Advertisement
ಕಲೆ-ಸಂಸ್ಕೃತಿ

ಪಡುಕಾನ ತಿಮ್ಮಯ್ಯ ಆಚಾರ್ ಸ್ಮೃತಿ | ಹೊಸ ತಲೆಮಾರಿಗೆ ಗತಿಸಿದ ಸಾಧಕರನ್ನು ಪರಿಚಯಿಸಬೇಕು –  ನಾ. ಕಾರಂತ ಪೆರಾಜೆ

Share
ಒಂದೊಂದು ಕಾಲಘಟ್ಟದಲ್ಲಿ ಯಕ್ಷಗಾನವನ್ನು ಮನಸಾ ಆರಾಧಿಸಿ, ಅದನ್ನು ಜನಮಾನಸದಲ್ಲಿ ಹಬ್ಬಿಸಿದ ಅನೇಕರು ಗತಿಸಿದ್ದಾರೆ. ಅವರ ಕೊಡುಗೆಗಳು ದಾಖಲಾಗಲಿಲ್ಲ. ದಾಖಲು ಮಾಡಬೇಕಾದ ಸಂಪನ್ಮೂಲಗಳು ವಿರಳವಾಗಿದ್ದುವು. ಅವರ ಸಾಂಗತ್ಯದಲ್ಲಿದ್ದ ಬೆರಳೆಣಿಕೆಯ ಮಂದಿ ಅಂತಹ ಹಿರಿಯರನ್ನು ಜ್ಞಾಪಿಸಿ, ಹೊಸ ತಲೆಮಾರಿಗೆ ಪರಿಚಯಿಸುವುದು ಕಲೆಯ ಅಭಿವೃದ್ಧಿಯ ಹಿನ್ನೆಲೆಯಲ್ಲಿ ಬದ್ಧತೆಯಲ್ಲಿ ಮಾಡಬೇಕಾದ ಕಾಯಕವಾಗಿದೆ.” ಎಂದು ಕಲಾವಿದ, ಲೇಖಕ ನಾ. ಕಾರಂತ ಪೆರಾಜೆ ಹೇಳಿದರು.
ಅವರು ಪುತ್ತೂರು ಸನಿಹದ ದೊಡ್ಡಡ್ಕದ ಪಾಲೆಚ್ಚಾರು ಗೋವಿಂದ ನಾಯಕರ ‘ಶಿವಕೃಪಾ ನಿವಾಸ’ದಲ್ಲಿ ಜರುಗಿದ ಕೀರ್ತಿಶೇಷ ಮದ್ದಲೆಗಾರ ಪಡುಕಾನ ತಿಮ್ಮಯ್ಯ ಆಚಾರ್ ಅವರ ಸ್ಮೃತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, “ಪಡುಕಾನ ತಿಮ್ಮಯ್ಯರು ಗತಿಸಿ ನಾಲ್ಕು ದಶಕದ ಹತ್ತಿರವಾದರೂ ಅವರನ್ನು ಸ್ಮರಿಸಿ ಗೌರವಿಸುವ ಮೂಲಕ ಅವರ ಶಿಷ್ಯ ಗೋವಿಂದ ನಾಯಕರು ನಿಜಾರ್ಥದ ಗುರುವಂದನೆಯನ್ನು ಸಲ್ಲಿಸಿದ್ದಾರೆ” ಎಂದರು.
ಯಕ್ಷಗಾನ ಹಿಮ್ಮೇಳದ ಭಾಷಾವಿದ ಪದ್ಯಾಣ ಶಂಕರನಾರಾಯಣ ಭಟ್ ಹಾಗೂ ಅರ್ಥಧಾರಿ, ವೇಷಧಾರಿ ಗುಂಡ್ಯಡ್ಕ ಈಶ್ವರ ಭಟ್ ಜತೆಯಾಗಿ ಸಮಾರಂಭವನ್ನು ದೀಪಜ್ವಲನದ ಮೂಲಕ ಉದ್ಘಾಟಿಸಿದರು. ತಿಮ್ಮಯ್ಯ ಆಚಾರ್ ಅವರ ಚಿರಂಜೀವಿ ಕೃಷ್ಣಯ್ಯ ಆಚಾರ್ ಉಪಸ್ಥಿತರಿದ್ದರು. ಗೋವಿಂದ ನಾಯಕ್ ಎಲ್ಲರನ್ನೂ ಸ್ವಾಗತಿಸಿ, ವಂದಿಸಿದರು. ದುರ್ಗಾಪ್ರಸಾದ್, ಗಣಪತಿ ನಾಯಕ್  ಅತಿಥಿಗಳನ್ನು ಗೌರವಿಸಿದರು.
ಪೂರ್ವಾಹ್ನ ದೇವತಾರಾಧನೆಯ ಜತೆಗೆ ಬಾಲ ಕಲಾವಿದರಿಂದ ಸಂಗೀತ, ಸ್ಮೃತಿ ಕಲಾಪದ ಕೊನೆಗೆ ‘ಶ್ರೀಕೃಷ್ಣ ರಾಯಭಾರ, ಸುಧನ್ವ ಮೋಕ್ಷ’ ಪ್ರಸಂಗಗಳ ತಾಳಮದ್ದಳೆಗಳು ಜರುಗಿದ್ದುವು. ಕಲಾವಿದರಾಗಿ – ಪಾಲೆಚ್ಚಾರು ಗೋವಿಂದ ನಾಯಕ್, ಶ್ರೀಪತಿ ನಾಯಕ್ ಆಜೇರು,  ಅಮೃತಾ ಅಡಿಗ (ಭಾಗವತರು), ಪದ್ಯಾಣ ಶಂಕರನಾರಾಯಣ ಭಟ್, ಮುರಾರಿ ಕಡಂಬಳಿತ್ತಾಯ, ಕೌಶಿಕ್ ರಾವ್ ಪುತ್ತಿಗೆ, ಕೃಷ್ಣಪ್ರಕಾಶ ಉಳಿತ್ತಾಯ, ಪಿ.ಜಿ.ಜಗನ್ನಿವಾಸ ರಾವ್, ಮುರಳೀಧರ ಕಲ್ಲೂರಾಯ, ಕೃಷ್ಣಯ್ಯ ಆಚಾರ್, ಸತ್ಯನಾರಾಯಣ ಅಡಿಗ (ಚೆಂಡೆ, ಮದ್ದಳೆ), ಪಕಳಕುಂಜ ಶ್ಯಾಮ ಭಟ್, ಗುಂಡ್ಯಡ್ಕ ಈಶ್ವರ ಭಟ್, ನಾ. ಕಾರಂತ ಪೆರಾಜೆ, ಗುಡ್ಡಪ್ಪ ಬಲ್ಯ, ಭಾಸ್ಕರ ಶೆಟ್ಟಿ ಸಾಲ್ಮರ, ಕೇಶವ ಭಟ್ ಕೇಕಣಾಜೆ, ಅಶೋಕ ಸುಬ್ರಹ್ಮಣ್ಯ ಭಟ್ ಪೆರುವಡಿ, ಸಚ್ಚಿದಾನಂದ ಪ್ರಭು (ಅರ್ಥದಾರಿಗಳು) ಭಾಗವಹಿಸಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…

4 hours ago

ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!

ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…

5 hours ago

ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ

ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…

5 hours ago

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!

ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…

11 hours ago

ಹವಾಮಾನ ವರದಿ | 09-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ..! ಜುಲೈ 11 ರಿಂದ ಮಳೆ ಮತ್ತಷ್ಟು ಇಳಿಕೆ, ಬಿಸಿಲಿನ ಅವಧಿ ಹೆಚ್ಚಳ ಸಾಧ್ಯ

ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…

12 hours ago

ಜುಲೈ ಮಳೆಯಿಂದ ದೇಶಕ್ಕೆ ನೆಮ್ಮದಿ…! ಮಳೆ ಕೊರತೆ 12%ಕ್ಕೆ ಇಳಿಕೆ

ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…

13 hours ago