ಖ್ಯಾತ ಸೂಫಿ ಸಂತ, ಸರ್ವ ಧರ್ಮ ಸಮನ್ವಯಕಾರ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಎನ್ ಸುತಾರ ಅವರು ಇಂದು ಮುಂಜಾನೆ ಹೃದಯಘಾತದಿಂದ ನಿಧನರಾಗಿದ್ದಾರೆ.
ಇವರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಕೋಮು ದ್ವೇಷ, ಜಾತಿ- ಧರ್ಮದ ಅಮಲು ಮಾನವತೆಯನ್ನು ಮಂಕಾಗಿಸಿರುವ ವಿಪ್ಲವದ ಈ ದಿನಗಳಲ್ಲಿ ಜನಸಾಮಾನ್ಯರ ನಡುವಿದ್ದ ಈ ಕಬೀರ ದಿಢೀರನೆ ಕಣ್ಮರೆಯಾಗಿದ್ದಾರೆ.
ಮಹಾಲಿಂಗಪುರದಲ್ಲಿ ಬಡಗಿ ವೃತ್ತಿ ಮಾಡುತ್ತಿದ್ದ ನಬಿಸಾಹೇಬ್ ಹಾಗೂ ಅಮೀನಾಬಿ ದಂಪತಿ ಪುತ್ರರಾದ ಇಬ್ರಾಹಿಂ ಸುತಾರ 1940 ರ ಮೇ 10 ರಂದು ಜನಿಸಿದರು. ಇವರಿಗೆ ಮನೆಯಲ್ಲಿನ ಬಡತನದ ಪರಿಸ್ಥಿತಿ ಓದಲು ಉತ್ತೇಜಕವಾಗಿರಲಿಲ್ಲ. ಮೂರನೇ ತರಗತಿ ಶಿಕ್ಷಣ ಅಪೂರ್ಣಗೊಂಡಿತು. ಊರಿನ ಬಹುಸಂಖ್ಯಾತರ ಉದ್ಯೋಗ ನೇಕಾರಿಯನ್ನೇ ಸುತಾರ ಕಲತರು. ಬದುಕಿಗೆ ಅದೇ ದಾರಿಯನ್ನಾಗಿಸಿತು.
ವೈದಿಕ ವಚನ ಮತ್ತು ಸೂಫಿ ಪರಂಪರೆಗಳ ಕುರಿತು ಭಜನೆ, ಪ್ರವಚನ, ಸಂವಾದಗಳ ಮೂಲಕ ಜನರಲ್ಲಿ ಭಾವೈಕ್ಯತೆ ಉಂಟು ಮಾಡುತ್ತಿದ್ದ ತತ್ವಪದಕಾರರು ಮತ್ತು ಪ್ರವಚನಕಾರರಾಗಿದ್ದರು. 2018ರಲ್ಲಿ ಇವರಿಗೆ ಭಾರತ ಸರ್ಕಾರ ಕೊಡಮಾಡುವ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಯು ಲಭಿಸಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…