ಪ್ರಮುಖ

#IsraelHamasWar | ಇಸ್ರೇಲ್‌ನಲ್ಲಿ ಸಿಲುಕಿರುವ 5 ಸಾವಿರಕ್ಕೂ ಅಧಿಕ ಕರಾವಳಿಗರು | ರಕ್ಷಣೆಗೆ ವಿದೇಶಾಂಗ ಸಚಿವರಿಗೆ ಪತ್ರ ಬರೆದ ನಳಿನ್ ಕುಮಾರ್ ಕಟೀಲ್ |

Share

ಹಮಾಸ್ ಉಗ್ರರ ದಾಳಿಗೆ ತತ್ತರಿಸಿರುವ ಇಸ್ರೇಲ್ ನಲ್ಲಿ  12 ಸಾವಿರಕ್ಕೂ ಅಧಿಕ ಮಂದಿ ಕರ್ನಾಟಕದ ಕರಾವಳಿಯವರಿದ್ದಾರೆ. ಕೇರಳದ ಗಡಿನಾಡು ಮಂಜೇಶ್ವರದಿಂದ ತೊಡಗಿ ಗೋವಾದ ಕಾರವಾರ ಗಡಿವರೆಗಿನ ಮಂದಿ ಇಸ್ರೇಲ್‌ನಲ್ಲಿ ಕೇರ್ ಗೀವರ್ಸ್ ಕೆಲಸ ಮಾಡಿಕೊಂಡಿದ್ದಾರೆ. ಇವರೆಲ್ಲರೂ ಯುದ್ಧಭೂಮಿ ಜೆರುಸಲೇಂನ ಅಕ್ಕಪಕ್ಕ ಇದ್ದರೂ ಸದ್ಯಕ್ಕೆ ಸುರಕ್ಷಿತವಾಗಿದ್ದಾರೆ.

Advertisement

ಈಗಾಗಲೇ ವಿದೇಶಾಂಗ ಇಲಾಖೆ ಸಚಿವರಿಗೆ ಪತ್ರr ಬರೆದು ಯಾರಿಗೂ ಅಪಾಯ ಆಗದಂತೆ ರಕ್ಷಣೆ ಒದಗಿಸಲು ವಿನಂತಿಸಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್#NalinKumarKateel ಹೇಳಿಕೆ ನೀಡಿದ್ದಾರೆ. ಇಸ್ರೇಲ್‌ಗೆ ತೆರಳಿದ ಕರಾವಳಿ ಮಂದಿಯಲ್ಲಿ ಶೇಕಡ50ರಷ್ಟು ಮಹಿಳೆಯರೇ ಇದ್ದಾರೆ. ಅದರಲ್ಲೂ ಹೆಚ್ಚಿನವರು ಕ್ರಿಶ್ಚಿಯನ್ನರು. ಸಣ್ಣ ಪ್ರಮಾಣದಲ್ಲಿ ಹಿಂದುಗಳಿದ್ದಾರೆ. ದ.ಕ. ಜಿಲ್ಲೆಯ 8 ಅಧಿಕ ಮಂದಿ ಇದರಲ್ಲಿ ಸೇರಿದ್ದಾರೆ. ಕನ್ನಡಿಗರು ಇಸ್ರೇಲ್‌ನಲ್ಲಿ ಯುದ್ಧಪೀಡಿತ ಪ್ರದೇಶದ ಸನಿಹ ಅಪಾಯವನ್ನೂ ಲೆಕ್ಕಿಸದೆ ಕೆಲಸ ಮಾಡುತ್ತಿದ್ದಾರೆ ಇಸ್ರೇಲ್‌ನ ಜೆರುಸಲೇಂ, ಅವೀವ್ ಅರ್ಜೀಲಿಯಂ ಹಾಗೂ ಹೈಫಾ ಈ ನಾಲ್ಕು ಪ್ರಮುಖ ಪ್ರದೇಶಗಳಲ್ಲಿ ಕರಾವಳಿ ಕನ್ನಡಿಗರಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಇದನ್ನು ಹೊರತುಪಡಿಸಿ ಇಡೀ ಇಸ್ರೇಲ್‌ನಲ್ಲಿ ಭಾರತೀಯರು ಅಲ್ಲಲ್ಲಿ ಹಂಚಿಹೋಗಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಸ್ರೇಲ್‌ನಲ್ಲಿರುವ ಎಲ್ಲರನ್ನೂ ಸುರಕ್ಷಿತವಾಗಿ ಕರೆ ತರುವ ಕೆಲಸ ನಮ್ಮ ಕೇಂದ್ರ ಸರ್ಕಾರ ಮಾಡಲಿದೆ. ಈಗಾಗಲೇ ಸಚಿವ ಮುರಳೀಧರನ್ ಅವರೊಂದಿಗೂ ಮಾತನಾಡಿದ್ದೇನೆ. ಯುದ್ಧದ ಪರಿಸ್ಥಿತಿ ಇರುವಾಗ ಅವರ ಮನೆಯವರಿಗೆ ಭಯದ ವಾತಾವರಣ ಇರುತ್ತದೆ. ಈಗಲೂ ಇಸ್ರೇಲ್‌ನಲ್ಲಿ ಸುರಕ್ಷಿತವಾಗಿ ಇದ್ದರೂ ಭಯದ ವಾತಾವರಣ ಇದೆ ಎಂದು ಹೇಳಿದರು. ರಷ್ಯಾ-ಉಕ್ರೇನ್ ಯುದ್ಧ ಆದಾಗಲೂ ಇದೇ ಪರಿಸ್ಥಿತಿ ಇತ್ತು. ಆಗಲೂ ಎಲ್ಲರ ಮನೆಗೆ ತೆರಳಿ ಸಮಾಧಾನ ಹೇಳಿದ್ದೇವೆ. ಮೋದಿ ಸರ್ಕಾರ ಆಗಲೂ ಅಲ್ಲಿದ್ದವರ ರಕ್ಷಣೆ ಮಾಡಿತ್ತು. ಈಗಲೂ ನಾನು ರಾಯಭಾರಿ ಕಚೇರಿ ಜೊತೆಗೆ ಸಂಪರ್ಕದಲ್ಲಿದೇನೆ. ಯಾರೂ ಭಯ ಪಡುವ ಅಗತ್ಯ ಇಲ್ಲ. ಏನೇ ಆತಂಕ ಇದ್ದರೂ ನನ್ನನ್ನು ನೇರವಾಗಿ ಸಂಪರ್ಕಿಸಿ ಎಂದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅನುಭವದ ಕೃಷಿಯಿಂದ ಡಾಟಾ ಆಧಾರಿತ “ಸ್ಮಾರ್ಟ್ ಫಾರ್ಮಿಂಗ್ “‌ ಕಡೆಗೆ ಆಧುನಿಕ ಕೃಷಿ

ಸ್ಮಾರ್ಟ್ ಕೃಷಿಯು ಕೃಷಿ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದೆ. ತಂತ್ರಜ್ಞಾನ, ಯಾಂತ್ರೀಕರಣ ಮತ್ತು…

5 hours ago

ಜೂ.30 ರಿಂದ ಮಂಡ್ಯ ಮೈಶುಗರ್ ಕಾರ್ಖಾನೆಯಲ್ಲಿ  ಕಬ್ಬು ಅರೆಯುವ ಪ್ರಕ್ರಿಯೆ ಆರಂಭ

ಮಂಡ್ಯ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ…

6 hours ago

ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿ | ಸಚಿವ ಅಮಿತ್‌ ಶಾ ಹೇಳಿಕೆ

ಇಂದು ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯಾಗುತ್ತಿದೆ. 8 ಲಕ್ಷಕ್ಕೂ ಅಧಿಕ ಸಹಕಾರಿ ಸಂಘಗಳು…

6 hours ago

ಈ 5 ವಸ್ತು ಮನೆಯ ದಕ್ಷಿಣ ದಿಕ್ಕಿನಲ್ಲಿ ಇಟ್ಟರೆ ಶ್ರೀಮಂತರಾಗುವುದು ಗ್ಯಾರಂಟಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

6 hours ago

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಂಭವ | ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು, ಶಿವಮೊಗ್ಗ, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ…

13 hours ago

ಮಣಿಪುರದಲ್ಲಿ 68 ಟನ್ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಡಿಕೆ ವಶ

ಅಕ್ರಮವಾಗಿ ಸುಮಾರು 68 ಟನ್‌ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಪೊಲೀಸರು…

1 day ago