Advertisement
ಪ್ರಮುಖ

#IsraelHamasWar | ಇಸ್ರೇಲ್‌ನಲ್ಲಿ ಸಿಲುಕಿರುವ 5 ಸಾವಿರಕ್ಕೂ ಅಧಿಕ ಕರಾವಳಿಗರು | ರಕ್ಷಣೆಗೆ ವಿದೇಶಾಂಗ ಸಚಿವರಿಗೆ ಪತ್ರ ಬರೆದ ನಳಿನ್ ಕುಮಾರ್ ಕಟೀಲ್ |

Share

ಹಮಾಸ್ ಉಗ್ರರ ದಾಳಿಗೆ ತತ್ತರಿಸಿರುವ ಇಸ್ರೇಲ್ ನಲ್ಲಿ  12 ಸಾವಿರಕ್ಕೂ ಅಧಿಕ ಮಂದಿ ಕರ್ನಾಟಕದ ಕರಾವಳಿಯವರಿದ್ದಾರೆ. ಕೇರಳದ ಗಡಿನಾಡು ಮಂಜೇಶ್ವರದಿಂದ ತೊಡಗಿ ಗೋವಾದ ಕಾರವಾರ ಗಡಿವರೆಗಿನ ಮಂದಿ ಇಸ್ರೇಲ್‌ನಲ್ಲಿ ಕೇರ್ ಗೀವರ್ಸ್ ಕೆಲಸ ಮಾಡಿಕೊಂಡಿದ್ದಾರೆ. ಇವರೆಲ್ಲರೂ ಯುದ್ಧಭೂಮಿ ಜೆರುಸಲೇಂನ ಅಕ್ಕಪಕ್ಕ ಇದ್ದರೂ ಸದ್ಯಕ್ಕೆ ಸುರಕ್ಷಿತವಾಗಿದ್ದಾರೆ.

ಈಗಾಗಲೇ ವಿದೇಶಾಂಗ ಇಲಾಖೆ ಸಚಿವರಿಗೆ ಪತ್ರr ಬರೆದು ಯಾರಿಗೂ ಅಪಾಯ ಆಗದಂತೆ ರಕ್ಷಣೆ ಒದಗಿಸಲು ವಿನಂತಿಸಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್#NalinKumarKateel ಹೇಳಿಕೆ ನೀಡಿದ್ದಾರೆ. ಇಸ್ರೇಲ್‌ಗೆ ತೆರಳಿದ ಕರಾವಳಿ ಮಂದಿಯಲ್ಲಿ ಶೇಕಡ50ರಷ್ಟು ಮಹಿಳೆಯರೇ ಇದ್ದಾರೆ. ಅದರಲ್ಲೂ ಹೆಚ್ಚಿನವರು ಕ್ರಿಶ್ಚಿಯನ್ನರು. ಸಣ್ಣ ಪ್ರಮಾಣದಲ್ಲಿ ಹಿಂದುಗಳಿದ್ದಾರೆ. ದ.ಕ. ಜಿಲ್ಲೆಯ 8 ಅಧಿಕ ಮಂದಿ ಇದರಲ್ಲಿ ಸೇರಿದ್ದಾರೆ. ಕನ್ನಡಿಗರು ಇಸ್ರೇಲ್‌ನಲ್ಲಿ ಯುದ್ಧಪೀಡಿತ ಪ್ರದೇಶದ ಸನಿಹ ಅಪಾಯವನ್ನೂ ಲೆಕ್ಕಿಸದೆ ಕೆಲಸ ಮಾಡುತ್ತಿದ್ದಾರೆ ಇಸ್ರೇಲ್‌ನ ಜೆರುಸಲೇಂ, ಅವೀವ್ ಅರ್ಜೀಲಿಯಂ ಹಾಗೂ ಹೈಫಾ ಈ ನಾಲ್ಕು ಪ್ರಮುಖ ಪ್ರದೇಶಗಳಲ್ಲಿ ಕರಾವಳಿ ಕನ್ನಡಿಗರಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಇದನ್ನು ಹೊರತುಪಡಿಸಿ ಇಡೀ ಇಸ್ರೇಲ್‌ನಲ್ಲಿ ಭಾರತೀಯರು ಅಲ್ಲಲ್ಲಿ ಹಂಚಿಹೋಗಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಸ್ರೇಲ್‌ನಲ್ಲಿರುವ ಎಲ್ಲರನ್ನೂ ಸುರಕ್ಷಿತವಾಗಿ ಕರೆ ತರುವ ಕೆಲಸ ನಮ್ಮ ಕೇಂದ್ರ ಸರ್ಕಾರ ಮಾಡಲಿದೆ. ಈಗಾಗಲೇ ಸಚಿವ ಮುರಳೀಧರನ್ ಅವರೊಂದಿಗೂ ಮಾತನಾಡಿದ್ದೇನೆ. ಯುದ್ಧದ ಪರಿಸ್ಥಿತಿ ಇರುವಾಗ ಅವರ ಮನೆಯವರಿಗೆ ಭಯದ ವಾತಾವರಣ ಇರುತ್ತದೆ. ಈಗಲೂ ಇಸ್ರೇಲ್‌ನಲ್ಲಿ ಸುರಕ್ಷಿತವಾಗಿ ಇದ್ದರೂ ಭಯದ ವಾತಾವರಣ ಇದೆ ಎಂದು ಹೇಳಿದರು. ರಷ್ಯಾ-ಉಕ್ರೇನ್ ಯುದ್ಧ ಆದಾಗಲೂ ಇದೇ ಪರಿಸ್ಥಿತಿ ಇತ್ತು. ಆಗಲೂ ಎಲ್ಲರ ಮನೆಗೆ ತೆರಳಿ ಸಮಾಧಾನ ಹೇಳಿದ್ದೇವೆ. ಮೋದಿ ಸರ್ಕಾರ ಆಗಲೂ ಅಲ್ಲಿದ್ದವರ ರಕ್ಷಣೆ ಮಾಡಿತ್ತು. ಈಗಲೂ ನಾನು ರಾಯಭಾರಿ ಕಚೇರಿ ಜೊತೆಗೆ ಸಂಪರ್ಕದಲ್ಲಿದೇನೆ. ಯಾರೂ ಭಯ ಪಡುವ ಅಗತ್ಯ ಇಲ್ಲ. ಏನೇ ಆತಂಕ ಇದ್ದರೂ ನನ್ನನ್ನು ನೇರವಾಗಿ ಸಂಪರ್ಕಿಸಿ ಎಂದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

8 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

2 days ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

3 days ago