Advertisement
MIRROR FOCUS

ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |

Share

ಬರ್ಮಾ ಅಡಿಕೆಯು ಕಳ್ಳದಾರಿಯ ಮೂಲಕ ಭಾರತದೊಳಕ್ಕೆ ಪ್ರವೇಶವಾಗುತ್ತಲೇ ಇದೆ. ಕಳೆದ ಕೆಲವು ಸಮಯಗಳಿಂದ ಈ ಮಾದರಿ ಅಕ್ರಮ ಅಡಿಕೆ ತಡೆಗೆ ಇಲಾಖೆಗಳು ಪ್ರಯತ್ನ ಮಾಡುತ್ತಿವೆ. ಅಸ್ಸಾಂ ಗಡಿಭದ್ರತಾ ಪಡೆ ಅಕ್ರಮವಾಗಿ ಅಡಿಕೆ ಸಾಗಾಟವನ್ನು ತಡೆಯುತ್ತಿದೆ. ಇದೀಗ ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 60,000 ಕೆಜಿಗೂ ಹೆಚ್ಚು ಅಡಿಕೆಯು ಈಗ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಸದ್ಯ ವಶಪಡಿಸಿಕೊಂಡ ಅಡಿಕೆಯ ಸೂಕ್ತ ದಾಖಲೆಗಳನ್ನು ನೀಡಿ ಸರಕುಗಳನ್ನು ಬಿಡಿಸಿಕೊಳ್ಳಲು ಯಾರೊಬ್ಬರೂ ಮುಂದೆ ಬರುತ್ತಿಲ್ಲ…!. ಹಾಗಿದ್ದರೆ ಈ ಅಡಿಕೆಯ ಒಡೆಯರು ಯಾರು..?………ಮುಂದೆ ಓದಿ……..

ಅಸ್ಸಾಂನ ಲಖಿಪುರ ಪೊಲೀಸ್ ಠಾಣೆ ವಶಪಡಿಸಿಕೊಂಡ ಅಡಿಕೆಯು ಬೃಹತ್ ಸಂಗ್ರಹವಾಗಿದೆ. ದಾಸ್ತಾನುಗಳು ಹೆಚ್ಚುತ್ತಿದೆ. ಯಾವುದೇ ಮಾಲೀಕರು ತಮ್ಮ ಜಮೀನು ಹಾಗೂ ಸೂಕ್ತ ದಾಖಲೆಗಳನ್ನು ನೀಡಿ ವಶಪಡಿಸಿಕೊಂಡ ಅಡಿಕೆಯನ್ನು ಹಿಂಪಡೆಯಬೇಕಿತ್ತು, ಆದರೆ ಯಾರೊಬ್ಬರೂ ದಾಖಲೆ ನೀಡಲು ಬಂದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಪ್ರತ್ಯೇಕ ಕಾರ್ಯಾಚರಣೆಗಳ ಪರಿಣಾಮವಾಗಿ 60,420 ಕೆಜಿ ಅಡಿಕೆಯನ್ನು ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದರು.  ಇವುಗಳ ಕಾನೂನುಬದ್ಧ ಮಾಲೀಕರನ್ನು ಪತ್ತೆಹಚ್ಚಲು ಪದೇ ಪದೇ ಪ್ರಯತ್ನಿಸಿದರೂ ಯಾರೊಬ್ಬರೂ ದಾಖಲೆ ನೀಡಲು ಬಂದಿಲ್ಲ.

ಇಷ್ಟು ದೊಡ್ಡ ಪ್ರಮಾಣದಲ್ಲಿ ಅಡಿಕೆಯು ಉಳಿದುಕೊಳ್ಳಲು ಕಾರಣವೇನು..? ಅಡಿಕೆ ಸಾಗಾಟದ ಬಗ್ಗೆ ದಾಖಲೆ ನೀಡದೆ ಇರಲು ಕಾರಣವೇನು..? ಹೀಗಾಗಿ ಈ ವಶಪಡಿಸಿಕೊಂಡ ಸರಕುಗಳು ಅಕ್ರಮ ವ್ಯಾಪಾರಕ್ಕೆ ಸಂಬಂಧಿಸಿವೆಯೇ ಎಂದು ಅಧಿಕಾರಿಗಳು ಸಂದೇಹಪಟ್ಟಿದ್ದಾರೆ ಅಲ್ಲದೆ,  ಈಗಾಗಲೇ ಅಡಿಕೆಯ ಬಗ್ಗೆ ಇರುವ ಊಹಾಪೋಹಗಳಿಗೆ  ಈ ಅಂಶವು ಪುಷ್ಟಿ ನೀಡುತ್ತಿದೆ ಎಂದು ಅಧಿಕಾರಿ ಹೇಳಿದರು. ಒಂದು ವೇಳೆ  ಮುಟ್ಟುಗೋಲು ಹಾಕಿಕೊಂಡ ಸರಕುಗಳ ಸರಿಯಾದ ಮಾಲೀಕತ್ವವನ್ನು ಯಾರೊಬ್ಬರೂ ಸಲ್ಲಿಸದೇ  ಇದ್ದರೆ ಅಡಿಕೆಯನ್ನು ಮುಂದಿನ ಕಾನೂನು ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. (ಪಿಟಿಐ)

Over 60,000 kgs of unclaimed Arecanuts, which have been seized during separate operations, in Lakhipur police station in Assam’s Cachar district has emerged as a problem for the local authorities, as no one has come forward to claim the goods, a senior officer said.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

4 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

4 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

19 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago