Advertisement
ಕಲೆ-ಸಂಸ್ಕೃತಿ

ಪಡುಕಾನ ತಿಮ್ಮಯ್ಯ ಆಚಾರ್ ಸ್ಮೃತಿ | ಹೊಸ ತಲೆಮಾರಿಗೆ ಗತಿಸಿದ ಸಾಧಕರನ್ನು ಪರಿಚಯಿಸಬೇಕು –  ನಾ. ಕಾರಂತ ಪೆರಾಜೆ

Share
ಒಂದೊಂದು ಕಾಲಘಟ್ಟದಲ್ಲಿ ಯಕ್ಷಗಾನವನ್ನು ಮನಸಾ ಆರಾಧಿಸಿ, ಅದನ್ನು ಜನಮಾನಸದಲ್ಲಿ ಹಬ್ಬಿಸಿದ ಅನೇಕರು ಗತಿಸಿದ್ದಾರೆ. ಅವರ ಕೊಡುಗೆಗಳು ದಾಖಲಾಗಲಿಲ್ಲ. ದಾಖಲು ಮಾಡಬೇಕಾದ ಸಂಪನ್ಮೂಲಗಳು ವಿರಳವಾಗಿದ್ದುವು. ಅವರ ಸಾಂಗತ್ಯದಲ್ಲಿದ್ದ ಬೆರಳೆಣಿಕೆಯ ಮಂದಿ ಅಂತಹ ಹಿರಿಯರನ್ನು ಜ್ಞಾಪಿಸಿ, ಹೊಸ ತಲೆಮಾರಿಗೆ ಪರಿಚಯಿಸುವುದು ಕಲೆಯ ಅಭಿವೃದ್ಧಿಯ ಹಿನ್ನೆಲೆಯಲ್ಲಿ ಬದ್ಧತೆಯಲ್ಲಿ ಮಾಡಬೇಕಾದ ಕಾಯಕವಾಗಿದೆ.” ಎಂದು ಕಲಾವಿದ, ಲೇಖಕ ನಾ. ಕಾರಂತ ಪೆರಾಜೆ ಹೇಳಿದರು.
ಅವರು ಪುತ್ತೂರು ಸನಿಹದ ದೊಡ್ಡಡ್ಕದ ಪಾಲೆಚ್ಚಾರು ಗೋವಿಂದ ನಾಯಕರ ‘ಶಿವಕೃಪಾ ನಿವಾಸ’ದಲ್ಲಿ ಜರುಗಿದ ಕೀರ್ತಿಶೇಷ ಮದ್ದಲೆಗಾರ ಪಡುಕಾನ ತಿಮ್ಮಯ್ಯ ಆಚಾರ್ ಅವರ ಸ್ಮೃತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, “ಪಡುಕಾನ ತಿಮ್ಮಯ್ಯರು ಗತಿಸಿ ನಾಲ್ಕು ದಶಕದ ಹತ್ತಿರವಾದರೂ ಅವರನ್ನು ಸ್ಮರಿಸಿ ಗೌರವಿಸುವ ಮೂಲಕ ಅವರ ಶಿಷ್ಯ ಗೋವಿಂದ ನಾಯಕರು ನಿಜಾರ್ಥದ ಗುರುವಂದನೆಯನ್ನು ಸಲ್ಲಿಸಿದ್ದಾರೆ” ಎಂದರು.
ಯಕ್ಷಗಾನ ಹಿಮ್ಮೇಳದ ಭಾಷಾವಿದ ಪದ್ಯಾಣ ಶಂಕರನಾರಾಯಣ ಭಟ್ ಹಾಗೂ ಅರ್ಥಧಾರಿ, ವೇಷಧಾರಿ ಗುಂಡ್ಯಡ್ಕ ಈಶ್ವರ ಭಟ್ ಜತೆಯಾಗಿ ಸಮಾರಂಭವನ್ನು ದೀಪಜ್ವಲನದ ಮೂಲಕ ಉದ್ಘಾಟಿಸಿದರು. ತಿಮ್ಮಯ್ಯ ಆಚಾರ್ ಅವರ ಚಿರಂಜೀವಿ ಕೃಷ್ಣಯ್ಯ ಆಚಾರ್ ಉಪಸ್ಥಿತರಿದ್ದರು. ಗೋವಿಂದ ನಾಯಕ್ ಎಲ್ಲರನ್ನೂ ಸ್ವಾಗತಿಸಿ, ವಂದಿಸಿದರು. ದುರ್ಗಾಪ್ರಸಾದ್, ಗಣಪತಿ ನಾಯಕ್  ಅತಿಥಿಗಳನ್ನು ಗೌರವಿಸಿದರು.
ಪೂರ್ವಾಹ್ನ ದೇವತಾರಾಧನೆಯ ಜತೆಗೆ ಬಾಲ ಕಲಾವಿದರಿಂದ ಸಂಗೀತ, ಸ್ಮೃತಿ ಕಲಾಪದ ಕೊನೆಗೆ ‘ಶ್ರೀಕೃಷ್ಣ ರಾಯಭಾರ, ಸುಧನ್ವ ಮೋಕ್ಷ’ ಪ್ರಸಂಗಗಳ ತಾಳಮದ್ದಳೆಗಳು ಜರುಗಿದ್ದುವು. ಕಲಾವಿದರಾಗಿ – ಪಾಲೆಚ್ಚಾರು ಗೋವಿಂದ ನಾಯಕ್, ಶ್ರೀಪತಿ ನಾಯಕ್ ಆಜೇರು,  ಅಮೃತಾ ಅಡಿಗ (ಭಾಗವತರು), ಪದ್ಯಾಣ ಶಂಕರನಾರಾಯಣ ಭಟ್, ಮುರಾರಿ ಕಡಂಬಳಿತ್ತಾಯ, ಕೌಶಿಕ್ ರಾವ್ ಪುತ್ತಿಗೆ, ಕೃಷ್ಣಪ್ರಕಾಶ ಉಳಿತ್ತಾಯ, ಪಿ.ಜಿ.ಜಗನ್ನಿವಾಸ ರಾವ್, ಮುರಳೀಧರ ಕಲ್ಲೂರಾಯ, ಕೃಷ್ಣಯ್ಯ ಆಚಾರ್, ಸತ್ಯನಾರಾಯಣ ಅಡಿಗ (ಚೆಂಡೆ, ಮದ್ದಳೆ), ಪಕಳಕುಂಜ ಶ್ಯಾಮ ಭಟ್, ಗುಂಡ್ಯಡ್ಕ ಈಶ್ವರ ಭಟ್, ನಾ. ಕಾರಂತ ಪೆರಾಜೆ, ಗುಡ್ಡಪ್ಪ ಬಲ್ಯ, ಭಾಸ್ಕರ ಶೆಟ್ಟಿ ಸಾಲ್ಮರ, ಕೇಶವ ಭಟ್ ಕೇಕಣಾಜೆ, ಅಶೋಕ ಸುಬ್ರಹ್ಮಣ್ಯ ಭಟ್ ಪೆರುವಡಿ, ಸಚ್ಚಿದಾನಂದ ಪ್ರಭು (ಅರ್ಥದಾರಿಗಳು) ಭಾಗವಹಿಸಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

18 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago