ICAR (ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರಲ್ ರಿಸರ್ಚ್) ಆಯೋಜಿಸಿದ ರೈತರ ಹಕ್ಕುಗಳ ಕುರಿತ ಮೊದಲ ಜಾಗತಿಕ ವಿಚಾರ ಸಂಕಿರಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕೃಷಿಕ, ಭತ್ತದ ಕೃಷಿಯಲ್ಲಿ ತಳಿ ತಪಸ್ವಿ ಎಂದು ಹೆಸರುವಾಸಿಯಾಗಿರುವ ಅಮೈ ದೇವರಾವ್ ಅವರನ್ನು ಪುರಸ್ಕರಿಸಲಾಯಿತು.
ರೈತರ ಹಕ್ಕುಗಳ ಕುರಿತ ಮೊದಲ ಜಾಗತಿಕ ವಿಚಾರ ಸಂಕಿರಣ ದೆಹಲಿಯಲ್ಲಿ ಆರಂಭಗೊಂಡಿದೆ. ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಕೃಷಿಯಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ನೀಡಿ ಪುರಸ್ಕರಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಅಮೈ ದೇವರಾಯರು ತಮ್ಮ ಐದು ಎಕರೆ ಗದ್ದೆಯಲ್ಲಿ 175ಕ್ಕೂ ಅಧಿಕ ಭತ್ತದ ತಳಿಗಳನ್ನು ಬೆಳೆದಿದ್ದಾರೆ. ಒಂದೇ ಗದ್ದೆಯಲ್ಲಿ ಅನೇಕ ಬಗೆಯ ತಳಿಗಳನ್ನು ನಾಟಿ ಮಾಡುವ ದೇವರಾವ್ ಅವರು ತಳಿ ತಪಸ್ವಿ ಎಂಬ ಬಿರುದಿಗೆ ಪಾತ್ರರಾಗಿದ್ದಾರೆ. 1988 ರಿಂದ ರಾಸಾಯನಿಕ ಬಳಕೆಗೆ ಸಂಪೂರ್ಣ ವಿದಾಯ ಹೇಳಿದ್ದಾರೆ. ಸಾವಯವ ಗೊಬ್ಬರನ್ನು ಬಳಸುವ ಇವರು ಭತ್ತವನ್ನು ಮನೆಯಲ್ಲಿಯೇ ಒಣಗಿಸಿ ಅಕ್ಕಿ ಮಾಡುತ್ತಾರೆ.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…