Advertisement
ನಿಧನ‌ ಸುದ್ದಿಗಳು

ಸರ್ವ ಧರ್ಮ ಸಮನ್ವಯಕಾರ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಎನ್ ಸುತಾರ್ ನಿಧನ

Share

ಖ್ಯಾತ ಸೂಫಿ ಸಂತ, ಸರ್ವ ಧರ್ಮ ಸಮನ್ವಯಕಾರ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಎನ್ ಸುತಾರ ಅವರು ಇಂದು ಮುಂಜಾನೆ ಹೃದಯಘಾತದಿಂದ ನಿಧನರಾಗಿದ್ದಾರೆ.

ಇವರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಕೋಮು ದ್ವೇಷ, ಜಾತಿ- ಧರ್ಮದ ಅಮಲು ಮಾನವತೆಯನ್ನು ಮಂಕಾಗಿಸಿರುವ ವಿಪ್ಲವದ ಈ ದಿನಗಳಲ್ಲಿ ಜನಸಾಮಾನ್ಯರ ನಡುವಿದ್ದ ಈ ಕಬೀರ ದಿಢೀರನೆ ಕಣ್ಮರೆಯಾಗಿದ್ದಾರೆ.

ಮಹಾಲಿಂಗಪುರದಲ್ಲಿ ಬಡಗಿ ವೃತ್ತಿ ಮಾಡುತ್ತಿದ್ದ ನಬಿಸಾಹೇಬ್ ಹಾಗೂ ಅಮೀನಾಬಿ ದಂಪತಿ ಪುತ್ರರಾದ ಇಬ್ರಾಹಿಂ ಸುತಾರ 1940 ರ ಮೇ 10 ರಂದು ಜನಿಸಿದರು. ಇವರಿಗೆ ಮನೆಯಲ್ಲಿನ ಬಡತನದ ಪರಿಸ್ಥಿತಿ ಓದಲು ಉತ್ತೇಜಕವಾಗಿರಲಿಲ್ಲ. ಮೂರನೇ ತರಗತಿ ಶಿಕ್ಷಣ ಅಪೂರ್ಣಗೊಂಡಿತು. ಊರಿನ ಬಹುಸಂಖ್ಯಾತರ ಉದ್ಯೋಗ ನೇಕಾರಿಯನ್ನೇ ಸುತಾರ ಕಲತರು. ಬದುಕಿಗೆ ಅದೇ ದಾರಿಯನ್ನಾಗಿಸಿತು.

ವೈದಿಕ ವಚನ ಮತ್ತು ಸೂಫಿ ಪರಂಪರೆಗಳ ಕುರಿತು ಭಜನೆ, ಪ್ರವಚನ, ಸಂವಾದಗಳ ಮೂಲಕ ಜನರಲ್ಲಿ ಭಾವೈಕ್ಯತೆ ಉಂಟು ಮಾಡುತ್ತಿದ್ದ ತತ್ವಪದಕಾರರು ಮತ್ತು ಪ್ರವಚನಕಾರರಾಗಿದ್ದರು. 2018ರಲ್ಲಿ ಇವರಿಗೆ ಭಾರತ ಸರ್ಕಾರ ಕೊಡಮಾಡುವ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಯು ಲಭಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

2 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

2 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

11 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

13 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

18 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

18 hours ago