ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

June 25, 2026
8:17 PM
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌ 14 ಕೊನೆಯ ದಿನವಾಗಿದೆ. ಅರ್ಹ ರೈತರು ನಿಗದಿತ ಪ್ರೀಮಿಯಂ ಪಾವತಿಸಿ ಬೆಳೆ ವಿಮೆ ಸೌಲಭ್ಯ ಪಡೆಯುವಂತೆ ಕೃಷಿ ಇಲಾಖೆ ಮನವಿ ಮಾಡಿದೆ.

2026-27ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಭತ್ತದ ಬೆಳೆ ವಿಮೆ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಅರ್ಹ ರೈತರು ಆಗಸ್ಟ್‌ 14 ರೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ ಮಾಡಿದೆ.

ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯೋಜನೆ ಅನುಷ್ಠಾನಕ್ಕಾಗಿ ಇಂಡಸ್ ಇಂಡ್ ಜನರಲ್ ಇನ್ಸುರೆನ್ಸ್ ಕಂಪನಿ ಲಿಮಿಟೆಡ್‌ (ರಿಲಯನ್ಸ್ ಜನರಲ್ ಇನ್ಶುರೆನ್ಸ್ ಕಂಪನಿ ಲಿಮಿಟೆಡ್‌) ಅನ್ನು ವಿಮಾ ಸಂಸ್ಥೆಯಾಗಿ ನೇಮಕ ಮಾಡಲಾಗಿದೆ.

Advertisement

ಭತ್ತದ ಬೆಳೆಗೆ ಪ್ರತಿ ಎಕರೆಗೆ ₹611.91 (ರೈತರ ಪಾಲು ಶೇ.2) ವಿಮಾ ಕಂತು ನಿಗದಿಯಾಗಿದ್ದು, ಒಟ್ಟು ವಿಮಾ ಮೊತ್ತ ₹30,595.32 ಆಗಿರುತ್ತದೆ. ರೈತರು ನಿಗದಿತ ಅವಧಿಯೊಳಗೆ ಹತ್ತಿರದ ಬ್ಯಾಂಕ್‌ಗಳಲ್ಲಿ ಅಥವಾ ಅಧಿಕೃತ ನೋಂದಣಿ ಕೇಂದ್ರಗಳಲ್ಲಿ ವಿಮಾ ಕಂತು ಪಾವತಿಸಿ ನೋಂದಣಿ ಮಾಡಿಸಬಹುದು.

ಯೋಜನೆಯಡಿ ಅಧಿಸೂಚಿತ ಪ್ರದೇಶಗಳಲ್ಲಿ ಪ್ರಕೃತಿ ವಿಕೋಪ ಅಥವಾ ಹವಾಮಾನ ವೈಪರೀತ್ಯದಿಂದಾಗಿ ಶೇ.75ಕ್ಕಿಂತ ಹೆಚ್ಚು ಬಿತ್ತನೆ ವಿಫಲವಾದರೆ, ಬೆಳೆಯ ಬೆಳವಣಿಗೆಯ ಅವಧಿಯಲ್ಲಿ ಶೇ.50ಕ್ಕಿಂತ ಹೆಚ್ಚು ನಷ್ಟ ಉಂಟಾದರೆ, ಕಟಾವಿನ ನಂತರ ಎರಡು ವಾರಗಳೊಳಗೆ ಅಕಾಲಿಕ ಮಳೆ ಅಥವಾ ಚಂಡಮಾರುತದಿಂದ ಬೆಳೆಗೆ ಹಾನಿಯಾದರೆ ಹಾಗೂ ಭೂಕುಸಿತ, ಬೆಳೆ ಮುಳುಗಡೆ, ಆಲಿಕಲ್ಲು ಮಳೆ ಮೊದಲಾದ ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಿಂದ ಉಂಟಾಗುವ ನಷ್ಟಕ್ಕೂ ಯೋಜನೆ ಅನ್ವಯ ಪರಿಹಾರ ದೊರೆಯಲಿದೆ.

Advertisement

ಅಗತ್ಯ ದಾಖಲೆಗಳು

  • ಆಧಾರ್ ಕಾರ್ಡ್
  • ಆರ್‌ಟಿಸಿ / ಪಹಣಿ
  • ಬ್ಯಾಂಕ್ ಪಾಸ್‌ಬುಕ್
  • ಬೆಳೆ ಬಿತ್ತನೆ ದೃಢೀಕರಣ ಪತ್ರ
  • ಸ್ವಯಂ ಘೋಷಣಾ ಪತ್ರ (ಸಾಲ ಪಡೆಯದ ರೈತರಿಗೆ ಕಡ್ಡಾಯ)

ಬೆಳೆ ಸಾಲ ಪಡೆದ ರೈತರು ಬೆಳೆ ವಿಮೆಯಲ್ಲಿ ಭಾಗವಹಿಸಲು ಇಚ್ಛಿಸದಿದ್ದಲ್ಲಿ, ಕೊನೆಯ ದಿನಾಂಕಕ್ಕಿಂತ ಕನಿಷ್ಠ ಒಂದು ವಾರ ಮೊದಲು ಬ್ಯಾಂಕ್ ವ್ಯವಸ್ಥಾಪಕರಿಗೆ ಲಿಖಿತವಾಗಿ ತಿಳಿಸಿ ಯೋಜನೆಯಿಂದ ಹೊರಗುಳಿಯಬಹುದು.

Advertisement

ರೈತರು ಗ್ರಾಮ ಒನ್, ಕರ್ನಾಟಕ ಒನ್, ರೈತ ಸಂಪರ್ಕ ಕೇಂದ್ರಗಳು ಅಥವಾ ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕ್ ಶಾಖೆಗಳ ಮೂಲಕ ಅರ್ಜಿ ಸಲ್ಲಿಸಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಹೆಚ್ಚಿನ ಮಾಹಿತಿಗಾಗಿ ಸಂಬಂಧಿತ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Farmers in Dakshina Kannada can register for the Karnataka Raitha Suraksha Pradhan Mantri Fasal Bima Yojana for the 2026-27 Kharif season until August 14, 2026. Paddy growers can insure their crop by paying a farmer premium of ₹611.91 per acre, with coverage of ₹30,595.32 per acre against sowing failure, mid-season crop loss, post-harvest damage, and localized natural calamities.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ
June 25, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ
June 25, 2026
7:34 AM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ
June 24, 2026
10:16 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ
June 23, 2026
10:13 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror