Advertisement
MIRROR FOCUS

ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |

Share

ಬರ್ಮಾ ಅಡಿಕೆಯು ಕಳ್ಳದಾರಿಯ ಮೂಲಕ ಭಾರತದೊಳಕ್ಕೆ ಪ್ರವೇಶವಾಗುತ್ತಲೇ ಇದೆ. ಕಳೆದ ಕೆಲವು ಸಮಯಗಳಿಂದ ಈ ಮಾದರಿ ಅಕ್ರಮ ಅಡಿಕೆ ತಡೆಗೆ ಇಲಾಖೆಗಳು ಪ್ರಯತ್ನ ಮಾಡುತ್ತಿವೆ. ಅಸ್ಸಾಂ ಗಡಿಭದ್ರತಾ ಪಡೆ ಅಕ್ರಮವಾಗಿ ಅಡಿಕೆ ಸಾಗಾಟವನ್ನು ತಡೆಯುತ್ತಿದೆ. ಇದೀಗ ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 60,000 ಕೆಜಿಗೂ ಹೆಚ್ಚು ಅಡಿಕೆಯು ಈಗ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಸದ್ಯ ವಶಪಡಿಸಿಕೊಂಡ ಅಡಿಕೆಯ ಸೂಕ್ತ ದಾಖಲೆಗಳನ್ನು ನೀಡಿ ಸರಕುಗಳನ್ನು ಬಿಡಿಸಿಕೊಳ್ಳಲು ಯಾರೊಬ್ಬರೂ ಮುಂದೆ ಬರುತ್ತಿಲ್ಲ…!. ಹಾಗಿದ್ದರೆ ಈ ಅಡಿಕೆಯ ಒಡೆಯರು ಯಾರು..?………ಮುಂದೆ ಓದಿ……..

ಅಸ್ಸಾಂನ ಲಖಿಪುರ ಪೊಲೀಸ್ ಠಾಣೆ ವಶಪಡಿಸಿಕೊಂಡ ಅಡಿಕೆಯು ಬೃಹತ್ ಸಂಗ್ರಹವಾಗಿದೆ. ದಾಸ್ತಾನುಗಳು ಹೆಚ್ಚುತ್ತಿದೆ. ಯಾವುದೇ ಮಾಲೀಕರು ತಮ್ಮ ಜಮೀನು ಹಾಗೂ ಸೂಕ್ತ ದಾಖಲೆಗಳನ್ನು ನೀಡಿ ವಶಪಡಿಸಿಕೊಂಡ ಅಡಿಕೆಯನ್ನು ಹಿಂಪಡೆಯಬೇಕಿತ್ತು, ಆದರೆ ಯಾರೊಬ್ಬರೂ ದಾಖಲೆ ನೀಡಲು ಬಂದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಪ್ರತ್ಯೇಕ ಕಾರ್ಯಾಚರಣೆಗಳ ಪರಿಣಾಮವಾಗಿ 60,420 ಕೆಜಿ ಅಡಿಕೆಯನ್ನು ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದರು.  ಇವುಗಳ ಕಾನೂನುಬದ್ಧ ಮಾಲೀಕರನ್ನು ಪತ್ತೆಹಚ್ಚಲು ಪದೇ ಪದೇ ಪ್ರಯತ್ನಿಸಿದರೂ ಯಾರೊಬ್ಬರೂ ದಾಖಲೆ ನೀಡಲು ಬಂದಿಲ್ಲ.

Advertisement

ಇಷ್ಟು ದೊಡ್ಡ ಪ್ರಮಾಣದಲ್ಲಿ ಅಡಿಕೆಯು ಉಳಿದುಕೊಳ್ಳಲು ಕಾರಣವೇನು..? ಅಡಿಕೆ ಸಾಗಾಟದ ಬಗ್ಗೆ ದಾಖಲೆ ನೀಡದೆ ಇರಲು ಕಾರಣವೇನು..? ಹೀಗಾಗಿ ಈ ವಶಪಡಿಸಿಕೊಂಡ ಸರಕುಗಳು ಅಕ್ರಮ ವ್ಯಾಪಾರಕ್ಕೆ ಸಂಬಂಧಿಸಿವೆಯೇ ಎಂದು ಅಧಿಕಾರಿಗಳು ಸಂದೇಹಪಟ್ಟಿದ್ದಾರೆ ಅಲ್ಲದೆ,  ಈಗಾಗಲೇ ಅಡಿಕೆಯ ಬಗ್ಗೆ ಇರುವ ಊಹಾಪೋಹಗಳಿಗೆ  ಈ ಅಂಶವು ಪುಷ್ಟಿ ನೀಡುತ್ತಿದೆ ಎಂದು ಅಧಿಕಾರಿ ಹೇಳಿದರು. ಒಂದು ವೇಳೆ  ಮುಟ್ಟುಗೋಲು ಹಾಕಿಕೊಂಡ ಸರಕುಗಳ ಸರಿಯಾದ ಮಾಲೀಕತ್ವವನ್ನು ಯಾರೊಬ್ಬರೂ ಸಲ್ಲಿಸದೇ  ಇದ್ದರೆ ಅಡಿಕೆಯನ್ನು ಮುಂದಿನ ಕಾನೂನು ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. (ಪಿಟಿಐ)

Over 60,000 kgs of unclaimed Arecanuts, which have been seized during separate operations, in Lakhipur police station in Assam’s Cachar district has emerged as a problem for the local authorities, as no one has come forward to claim the goods, a senior officer said.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

2 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

3 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

3 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

3 days ago