Advertisement
MIRROR FOCUS

ಎಲ್ಲಾ ಆಯ್ತು.. ಈಗ ಪಾನ್‌ ಉಗುಳುವುದು ಜಾಗತಿಕ ಸಮಸ್ಯೆಯಂತೆ…!

Share

ಸಾರ್ವಜನಿಕ ಆರೋಗ್ಯ ಮತ್ತು ಕಸದ ಸಮಸ್ಯೆ ಹಾಗೂ ಪಾನ್‌ ಉಗುಳುವ ಸಮಸ್ಯೆಯ ಕಾರಣದಿಂದ ತಂಬಾಕು ಮತ್ತು ಅಡಿಕೆ ಹೊಂದಿರುವ ಪಾನ್ ಉತ್ಪನ್ನಗಳನ್ನು ನಿಷೇಧಿಸುವಂತೆ ‌ ಬ್ರೆಂಟ್ ಕೌನ್ಸಿಲ್  ಬ್ರಿಟಿಷ್ ಸರ್ಕಾರವನ್ನು ಕೋರಿದೆ. ಸಮಸ್ಯೆಯನ್ನು ಸಮಗ್ರವಾಗಿ ಪರಿಹರಿಸಲು ರಾಷ್ಟ್ರೀಯ ನೀತಿ ಬದಲಾವಣೆಗಳನ್ನು ಒತ್ತಾಯಿಸುತ್ತದೆ ಎಂದು ಬ್ರಿಟಿಷ್‌ ಸರ್ಕಾರವನ್ನು ಒತ್ತಾಯಿಸಿದೆ. ಈ ಹಿಂದೆಯೂ ಸರ್ಕಾರವನ್ನು ಒತ್ತಾಯ ಮಾಡಲಾಗಿತ್ತು, ಇದೀಗ ಮತ್ತೆ ಅಡಿಕೆ ಹಾನಿಕಾರಕ ಎಂದೂ ಉಲ್ಲೇಖಿಸಿ ಮನವಿ ಮಾಡಲಾಗಿದೆ.

ದಕ್ಷಿಣ ಏಷ್ಯಾದ ಪಾರಂಪರಿಕ ಜನಸಂಖ್ಯೆಯನ್ನು ಹೊಂದಿರುವ ವಾಯುವ್ಯ ಲಂಡನ್‌ನ ಒಂದು ಪ್ರಾಂತ್ಯವು, ಹೆಚ್ಚುತ್ತಿರುವ ಪಾನ್ ಅಗಿಯುವ ಮತ್ತು ಉಗುಳುವ ಸಮಸ್ಯೆಯ ಬಗ್ಗೆ ಈಗ ಚರ್ಚೆ ಆರಂಭವಾಗಿದೆ. ಹೆಚ್ಚುತ್ತಿರುವ ಸಾರ್ವಜನಿಕ ಆರೋಗ್ಯದ ಅಪಾಯ ಮತ್ತು ಸ್ವಚ್ಛತೆಯ ಸಮಸ್ಯೆ ಕಾಡುತ್ತಿದೆ ಎನ್ನುವುದು ಸಮಸ್ಯೆಯ ಮೂಲ. ಲಂಡನ್‌ನ ವೆಂಬ್ಲಿಯಂತಹ ಪ್ರದೇಶಗಳಲ್ಲಿ ಪಾದಚಾರಿ ದಾರಿಗಳು ಕೆಂಪು ಬಣ್ಣಗಳಿಂದ ಕೂಡಿದೆ.  ಇದರ ಸ್ವಚ್ಛತೆಗಾಗಿ  ಪ್ರತಿ ವರ್ಷ 30,000 ಪೌಂಡ್‌ಗಳಿಗಿಂತ ಹೆಚ್ಚು (ರೂ. 35 ಲಕ್ಷ) ಖರ್ಚು ಮಾಡುತ್ತಿದೆ ಎಂದು ಪ್ರಾಧಿಕಾರವು ಹೇಳಿದೆ.

ವೆಂಬ್ಲಿ ಮತ್ತು ಈಲಿಂಗ್ ರಸ್ತೆಯಂತಹ ಪ್ರದೇಶಗಳನ್ನು ನೋಡಿಕೊಳ್ಳುವ ಬ್ರೆಂಟ್ ಕೌನ್ಸಿಲ್, ತಂಬಾಕು ಅಥವಾ ಅಡಿಕೆ ಹೊಂದಿರುವ ಪಾನ್ ಉತ್ಪನ್ನಗಳ ಮೇಲೆ ತಕ್ಷಣದ ರಾಷ್ಟ್ರೀಯ ನಿಷೇಧವನ್ನು ಕೋರಿ ಯುಕೆ ಸರ್ಕಾರದ ಪ್ರಮುಖ ಮಂತ್ರಿಗಳಿಗೆ ಪತ್ರ ಬರೆದಿದೆ. ಅಡಿಕೆ, ತಂಬಾಕು ಮತ್ತು ಮಸಾಲೆಗಳಯನ್ನು ಅಗಿಯುವುದು ಮತ್ತು ನಂತರ ಉಗುಳುವುದು,  ಶುಚಿಗೊಳಿಸುವ ಯಂತ್ರಗಳಿಗೆ ಸಹ ಸ್ವಚ್ಛತೆಗೆ ಸಮಸ್ಯೆಯಾಗುತ್ತದೆ ಎಂದು ಕೌನ್ಸಿಲ್ ಹೇಳಿದೆ.  ಲಂಡನ್‌ನಾದ್ಯಂತ ಪಾನ್ ಅಥವಾ ಗುಟ್ಕಾದ ಕಾರಣದಿಂದ ಫುಟ್‌ಪಾತ್‌ಗಳು, ಅಂಗಡಿ ಮುಂಗಟ್ಟುಗಳು ಮತ್ತು ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛಗೊಳಿಸಲು ಪ್ರತಿ ವರ್ಷ 30,000 ಪೌಂಡ್‌ಗಳಿಗೂ ಹೆಚ್ಚು (ರೂ. 35 ಲಕ್ಷ) ಖರ್ಚು ಮಾಡಲಾಗುತ್ತಿದೆ. ಈ ಸಮಸ್ಯೆ ಈಗ ಲಂಡನ್‌ನಾದ್ಯಂತ ಗೋಚರಿಸುತ್ತಿದೆ ಎಂದು ಗಮನ ಸೆಳೆದಿದೆ. ತಂಬಾಕು ಅಥವಾ ಅಡಿಕೆ ಹೊಂದಿರುವ ಪಾನ್ ಮಾರಾಟವನ್ನು ನಿಷೇಧಿಸಲು, ಅಕ್ರಮ ಪೂರೈಕೆ ಜಾಲಗಳನ್ನು ಹತ್ತಿಕ್ಕಲು ಕ್ರಮ ಕೈಗೊಳ್ಳಬೇಕು ಎಂದು ಬ್ರೆಂಟ್ ಕೌನ್ಸಿಲ್ ಸರ್ಕಾರವನ್ನು ಕೇಳಿದೆ. ಈಗ ಪಾನ್‌ ಉಗುಳುವುದು ಸ್ಥಳಿಯ ಸಮಸ್ಯೆಯಲ್ಲ, ಅದೊಂದು ಜಾಗತಿಕ ಸಮಸ್ಯೆಯಾಗುತ್ತಿದೆ ಎಂದೂ ಉಲ್ಲೇಖಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

4 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

12 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

1 day ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

1 day ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

1 day ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

1 day ago