ಖ್ಯಾತ ಸೂಫಿ ಸಂತ, ಸರ್ವ ಧರ್ಮ ಸಮನ್ವಯಕಾರ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಎನ್ ಸುತಾರ ಅವರು ಇಂದು ಮುಂಜಾನೆ ಹೃದಯಘಾತದಿಂದ ನಿಧನರಾಗಿದ್ದಾರೆ.
ಇವರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಕೋಮು ದ್ವೇಷ, ಜಾತಿ- ಧರ್ಮದ ಅಮಲು ಮಾನವತೆಯನ್ನು ಮಂಕಾಗಿಸಿರುವ ವಿಪ್ಲವದ ಈ ದಿನಗಳಲ್ಲಿ ಜನಸಾಮಾನ್ಯರ ನಡುವಿದ್ದ ಈ ಕಬೀರ ದಿಢೀರನೆ ಕಣ್ಮರೆಯಾಗಿದ್ದಾರೆ.
ಮಹಾಲಿಂಗಪುರದಲ್ಲಿ ಬಡಗಿ ವೃತ್ತಿ ಮಾಡುತ್ತಿದ್ದ ನಬಿಸಾಹೇಬ್ ಹಾಗೂ ಅಮೀನಾಬಿ ದಂಪತಿ ಪುತ್ರರಾದ ಇಬ್ರಾಹಿಂ ಸುತಾರ 1940 ರ ಮೇ 10 ರಂದು ಜನಿಸಿದರು. ಇವರಿಗೆ ಮನೆಯಲ್ಲಿನ ಬಡತನದ ಪರಿಸ್ಥಿತಿ ಓದಲು ಉತ್ತೇಜಕವಾಗಿರಲಿಲ್ಲ. ಮೂರನೇ ತರಗತಿ ಶಿಕ್ಷಣ ಅಪೂರ್ಣಗೊಂಡಿತು. ಊರಿನ ಬಹುಸಂಖ್ಯಾತರ ಉದ್ಯೋಗ ನೇಕಾರಿಯನ್ನೇ ಸುತಾರ ಕಲತರು. ಬದುಕಿಗೆ ಅದೇ ದಾರಿಯನ್ನಾಗಿಸಿತು.
ವೈದಿಕ ವಚನ ಮತ್ತು ಸೂಫಿ ಪರಂಪರೆಗಳ ಕುರಿತು ಭಜನೆ, ಪ್ರವಚನ, ಸಂವಾದಗಳ ಮೂಲಕ ಜನರಲ್ಲಿ ಭಾವೈಕ್ಯತೆ ಉಂಟು ಮಾಡುತ್ತಿದ್ದ ತತ್ವಪದಕಾರರು ಮತ್ತು ಪ್ರವಚನಕಾರರಾಗಿದ್ದರು. 2018ರಲ್ಲಿ ಇವರಿಗೆ ಭಾರತ ಸರ್ಕಾರ ಕೊಡಮಾಡುವ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಯು ಲಭಿಸಿದೆ.
ಕಳೆದ ಎರಡು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯಾದ್ಯಂತ ತರಕಾರಿಗಳು ಮತ್ತು ಸೊಪ್ಪುಗಳ…
ಈಗಿನಂತೆ ಜೂನ್ 29 ಹಾಗೂ 30 ರಂದು ಮಳೆಯ ಪ್ರಮಾಣ ಕಡಿಮೆಯಿರುವ ಸಾಧ್ಯತೆಗಳಿದ್ದು,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಯಗಳನ್ನು ಸಂಪರ್ಕಿಸಿ 9535156490
ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…
ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…
ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…