Advertisement
MIRROR FOCUS

ಮಲೆನಾಡು-ಕರಾವಳಿಯಲ್ಲಿ ಮಳೆಯ ಅಬ್ಬರ | ಎರಡು ದಿನಗಳಿಂದ 100 ಮಿಮೀ+ ಮಳೆ | ಆರಂಭಗೊಂಡ ಗುಡ್ಡ ಕುಸಿತದ ಸುದ್ದಿಗಳು |

Share

ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಮಳೆಯ ಅಬ್ಬರ ಹೆಚ್ಚಾಗ ತೊಡಗಿದೆ. ಎರಡು ದಿನಗಳಿಂದ ಹವಾಮಾನ ಇಲಾಖೆ ರೆಡ್‌ ಎಲರ್ಟ್‌ ಘೋಷಣೆ ಮಾಡಿದೆ. ಇದೇ ಮಾದರಿಯಲ್ಲಿ ಮಳೆಯೂ ಸುರಿದಿದೆ. ಹಲವು ಕಡೆ 100 ಮಿಮೀ ಗಿಂತ ಅಧಿಕ ಮಳೆಯಾಗಿದೆ. ಇದೀಗ ಮತ್ತೆ ಮಲೆನಾಡು-ಕರಾವಳಿಯಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಈ ನಡುವೆ ಗುಡ್ಡ ಕುಸಿತದ ಸುದ್ದಿಗಳು ಆರಂಭವಾಗಿದೆ. ಅಂಕೋಲಾದ ಬಳಿ ಗುಡ್ಡ ಕುಸಿತ ಸಂಭವಿಸಿದರೆ, ಮಡಿಕೇರಿ ಬಳಿಯ ಮದೆನಾಡಿನಲ್ಲಿ ರಸ್ತೆ ಕುಸಿತದ ಅಪಾಯ ಎದುರಾಗಿದೆ. ಕೊಯನಾಡು ಬಳಿ ಶಾಲಾ ಕಟ್ಟಡದ ಬಳಿ ಧರೆ ಕುಸಿತಗೊಂಡು ಹಾನಿಯಾಗಿದೆ.

ಕರಾವಳಿ ಹಾಗೂ ಮಲೆನಾಡಿನಲ್ಲಿ ಸತತವಾಗಿ 100 ಮಿಮೀಗಿಂತ ಅಧಿಕ ಮಳೆಯಾಗುತ್ತಿದ್ದಂತೆಯೇ ಅಪಾಯಗಳು ಹೆಚ್ಚಾಗಲು ಆರಂಭವಾಗಿದೆ. ಕಳೆದ 24 ಗಂಟೆಯಲ್ಲಿ‌ ಶಿರಸಿಯ ಮುಂಡಿಗೆ ಪಕ್ಷಿಧಾಮದ ಪ್ರದೇಶದಲ್ಲಿ 78 ಮಿಮೀ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಾಳುಗೋಡು, ಹರಿಹರ, ಕೊಲ್ಲಮೊಗ್ರ, ಸುಬ್ರಹ್ಮಣ್ಯ, ಬಳ್ಪ, ಚೆಂಬು, ಸುಳ್ಯ, ಬಾಳಿಲ ಸೇರಿದಂತೆ ಮಲೆನಾಡು ತಪ್ಪಲು ಪ್ರದೇಶದಲ್ಲಿ 100 ಮಿಮೀಗಿಂತ ಅಧಿಕ ಮಳೆಯಾಗಿದೆ. ಕರಾವಳಿ ಪ್ರದೇಶದಲ್ಲಿ 75 ಮಿಮೀಗಿಂತ ಅಧಿಕ ಮಳೆಯಾಗಿದೆ. ಚಿಕ್ಕಮಗಳೂರಿನಲ್ಲಿಯೂ 120 ಮಿಮೀ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ 150-200 ಮಿಮೀ ಮಳೆಯಾಗಬಹುದು ಎಂದು ಹವಾಮಾನ ಮುನ್ಸೂಚನೆ ತಿಳಿಸುತ್ತದೆ.

ಭಾರೀ ಮಳೆಯಾಗುತ್ತಿದ್ದಂತೆಯೇ ಗುಡ್ಡ ಕುಸಿತ, ಧರೆ ಕುಸಿತದ ಸುದ್ದಿಗಳು ಕೇಳಲು ಆರಂಭವಾಗಿದೆ. ಸತತವಾಗಿ ಎರಡು ದಿನಗಳ ಕಾಲ ಮಲೆನಾಡು ಭಾಗದಲ್ಲಿ 100 ಮಿಮೀ ಮಳೆ ದಾಟುತ್ತಿದ್ದಂತೆಯೇ ಗುಡ್ಡದ ಮಣ್ಣು ಕುಸಿತಗೊಳ್ಳಲು ಆರಂಭಗೊಂಡಿದೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಬಳಿ ಭಾರೀ ಪ್ರಮಾಣ ಗುಡ್ಡ ಕುಸಿತ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಸೇರಿ ಒಟ್ಟು ಏಳು ಮಂದಿ ಮಣ್ಣನಡಿ ಸಿಲುಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.ಅಂಕೋಲ ಕುಮಟಾ ನಡುವಿನ ರಸ್ತೆ ಸಂಚಾರ ಸ್ಥಗಿತಗೊಂಡಿದೆ.ಗುಡ್ಡ ಕುಸಿತ ರಭಸಕ್ಕೆ ಹೆದ್ದಾರಿ ಅಂಚಿಗೆ ನಿಲ್ಲಿಸಿಟ್ಟ ಗ್ಯಾಸ್ ಟ್ಯಾಂಕರ್ ವಾಹನ,ಗಂಗಾವಳಿ ನದಿ ನೀರಿನಲ್ಲಿ ಕೊಚ್ಚಿ ಹೋಗಿದೆ.

ದಕ್ಷಿಣ ಕನ್ನಡ ಕೊಡಗು ಭಾಗದಲ್ಲೂ ಮಳೆಯ ಅಬ್ಬರ ಹೆಚ್ಚಾಗಿದೆ. ಕೊಯನಾಡು ಸರ್ಕಾರಿ ಶಾಲೆ‌ ಮೇಲೆ ಮತ್ತೆ ಬರೆ ಕುಸಿತವಾಗಿದೆ. ಶಾಲೆಯ ಮೇಲೆ ಬರೆ ಕುಸಿದಿದ್ದು ಭಾರಿ ಹಾನಿ ಸಂಭವಿಸಿದೆ. ಇದೇ ವೇಳೆ ಮಾಣಿ-ಮೈಸೂರು ಹೆದ್ದಾರಿಯ ಮಡಿಕೇರಿಯ ಮದೆನಾಡು ಬಳಿ ಮುಖ್ಯರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು ರಸ್ತೆ ಕುಸಿಯುವ ಆತಂಕ ಇದೆ ಎಂದು ಸ್ಥಳೀಯರು ಹೇಳಿದ್ದಾರೆ. ಇದೇ ರಸ್ತೆಯ ಮೊಣ್ಣಂಗೇರಿ ಬಳಿಯೂ ಅಪಾಯ ಇದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಆಗುಂಬೆ ಘಾಟಿಯಲ್ಲಿ ಕಳೆದ ಎರಡು ದಿನಗಳಿಂದ ಮಾಹಿತಿಯನ್ನು ಸ್ಥಳೀಯರು ನೀಡಿದ್ದು, ರಸ್ತೆ ಬದಿ ಕುಸಿತದ ಬಗ್ಗೆ ಎಚ್ಚರಿಕೆಯನ್ನು ನೀಡಿದ್ದರು. ಇದೀಗ ಸಕಲೇಶಪುರ ಸೇರಿದಂತೆ ಘಾಟಿ ಪ್ರದೇಶದಲ್ಲಿ ಮಳೆಯ ಸೂಚನೆ ಇದ್ದು, ಘಾಟಿ ರಸ್ತೆ ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯವಿದೆ.

There has been a rise in rainfall in coastal and hilly regions. The meteorological department has issued a red alert for the next two days due to the consistent pattern of heavy rainfall. Many areas have received over 100 mm of rain. The precipitation continues in the hill and coastal regions. Reports of landslides have started to emerge, with a risk of road collapse near Ankola and Madenad near Madikeri. Additionally, a land slide near Koyanadu and caused damage to a nearby school building.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

24 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

1 day ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago