ಖ್ಯಾತ ಸೂಫಿ ಸಂತ, ಸರ್ವ ಧರ್ಮ ಸಮನ್ವಯಕಾರ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಎನ್ ಸುತಾರ ಅವರು ಇಂದು ಮುಂಜಾನೆ ಹೃದಯಘಾತದಿಂದ ನಿಧನರಾಗಿದ್ದಾರೆ.
ಇವರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಕೋಮು ದ್ವೇಷ, ಜಾತಿ- ಧರ್ಮದ ಅಮಲು ಮಾನವತೆಯನ್ನು ಮಂಕಾಗಿಸಿರುವ ವಿಪ್ಲವದ ಈ ದಿನಗಳಲ್ಲಿ ಜನಸಾಮಾನ್ಯರ ನಡುವಿದ್ದ ಈ ಕಬೀರ ದಿಢೀರನೆ ಕಣ್ಮರೆಯಾಗಿದ್ದಾರೆ.
ಮಹಾಲಿಂಗಪುರದಲ್ಲಿ ಬಡಗಿ ವೃತ್ತಿ ಮಾಡುತ್ತಿದ್ದ ನಬಿಸಾಹೇಬ್ ಹಾಗೂ ಅಮೀನಾಬಿ ದಂಪತಿ ಪುತ್ರರಾದ ಇಬ್ರಾಹಿಂ ಸುತಾರ 1940 ರ ಮೇ 10 ರಂದು ಜನಿಸಿದರು. ಇವರಿಗೆ ಮನೆಯಲ್ಲಿನ ಬಡತನದ ಪರಿಸ್ಥಿತಿ ಓದಲು ಉತ್ತೇಜಕವಾಗಿರಲಿಲ್ಲ. ಮೂರನೇ ತರಗತಿ ಶಿಕ್ಷಣ ಅಪೂರ್ಣಗೊಂಡಿತು. ಊರಿನ ಬಹುಸಂಖ್ಯಾತರ ಉದ್ಯೋಗ ನೇಕಾರಿಯನ್ನೇ ಸುತಾರ ಕಲತರು. ಬದುಕಿಗೆ ಅದೇ ದಾರಿಯನ್ನಾಗಿಸಿತು.
ವೈದಿಕ ವಚನ ಮತ್ತು ಸೂಫಿ ಪರಂಪರೆಗಳ ಕುರಿತು ಭಜನೆ, ಪ್ರವಚನ, ಸಂವಾದಗಳ ಮೂಲಕ ಜನರಲ್ಲಿ ಭಾವೈಕ್ಯತೆ ಉಂಟು ಮಾಡುತ್ತಿದ್ದ ತತ್ವಪದಕಾರರು ಮತ್ತು ಪ್ರವಚನಕಾರರಾಗಿದ್ದರು. 2018ರಲ್ಲಿ ಇವರಿಗೆ ಭಾರತ ಸರ್ಕಾರ ಕೊಡಮಾಡುವ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಯು ಲಭಿಸಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…