ಸರ್ವ ಧರ್ಮ ಸಮನ್ವಯಕಾರ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಎನ್ ಸುತಾರ್ ನಿಧನ

February 5, 2022
2:33 PM

ಖ್ಯಾತ ಸೂಫಿ ಸಂತ, ಸರ್ವ ಧರ್ಮ ಸಮನ್ವಯಕಾರ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಎನ್ ಸುತಾರ ಅವರು ಇಂದು ಮುಂಜಾನೆ ಹೃದಯಘಾತದಿಂದ ನಿಧನರಾಗಿದ್ದಾರೆ.

ಇವರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಕೋಮು ದ್ವೇಷ, ಜಾತಿ- ಧರ್ಮದ ಅಮಲು ಮಾನವತೆಯನ್ನು ಮಂಕಾಗಿಸಿರುವ ವಿಪ್ಲವದ ಈ ದಿನಗಳಲ್ಲಿ ಜನಸಾಮಾನ್ಯರ ನಡುವಿದ್ದ ಈ ಕಬೀರ ದಿಢೀರನೆ ಕಣ್ಮರೆಯಾಗಿದ್ದಾರೆ.

ಮಹಾಲಿಂಗಪುರದಲ್ಲಿ ಬಡಗಿ ವೃತ್ತಿ ಮಾಡುತ್ತಿದ್ದ ನಬಿಸಾಹೇಬ್ ಹಾಗೂ ಅಮೀನಾಬಿ ದಂಪತಿ ಪುತ್ರರಾದ ಇಬ್ರಾಹಿಂ ಸುತಾರ 1940 ರ ಮೇ 10 ರಂದು ಜನಿಸಿದರು. ಇವರಿಗೆ ಮನೆಯಲ್ಲಿನ ಬಡತನದ ಪರಿಸ್ಥಿತಿ ಓದಲು ಉತ್ತೇಜಕವಾಗಿರಲಿಲ್ಲ. ಮೂರನೇ ತರಗತಿ ಶಿಕ್ಷಣ ಅಪೂರ್ಣಗೊಂಡಿತು. ಊರಿನ ಬಹುಸಂಖ್ಯಾತರ ಉದ್ಯೋಗ ನೇಕಾರಿಯನ್ನೇ ಸುತಾರ ಕಲತರು. ಬದುಕಿಗೆ ಅದೇ ದಾರಿಯನ್ನಾಗಿಸಿತು.

ವೈದಿಕ ವಚನ ಮತ್ತು ಸೂಫಿ ಪರಂಪರೆಗಳ ಕುರಿತು ಭಜನೆ, ಪ್ರವಚನ, ಸಂವಾದಗಳ ಮೂಲಕ ಜನರಲ್ಲಿ ಭಾವೈಕ್ಯತೆ ಉಂಟು ಮಾಡುತ್ತಿದ್ದ ತತ್ವಪದಕಾರರು ಮತ್ತು ಪ್ರವಚನಕಾರರಾಗಿದ್ದರು. 2018ರಲ್ಲಿ ಇವರಿಗೆ ಭಾರತ ಸರ್ಕಾರ ಕೊಡಮಾಡುವ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಯು ಲಭಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror