ವರ್ಷದ ಪ್ರತೀ ಮಳೆಗೆ ಸಮುದ್ರ ಬದಿಯಲ್ಲಿರುವ ಕರಾವಳಿ ಜಿಲ್ಲೆಗಳ ಊರುಗಳ ಗೋಳು ಒಂದೇ. ಅದು ಕಡಲ್ಕೊರೆತ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳ ಸಮುದ್ರ ಬದಿಯಲ್ಲಿ ಜೀವನ ನಡೆಸುವವರ ಕಷ್ಟ ಹೇಳ ತೀರದು. ಇದೀಗ ಪಡುಬಿದ್ರೆ ಬೀಚ್ನ ಇಂಟರ್ಲಾಕ್ ವ್ಯವಸ್ಥೆ, ಐದಾರು ತೆಂಗಿನ ಮರಗಳು ಸಮುದ್ರ ಪಾಲಾಗಿವೆ.
ಉಡುಪಿಯಲ್ಲಿ ಕಳೆದ ಒಂದು ವಾರದಿಂದ ಮಳೆ ಆರ್ಭಟ ಜೋರಾಗುತ್ತಿದೆ. ಸಮುದ್ರದ ಅಬ್ಬರಕ್ಕೆ ಉಡುಪಿಯ ಕಾಪು ತಾಲೂಕಿನ ಪ್ರಸಿದ್ಧ ಪಡುಬಿದ್ರೆ ಬೀಚ್ ಕೊಚ್ಚಿ ಹೋಗುತ್ತಿದೆ. ಪಡುಬಿದ್ರೆ ಬೀಚ್ನ ಬದಿಯಲ್ಇಂಲಿ ನೆಟ್ಟಟಿರುವ ತೆಂಗಿನ ಮರಗಳ ಸುತ್ತ ಹಾಕಿದ್ದ ಇಂಟರ್ ಲಾಕ್ ಕೊಚ್ಚಿ ಹೋಗಿದ್ದು, ಐದಾರು ತೆಂಗಿನ ಮರಗಳು ಸಮುದ್ರ ಪಾಲಾಗಿವೆ. ಪಡುಬಿದ್ರೆ ಬೀಚ್ನ ಮೀನುಗಾರರ ಗೋಡಾನ್ ಅಪಾಯದಲ್ಲಿದೆ. ಬಲೆ ಸಂಗ್ರಹ ಮಾಡಿಟ್ಟಿರುವ ಮೀನುಗಾರರ ಗೋಡಾನ್ಗೆ ಸಮುದ್ರದಲೆಗಳು ಅಪ್ಪಳಿಸುತ್ತಿವೆ.
ಜೊತೆಗೆ ಪಡುಬಿದ್ರೆ ಬೀಚ್ನಲ್ಲಿ ಪ್ರವಾಸಿಗರಿಗಾಗಿ ನಿರ್ಮಿಸಿದ ವಾಚ್ ಟವರ್ ಸಹ ಅಪಾಯದಲ್ಲಿದೆ. ಹೀಗಾಗಿ ಪಡುಬಿದ್ರೆ ಬಿಚ್ಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿ ಉಡುಪಿ ಜಿಲ್ಲಾಡಳಿತ ಆದೇಶಿಸಿದೆ. ಪೊಲೀಸರು ಮತ್ತು ಲೈಫ್ ಗಾರ್ಡ್ಗಳನ್ನು ನೇಮಿಸಲಾಗಿದೆ.
ಕಾಫಿನಾಡು ಚಿಕ್ಕಮಗಳೂರಿನಲ್ಲೂ ಮಳೆ ಅಬ್ಬರ ಮುಂದುವರೆದಿದೆ. ತುಂಗಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ತುಂಗಾ ನದಿಯಲ್ಲಿ ಬೃಹದಾಕಾರದ ಮರದ ದಿಮ್ಮಿಗಳು ಕೊಚ್ಚಿ ಬರುತ್ತಿವೆ. ಶೃಂಗೇರಿ ತಾಲೂಕಿನ ಕೆರೆಕಟ್ಟೆ ಭಾಗದಲ್ಲಿ ಧಾರಾಕಾರ ಮಳೆಯಾಗಿದ್ದು, ಶೃಂಗೇರಿ ಶಾರಾದಾಂಬೆ ದೇವಾಲಯದ ತುಂಗಾ ನದಿ ತಟದಲ್ಲಿರುವ ಕಪ್ಪೆ ಶಂಕರ ದೇವಾಲಯ ಮುಳುಗಡೆಯಾಗಿದೆ. ಭಾರೀ ಮಳೆ ಹಿನ್ನೆಲೆ, ಜಿಲ್ಲಾದ್ಯಂತ ಜಿಲ್ಲಾಡಳಿತ ಹೈ ಅಲರ್ಟ್ ಘೋಷಣೆ ಮಾಡಿದೆ. ಚಿಕ್ಕಮಗಳೂರಿನ 34 ಗ್ರಾಮ ಪಂಚಾಯಿತ್ 77 ಗ್ರಾಮಗಳು ಡೇಂಜರ್ ಎಂದು ಗುರುತು ಮಾಡಲಾಗಿದೆ.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…