ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೋಗಿಗಳಿಗೆ ಪೂರೈಕೆ ಮಾಡಲು ಸಾಕಷ್ಟು ದ್ರವೀಕೃತ ಮೆಡಿಕಲ್ ಆಕ್ಸಿಜನ್(O2) ಪೂರೈಕೆಯಾಗಿದ್ದು , ಸಾರ್ವಜನಿಕರು ಯಾವುದೇ ವದಂತಿಗಳಿಗೆ ಭಯಪಡದೆ ಕೋವಿಡ್-19 ರ ನಿಯಮ ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಸುರಕ್ಷಿತವಾಗಿರಬೇಕು ಎಂದು ಜಿಲ್ಲಾಧಿಕಾರಿಗಳು ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋವಿಡ್ -19 ಸೋಂಕಿನಿಂದ ಪೀಡಿತರಾಗಿರುವ ರೋಗಿಗಳಿಗೆ ಆಕ್ಸಿಜನಿನ(O2) ಕೊರತೆ ಇರುವುದನ್ನು ಗಮನಿಸಿ, ಆಕ್ಸಿಜನ್ ನಮ್ಮ ಸೂಕ್ತ ಸಮಯದಲ್ಲಿ ಅವಶ್ಯವಿರುವವರಿಗೆ ಒದಗಿಸಲು ಕ್ರಮಕೈಗೊಂಡಿದ್ದು, ಅದರಂತೆ ಬಹ್ರೈನ್ ನಿಂದ 2 ಕಂಟೈನರ್ ಗಳಲ್ಲಿ ತಲಾ 30 ಟನ್ಗಳ ದ್ರವೀಕೃತ ಮೆಡಿಕಲ್ ಆಕ್ಸಿಜನ್ ಅನ್ನು ಬಹ್ರೈನ್ ನ ಮನಾಮಾ ಬಂದರಿನಿಂದ ಹೊರಟಿರುವ ನೌಕಾ ಪಡೆಯ ಐ.ಎನ್.ಎಸ್. ತಲ್ವಾರ್ ಹಡಗು ನವ ಮಂಗಳೂರು ಬಂದರನ್ನು ತಲುಪಿದೆ.
ಆಕ್ಸಿಜನ್ ಕಂಟೇನರ್ ಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳೀನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ವೈ ಶೆಟ್ಟಿ, ಮಂಗಳೂರು ಮಹಾನಗರಪಾಲಿಕೆ ಮಹಾಪೌರರಾದ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಡಾ. ಕುಮಾರ್ ಇವರುಗಳ ಉಪಸ್ಥಿತಿಯಲ್ಲಿ ಇಂಡಿಯಾನ್ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಎಸ್.ವಿ ಪ್ರಭಾಕರ್ ಶರ್ಮ ಇವರು ಜಿಲ್ಲಾಡಳಿತಕ್ಕೆ ಹಸ್ತಾಂತರಿಸುತ್ತಾರೆ.
ಈ 2 ಆಕ್ಸಿಜನ್ ಕಂಟೇನರ್ ಗಳನ್ನು ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ದೆಹಲಿ ಹಾಗೂ ಇಂಡಿಯನ್ ಆಯಿಲ್ ಕಾರ್ಪೋರೇಷನ್ ರವರ ಸಹಯೋಗದೊಂದಿಗೆ ಒಪರೇಷನ್ ಸಮುದ್ರ ಸೇತು-2 ರ ಅಡಿ ಸಂಯೋಜಿಸಿ ನವ ಮಂಗಳೂರು ಬಂದರಿಗೆ ತರಲಾಗಿದೆ.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…