ಸರ್ವ ಧರ್ಮ ಸಮನ್ವಯಕಾರ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಎನ್ ಸುತಾರ್ ನಿಧನ

February 5, 2022
2:33 PM

ಖ್ಯಾತ ಸೂಫಿ ಸಂತ, ಸರ್ವ ಧರ್ಮ ಸಮನ್ವಯಕಾರ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಎನ್ ಸುತಾರ ಅವರು ಇಂದು ಮುಂಜಾನೆ ಹೃದಯಘಾತದಿಂದ ನಿಧನರಾಗಿದ್ದಾರೆ.

ಇವರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಕೋಮು ದ್ವೇಷ, ಜಾತಿ- ಧರ್ಮದ ಅಮಲು ಮಾನವತೆಯನ್ನು ಮಂಕಾಗಿಸಿರುವ ವಿಪ್ಲವದ ಈ ದಿನಗಳಲ್ಲಿ ಜನಸಾಮಾನ್ಯರ ನಡುವಿದ್ದ ಈ ಕಬೀರ ದಿಢೀರನೆ ಕಣ್ಮರೆಯಾಗಿದ್ದಾರೆ.

ಮಹಾಲಿಂಗಪುರದಲ್ಲಿ ಬಡಗಿ ವೃತ್ತಿ ಮಾಡುತ್ತಿದ್ದ ನಬಿಸಾಹೇಬ್ ಹಾಗೂ ಅಮೀನಾಬಿ ದಂಪತಿ ಪುತ್ರರಾದ ಇಬ್ರಾಹಿಂ ಸುತಾರ 1940 ರ ಮೇ 10 ರಂದು ಜನಿಸಿದರು. ಇವರಿಗೆ ಮನೆಯಲ್ಲಿನ ಬಡತನದ ಪರಿಸ್ಥಿತಿ ಓದಲು ಉತ್ತೇಜಕವಾಗಿರಲಿಲ್ಲ. ಮೂರನೇ ತರಗತಿ ಶಿಕ್ಷಣ ಅಪೂರ್ಣಗೊಂಡಿತು. ಊರಿನ ಬಹುಸಂಖ್ಯಾತರ ಉದ್ಯೋಗ ನೇಕಾರಿಯನ್ನೇ ಸುತಾರ ಕಲತರು. ಬದುಕಿಗೆ ಅದೇ ದಾರಿಯನ್ನಾಗಿಸಿತು.

ವೈದಿಕ ವಚನ ಮತ್ತು ಸೂಫಿ ಪರಂಪರೆಗಳ ಕುರಿತು ಭಜನೆ, ಪ್ರವಚನ, ಸಂವಾದಗಳ ಮೂಲಕ ಜನರಲ್ಲಿ ಭಾವೈಕ್ಯತೆ ಉಂಟು ಮಾಡುತ್ತಿದ್ದ ತತ್ವಪದಕಾರರು ಮತ್ತು ಪ್ರವಚನಕಾರರಾಗಿದ್ದರು. 2018ರಲ್ಲಿ ಇವರಿಗೆ ಭಾರತ ಸರ್ಕಾರ ಕೊಡಮಾಡುವ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಯು ಲಭಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror