ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |

March 6, 2025
12:27 PM
ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 60,000 ಕೆಜಿಗೂ ಹೆಚ್ಚು ಅಡಿಕೆಯು ಈಗ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. (Source:PTI)

ಬರ್ಮಾ ಅಡಿಕೆಯು ಕಳ್ಳದಾರಿಯ ಮೂಲಕ ಭಾರತದೊಳಕ್ಕೆ ಪ್ರವೇಶವಾಗುತ್ತಲೇ ಇದೆ. ಕಳೆದ ಕೆಲವು ಸಮಯಗಳಿಂದ ಈ ಮಾದರಿ ಅಕ್ರಮ ಅಡಿಕೆ ತಡೆಗೆ ಇಲಾಖೆಗಳು ಪ್ರಯತ್ನ ಮಾಡುತ್ತಿವೆ. ಅಸ್ಸಾಂ ಗಡಿಭದ್ರತಾ ಪಡೆ ಅಕ್ರಮವಾಗಿ ಅಡಿಕೆ ಸಾಗಾಟವನ್ನು ತಡೆಯುತ್ತಿದೆ. ಇದೀಗ ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 60,000 ಕೆಜಿಗೂ ಹೆಚ್ಚು ಅಡಿಕೆಯು ಈಗ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಸದ್ಯ ವಶಪಡಿಸಿಕೊಂಡ ಅಡಿಕೆಯ ಸೂಕ್ತ ದಾಖಲೆಗಳನ್ನು ನೀಡಿ ಸರಕುಗಳನ್ನು ಬಿಡಿಸಿಕೊಳ್ಳಲು ಯಾರೊಬ್ಬರೂ ಮುಂದೆ ಬರುತ್ತಿಲ್ಲ…!. ಹಾಗಿದ್ದರೆ ಈ ಅಡಿಕೆಯ ಒಡೆಯರು ಯಾರು..?………ಮುಂದೆ ಓದಿ……..

ಅಸ್ಸಾಂನ ಲಖಿಪುರ ಪೊಲೀಸ್ ಠಾಣೆ ವಶಪಡಿಸಿಕೊಂಡ ಅಡಿಕೆಯು ಬೃಹತ್ ಸಂಗ್ರಹವಾಗಿದೆ. ದಾಸ್ತಾನುಗಳು ಹೆಚ್ಚುತ್ತಿದೆ. ಯಾವುದೇ ಮಾಲೀಕರು ತಮ್ಮ ಜಮೀನು ಹಾಗೂ ಸೂಕ್ತ ದಾಖಲೆಗಳನ್ನು ನೀಡಿ ವಶಪಡಿಸಿಕೊಂಡ ಅಡಿಕೆಯನ್ನು ಹಿಂಪಡೆಯಬೇಕಿತ್ತು, ಆದರೆ ಯಾರೊಬ್ಬರೂ ದಾಖಲೆ ನೀಡಲು ಬಂದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಪ್ರತ್ಯೇಕ ಕಾರ್ಯಾಚರಣೆಗಳ ಪರಿಣಾಮವಾಗಿ 60,420 ಕೆಜಿ ಅಡಿಕೆಯನ್ನು ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದರು.  ಇವುಗಳ ಕಾನೂನುಬದ್ಧ ಮಾಲೀಕರನ್ನು ಪತ್ತೆಹಚ್ಚಲು ಪದೇ ಪದೇ ಪ್ರಯತ್ನಿಸಿದರೂ ಯಾರೊಬ್ಬರೂ ದಾಖಲೆ ನೀಡಲು ಬಂದಿಲ್ಲ.

ಇಷ್ಟು ದೊಡ್ಡ ಪ್ರಮಾಣದಲ್ಲಿ ಅಡಿಕೆಯು ಉಳಿದುಕೊಳ್ಳಲು ಕಾರಣವೇನು..? ಅಡಿಕೆ ಸಾಗಾಟದ ಬಗ್ಗೆ ದಾಖಲೆ ನೀಡದೆ ಇರಲು ಕಾರಣವೇನು..? ಹೀಗಾಗಿ ಈ ವಶಪಡಿಸಿಕೊಂಡ ಸರಕುಗಳು ಅಕ್ರಮ ವ್ಯಾಪಾರಕ್ಕೆ ಸಂಬಂಧಿಸಿವೆಯೇ ಎಂದು ಅಧಿಕಾರಿಗಳು ಸಂದೇಹಪಟ್ಟಿದ್ದಾರೆ ಅಲ್ಲದೆ,  ಈಗಾಗಲೇ ಅಡಿಕೆಯ ಬಗ್ಗೆ ಇರುವ ಊಹಾಪೋಹಗಳಿಗೆ  ಈ ಅಂಶವು ಪುಷ್ಟಿ ನೀಡುತ್ತಿದೆ ಎಂದು ಅಧಿಕಾರಿ ಹೇಳಿದರು. ಒಂದು ವೇಳೆ  ಮುಟ್ಟುಗೋಲು ಹಾಕಿಕೊಂಡ ಸರಕುಗಳ ಸರಿಯಾದ ಮಾಲೀಕತ್ವವನ್ನು ಯಾರೊಬ್ಬರೂ ಸಲ್ಲಿಸದೇ  ಇದ್ದರೆ ಅಡಿಕೆಯನ್ನು ಮುಂದಿನ ಕಾನೂನು ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. (ಪಿಟಿಐ)

Over 60,000 kgs of unclaimed Arecanuts, which have been seized during separate operations, in Lakhipur police station in Assam’s Cachar district has emerged as a problem for the local authorities, as no one has come forward to claim the goods, a senior officer said.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ
January 11, 2026
9:58 AM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ
January 11, 2026
8:30 AM
by: ದ ರೂರಲ್ ಮಿರರ್.ಕಾಂ
ಬಾಯಿಯ ಕ್ಯಾನ್ಸರ್ ಭೀತಿ ಕಡಿಮೆ ಮಾಡಲಿದೆಯೇ ‘ಇ-ಬೀಮ್’ ತಂತ್ರಜ್ಞಾನ? ಅಡಿಕೆ ಸಂಸ್ಕರಣೆಯಲ್ಲಿ ಹೊಸ ಮನ್ವಂತರ!
January 11, 2026
7:36 AM
by: ದ ರೂರಲ್ ಮಿರರ್.ಕಾಂ
ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ
January 10, 2026
10:35 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror