ಖ್ಯಾತ ಸೂಫಿ ಸಂತ, ಸರ್ವ ಧರ್ಮ ಸಮನ್ವಯಕಾರ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಎನ್ ಸುತಾರ ಅವರು ಇಂದು ಮುಂಜಾನೆ ಹೃದಯಘಾತದಿಂದ ನಿಧನರಾಗಿದ್ದಾರೆ.
ಇವರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಕೋಮು ದ್ವೇಷ, ಜಾತಿ- ಧರ್ಮದ ಅಮಲು ಮಾನವತೆಯನ್ನು ಮಂಕಾಗಿಸಿರುವ ವಿಪ್ಲವದ ಈ ದಿನಗಳಲ್ಲಿ ಜನಸಾಮಾನ್ಯರ ನಡುವಿದ್ದ ಈ ಕಬೀರ ದಿಢೀರನೆ ಕಣ್ಮರೆಯಾಗಿದ್ದಾರೆ.
ಮಹಾಲಿಂಗಪುರದಲ್ಲಿ ಬಡಗಿ ವೃತ್ತಿ ಮಾಡುತ್ತಿದ್ದ ನಬಿಸಾಹೇಬ್ ಹಾಗೂ ಅಮೀನಾಬಿ ದಂಪತಿ ಪುತ್ರರಾದ ಇಬ್ರಾಹಿಂ ಸುತಾರ 1940 ರ ಮೇ 10 ರಂದು ಜನಿಸಿದರು. ಇವರಿಗೆ ಮನೆಯಲ್ಲಿನ ಬಡತನದ ಪರಿಸ್ಥಿತಿ ಓದಲು ಉತ್ತೇಜಕವಾಗಿರಲಿಲ್ಲ. ಮೂರನೇ ತರಗತಿ ಶಿಕ್ಷಣ ಅಪೂರ್ಣಗೊಂಡಿತು. ಊರಿನ ಬಹುಸಂಖ್ಯಾತರ ಉದ್ಯೋಗ ನೇಕಾರಿಯನ್ನೇ ಸುತಾರ ಕಲತರು. ಬದುಕಿಗೆ ಅದೇ ದಾರಿಯನ್ನಾಗಿಸಿತು.
ವೈದಿಕ ವಚನ ಮತ್ತು ಸೂಫಿ ಪರಂಪರೆಗಳ ಕುರಿತು ಭಜನೆ, ಪ್ರವಚನ, ಸಂವಾದಗಳ ಮೂಲಕ ಜನರಲ್ಲಿ ಭಾವೈಕ್ಯತೆ ಉಂಟು ಮಾಡುತ್ತಿದ್ದ ತತ್ವಪದಕಾರರು ಮತ್ತು ಪ್ರವಚನಕಾರರಾಗಿದ್ದರು. 2018ರಲ್ಲಿ ಇವರಿಗೆ ಭಾರತ ಸರ್ಕಾರ ಕೊಡಮಾಡುವ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಯು ಲಭಿಸಿದೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…