗಿರುತ್ತದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

1 hour ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

1 hour ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

19 hours ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

1 day ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

1 day ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

1 day ago