ಪ್ಯಾರಾ ಮೆಡಿಕಲ್ ಕೋರ್ಸ್ನ ಕೌನ್ಸೆಲಿಂಗ್ ಕೂಡಾ ಆಗಿಲ್ಲ. ಮ್ಯಾನೇಜ್ಮೆಂಟ್ ಸೀಟ್ ಫುಲ್ ಮಾಡಲು ಅವಕಾಶ ಮಾಡಿಕೊಟ್ಟು ಕ್ಲಾಸ್ ಆರಂಭಿಸಿದ್ದಾರೆ. ಆದರೆ ಅಪ್ಲಿಕೇಶನ್ ಹಾಕಿ ಸೀಟಿಗಾಗಿ ಕಾಯುತ್ತಾ ಇರುವ ವಿದ್ಯಾರ್ಥಿಗಳು ಅತಂತ್ರರಾಗಿದ್ದಾರೆ ಎಂದು ಮಾಜಿ ಸಚಿವ ಯುಟಿ ಖಾದರ್ ಹೇಳಿದರು.
ಮಂಗಳೂರು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಯು ಟಿ ಖಾದರ್, ಕೂಡಲೇ ಪ್ಯಾರಾ ಮೆಡಿಕಲ್, ನೀಟ್ ಕೌನ್ಸಿಲಿಂಗ್ ಮಾಡಲು ಸರ್ಕಾರ ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.ದ್ವಿತೀಯ ಪಿಯುಸಿ ಪರೀಕ್ಷೆ ಆದ ನಂತರ ನಮ್ಮಲ್ಲಿ ಫಲಿತಾಂಶ ಲೇಟಾಗಿ ಬರುತ್ತದೆ. ಹೀಗಾಗಿ ಕೌನ್ಸಿಲಿಂಗ್ ಅಲ್ಲದವರು ಬೇರೆ ಕೋರ್ಸ್ ಗೆ ಹೋಗಲು ಆಗಲ್ಲ. ಆಗ ಕೇರಳ ವಿದ್ಯಾರ್ಥಿಗಳು ಇಲ್ಲಿಗೆ ಬಂದು ಅಡ್ಮಿಶನ್ ಮಾಡಿಸುತ್ತಾರೆ ಎಂದರು.ಹೀಗಾಗಿ ವಿದ್ಯಾರ್ಥಿಗಳ ನೋವನ್ನು ಸರ್ಕಾರ ಅರಿತುಕೊಳ್ಳಬೇಕು ಎಂದು ಯು.ಟಿ ಖಾದರ್ ಆಗ್ರಹಿಸಿದರು.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…