ICAR (ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರಲ್ ರಿಸರ್ಚ್) ಆಯೋಜಿಸಿದ ರೈತರ ಹಕ್ಕುಗಳ ಕುರಿತ ಮೊದಲ ಜಾಗತಿಕ ವಿಚಾರ ಸಂಕಿರಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕೃಷಿಕ, ಭತ್ತದ ಕೃಷಿಯಲ್ಲಿ ತಳಿ ತಪಸ್ವಿ ಎಂದು ಹೆಸರುವಾಸಿಯಾಗಿರುವ ಅಮೈ ದೇವರಾವ್ ಅವರನ್ನು ಪುರಸ್ಕರಿಸಲಾಯಿತು.
ರೈತರ ಹಕ್ಕುಗಳ ಕುರಿತ ಮೊದಲ ಜಾಗತಿಕ ವಿಚಾರ ಸಂಕಿರಣ ದೆಹಲಿಯಲ್ಲಿ ಆರಂಭಗೊಂಡಿದೆ. ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಕೃಷಿಯಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ನೀಡಿ ಪುರಸ್ಕರಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಅಮೈ ದೇವರಾಯರು ತಮ್ಮ ಐದು ಎಕರೆ ಗದ್ದೆಯಲ್ಲಿ 175ಕ್ಕೂ ಅಧಿಕ ಭತ್ತದ ತಳಿಗಳನ್ನು ಬೆಳೆದಿದ್ದಾರೆ. ಒಂದೇ ಗದ್ದೆಯಲ್ಲಿ ಅನೇಕ ಬಗೆಯ ತಳಿಗಳನ್ನು ನಾಟಿ ಮಾಡುವ ದೇವರಾವ್ ಅವರು ತಳಿ ತಪಸ್ವಿ ಎಂಬ ಬಿರುದಿಗೆ ಪಾತ್ರರಾಗಿದ್ದಾರೆ. 1988 ರಿಂದ ರಾಸಾಯನಿಕ ಬಳಕೆಗೆ ಸಂಪೂರ್ಣ ವಿದಾಯ ಹೇಳಿದ್ದಾರೆ. ಸಾವಯವ ಗೊಬ್ಬರನ್ನು ಬಳಸುವ ಇವರು ಭತ್ತವನ್ನು ಮನೆಯಲ್ಲಿಯೇ ಒಣಗಿಸಿ ಅಕ್ಕಿ ಮಾಡುತ್ತಾರೆ.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…