Advertisement
ಪ್ರಮುಖ

#IsraelHamasWar | ಇಸ್ರೇಲ್‌ನಲ್ಲಿ ಸಿಲುಕಿರುವ 5 ಸಾವಿರಕ್ಕೂ ಅಧಿಕ ಕರಾವಳಿಗರು | ರಕ್ಷಣೆಗೆ ವಿದೇಶಾಂಗ ಸಚಿವರಿಗೆ ಪತ್ರ ಬರೆದ ನಳಿನ್ ಕುಮಾರ್ ಕಟೀಲ್ |

Share

ಹಮಾಸ್ ಉಗ್ರರ ದಾಳಿಗೆ ತತ್ತರಿಸಿರುವ ಇಸ್ರೇಲ್ ನಲ್ಲಿ  12 ಸಾವಿರಕ್ಕೂ ಅಧಿಕ ಮಂದಿ ಕರ್ನಾಟಕದ ಕರಾವಳಿಯವರಿದ್ದಾರೆ. ಕೇರಳದ ಗಡಿನಾಡು ಮಂಜೇಶ್ವರದಿಂದ ತೊಡಗಿ ಗೋವಾದ ಕಾರವಾರ ಗಡಿವರೆಗಿನ ಮಂದಿ ಇಸ್ರೇಲ್‌ನಲ್ಲಿ ಕೇರ್ ಗೀವರ್ಸ್ ಕೆಲಸ ಮಾಡಿಕೊಂಡಿದ್ದಾರೆ. ಇವರೆಲ್ಲರೂ ಯುದ್ಧಭೂಮಿ ಜೆರುಸಲೇಂನ ಅಕ್ಕಪಕ್ಕ ಇದ್ದರೂ ಸದ್ಯಕ್ಕೆ ಸುರಕ್ಷಿತವಾಗಿದ್ದಾರೆ.

ಈಗಾಗಲೇ ವಿದೇಶಾಂಗ ಇಲಾಖೆ ಸಚಿವರಿಗೆ ಪತ್ರr ಬರೆದು ಯಾರಿಗೂ ಅಪಾಯ ಆಗದಂತೆ ರಕ್ಷಣೆ ಒದಗಿಸಲು ವಿನಂತಿಸಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್#NalinKumarKateel ಹೇಳಿಕೆ ನೀಡಿದ್ದಾರೆ. ಇಸ್ರೇಲ್‌ಗೆ ತೆರಳಿದ ಕರಾವಳಿ ಮಂದಿಯಲ್ಲಿ ಶೇಕಡ50ರಷ್ಟು ಮಹಿಳೆಯರೇ ಇದ್ದಾರೆ. ಅದರಲ್ಲೂ ಹೆಚ್ಚಿನವರು ಕ್ರಿಶ್ಚಿಯನ್ನರು. ಸಣ್ಣ ಪ್ರಮಾಣದಲ್ಲಿ ಹಿಂದುಗಳಿದ್ದಾರೆ. ದ.ಕ. ಜಿಲ್ಲೆಯ 8 ಅಧಿಕ ಮಂದಿ ಇದರಲ್ಲಿ ಸೇರಿದ್ದಾರೆ. ಕನ್ನಡಿಗರು ಇಸ್ರೇಲ್‌ನಲ್ಲಿ ಯುದ್ಧಪೀಡಿತ ಪ್ರದೇಶದ ಸನಿಹ ಅಪಾಯವನ್ನೂ ಲೆಕ್ಕಿಸದೆ ಕೆಲಸ ಮಾಡುತ್ತಿದ್ದಾರೆ ಇಸ್ರೇಲ್‌ನ ಜೆರುಸಲೇಂ, ಅವೀವ್ ಅರ್ಜೀಲಿಯಂ ಹಾಗೂ ಹೈಫಾ ಈ ನಾಲ್ಕು ಪ್ರಮುಖ ಪ್ರದೇಶಗಳಲ್ಲಿ ಕರಾವಳಿ ಕನ್ನಡಿಗರಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಇದನ್ನು ಹೊರತುಪಡಿಸಿ ಇಡೀ ಇಸ್ರೇಲ್‌ನಲ್ಲಿ ಭಾರತೀಯರು ಅಲ್ಲಲ್ಲಿ ಹಂಚಿಹೋಗಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಸ್ರೇಲ್‌ನಲ್ಲಿರುವ ಎಲ್ಲರನ್ನೂ ಸುರಕ್ಷಿತವಾಗಿ ಕರೆ ತರುವ ಕೆಲಸ ನಮ್ಮ ಕೇಂದ್ರ ಸರ್ಕಾರ ಮಾಡಲಿದೆ. ಈಗಾಗಲೇ ಸಚಿವ ಮುರಳೀಧರನ್ ಅವರೊಂದಿಗೂ ಮಾತನಾಡಿದ್ದೇನೆ. ಯುದ್ಧದ ಪರಿಸ್ಥಿತಿ ಇರುವಾಗ ಅವರ ಮನೆಯವರಿಗೆ ಭಯದ ವಾತಾವರಣ ಇರುತ್ತದೆ. ಈಗಲೂ ಇಸ್ರೇಲ್‌ನಲ್ಲಿ ಸುರಕ್ಷಿತವಾಗಿ ಇದ್ದರೂ ಭಯದ ವಾತಾವರಣ ಇದೆ ಎಂದು ಹೇಳಿದರು. ರಷ್ಯಾ-ಉಕ್ರೇನ್ ಯುದ್ಧ ಆದಾಗಲೂ ಇದೇ ಪರಿಸ್ಥಿತಿ ಇತ್ತು. ಆಗಲೂ ಎಲ್ಲರ ಮನೆಗೆ ತೆರಳಿ ಸಮಾಧಾನ ಹೇಳಿದ್ದೇವೆ. ಮೋದಿ ಸರ್ಕಾರ ಆಗಲೂ ಅಲ್ಲಿದ್ದವರ ರಕ್ಷಣೆ ಮಾಡಿತ್ತು. ಈಗಲೂ ನಾನು ರಾಯಭಾರಿ ಕಚೇರಿ ಜೊತೆಗೆ ಸಂಪರ್ಕದಲ್ಲಿದೇನೆ. ಯಾರೂ ಭಯ ಪಡುವ ಅಗತ್ಯ ಇಲ್ಲ. ಏನೇ ಆತಂಕ ಇದ್ದರೂ ನನ್ನನ್ನು ನೇರವಾಗಿ ಸಂಪರ್ಕಿಸಿ ಎಂದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

5 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

6 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

7 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

8 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

20 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

20 hours ago