MIRROR FOCUS

ಮಲೆನಾಡು-ಕರಾವಳಿಯಲ್ಲಿ ಮಳೆಯ ಅಬ್ಬರ | ಎರಡು ದಿನಗಳಿಂದ 100 ಮಿಮೀ+ ಮಳೆ | ಆರಂಭಗೊಂಡ ಗುಡ್ಡ ಕುಸಿತದ ಸುದ್ದಿಗಳು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಮಳೆಯ ಅಬ್ಬರ ಹೆಚ್ಚಾಗ ತೊಡಗಿದೆ. ಎರಡು ದಿನಗಳಿಂದ ಹವಾಮಾನ ಇಲಾಖೆ ರೆಡ್‌ ಎಲರ್ಟ್‌ ಘೋಷಣೆ ಮಾಡಿದೆ. ಇದೇ ಮಾದರಿಯಲ್ಲಿ ಮಳೆಯೂ ಸುರಿದಿದೆ. ಹಲವು ಕಡೆ 100 ಮಿಮೀ ಗಿಂತ ಅಧಿಕ ಮಳೆಯಾಗಿದೆ. ಇದೀಗ ಮತ್ತೆ ಮಲೆನಾಡು-ಕರಾವಳಿಯಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಈ ನಡುವೆ ಗುಡ್ಡ ಕುಸಿತದ ಸುದ್ದಿಗಳು ಆರಂಭವಾಗಿದೆ. ಅಂಕೋಲಾದ ಬಳಿ ಗುಡ್ಡ ಕುಸಿತ ಸಂಭವಿಸಿದರೆ, ಮಡಿಕೇರಿ ಬಳಿಯ ಮದೆನಾಡಿನಲ್ಲಿ ರಸ್ತೆ ಕುಸಿತದ ಅಪಾಯ ಎದುರಾಗಿದೆ. ಕೊಯನಾಡು ಬಳಿ ಶಾಲಾ ಕಟ್ಟಡದ ಬಳಿ ಧರೆ ಕುಸಿತಗೊಂಡು ಹಾನಿಯಾಗಿದೆ.

Advertisement
Advertisement

ಕರಾವಳಿ ಹಾಗೂ ಮಲೆನಾಡಿನಲ್ಲಿ ಸತತವಾಗಿ 100 ಮಿಮೀಗಿಂತ ಅಧಿಕ ಮಳೆಯಾಗುತ್ತಿದ್ದಂತೆಯೇ ಅಪಾಯಗಳು ಹೆಚ್ಚಾಗಲು ಆರಂಭವಾಗಿದೆ. ಕಳೆದ 24 ಗಂಟೆಯಲ್ಲಿ‌ ಶಿರಸಿಯ ಮುಂಡಿಗೆ ಪಕ್ಷಿಧಾಮದ ಪ್ರದೇಶದಲ್ಲಿ 78 ಮಿಮೀ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಾಳುಗೋಡು, ಹರಿಹರ, ಕೊಲ್ಲಮೊಗ್ರ, ಸುಬ್ರಹ್ಮಣ್ಯ, ಬಳ್ಪ, ಚೆಂಬು, ಸುಳ್ಯ, ಬಾಳಿಲ ಸೇರಿದಂತೆ ಮಲೆನಾಡು ತಪ್ಪಲು ಪ್ರದೇಶದಲ್ಲಿ 100 ಮಿಮೀಗಿಂತ ಅಧಿಕ ಮಳೆಯಾಗಿದೆ. ಕರಾವಳಿ ಪ್ರದೇಶದಲ್ಲಿ 75 ಮಿಮೀಗಿಂತ ಅಧಿಕ ಮಳೆಯಾಗಿದೆ. ಚಿಕ್ಕಮಗಳೂರಿನಲ್ಲಿಯೂ 120 ಮಿಮೀ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ 150-200 ಮಿಮೀ ಮಳೆಯಾಗಬಹುದು ಎಂದು ಹವಾಮಾನ ಮುನ್ಸೂಚನೆ ತಿಳಿಸುತ್ತದೆ.

ಭಾರೀ ಮಳೆಯಾಗುತ್ತಿದ್ದಂತೆಯೇ ಗುಡ್ಡ ಕುಸಿತ, ಧರೆ ಕುಸಿತದ ಸುದ್ದಿಗಳು ಕೇಳಲು ಆರಂಭವಾಗಿದೆ. ಸತತವಾಗಿ ಎರಡು ದಿನಗಳ ಕಾಲ ಮಲೆನಾಡು ಭಾಗದಲ್ಲಿ 100 ಮಿಮೀ ಮಳೆ ದಾಟುತ್ತಿದ್ದಂತೆಯೇ ಗುಡ್ಡದ ಮಣ್ಣು ಕುಸಿತಗೊಳ್ಳಲು ಆರಂಭಗೊಂಡಿದೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಬಳಿ ಭಾರೀ ಪ್ರಮಾಣ ಗುಡ್ಡ ಕುಸಿತ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಸೇರಿ ಒಟ್ಟು ಏಳು ಮಂದಿ ಮಣ್ಣನಡಿ ಸಿಲುಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.ಅಂಕೋಲ ಕುಮಟಾ ನಡುವಿನ ರಸ್ತೆ ಸಂಚಾರ ಸ್ಥಗಿತಗೊಂಡಿದೆ.ಗುಡ್ಡ ಕುಸಿತ ರಭಸಕ್ಕೆ ಹೆದ್ದಾರಿ ಅಂಚಿಗೆ ನಿಲ್ಲಿಸಿಟ್ಟ ಗ್ಯಾಸ್ ಟ್ಯಾಂಕರ್ ವಾಹನ,ಗಂಗಾವಳಿ ನದಿ ನೀರಿನಲ್ಲಿ ಕೊಚ್ಚಿ ಹೋಗಿದೆ.

ದಕ್ಷಿಣ ಕನ್ನಡ ಕೊಡಗು ಭಾಗದಲ್ಲೂ ಮಳೆಯ ಅಬ್ಬರ ಹೆಚ್ಚಾಗಿದೆ. ಕೊಯನಾಡು ಸರ್ಕಾರಿ ಶಾಲೆ‌ ಮೇಲೆ ಮತ್ತೆ ಬರೆ ಕುಸಿತವಾಗಿದೆ. ಶಾಲೆಯ ಮೇಲೆ ಬರೆ ಕುಸಿದಿದ್ದು ಭಾರಿ ಹಾನಿ ಸಂಭವಿಸಿದೆ. ಇದೇ ವೇಳೆ ಮಾಣಿ-ಮೈಸೂರು ಹೆದ್ದಾರಿಯ ಮಡಿಕೇರಿಯ ಮದೆನಾಡು ಬಳಿ ಮುಖ್ಯರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು ರಸ್ತೆ ಕುಸಿಯುವ ಆತಂಕ ಇದೆ ಎಂದು ಸ್ಥಳೀಯರು ಹೇಳಿದ್ದಾರೆ. ಇದೇ ರಸ್ತೆಯ ಮೊಣ್ಣಂಗೇರಿ ಬಳಿಯೂ ಅಪಾಯ ಇದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

Advertisement

ಆಗುಂಬೆ ಘಾಟಿಯಲ್ಲಿ ಕಳೆದ ಎರಡು ದಿನಗಳಿಂದ ಮಾಹಿತಿಯನ್ನು ಸ್ಥಳೀಯರು ನೀಡಿದ್ದು, ರಸ್ತೆ ಬದಿ ಕುಸಿತದ ಬಗ್ಗೆ ಎಚ್ಚರಿಕೆಯನ್ನು ನೀಡಿದ್ದರು. ಇದೀಗ ಸಕಲೇಶಪುರ ಸೇರಿದಂತೆ ಘಾಟಿ ಪ್ರದೇಶದಲ್ಲಿ ಮಳೆಯ ಸೂಚನೆ ಇದ್ದು, ಘಾಟಿ ರಸ್ತೆ ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯವಿದೆ.

There has been a rise in rainfall in coastal and hilly regions. The meteorological department has issued a red alert for the next two days due to the consistent pattern of heavy rainfall. Many areas have received over 100 mm of rain. The precipitation continues in the hill and coastal regions. Reports of landslides have started to emerge, with a risk of road collapse near Ankola and Madenad near Madikeri. Additionally, a land slide near Koyanadu and caused damage to a nearby school building.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?

ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…

11 hours ago

ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…

11 hours ago

ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ

ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…

14 hours ago

ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ

ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…

14 hours ago

ಬದುಕು ಪುರಾಣ | ಎಲ್ಲರೊಳಗೂ ಏಕಲವ್ಯನಿದ್ದಾನೆ!

 ‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…

14 hours ago

ಮನೆಯಲ್ಲಿ ಸಂಪತ್ತು, ಸಂತೋಷ ಹೆಚ್ಚಾಗಲು ಮುಖ್ಯ ದ್ವಾರ ಹೀಗಿರಲಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

14 hours ago