Advertisement
ಕಲೆ-ಸಂಸ್ಕೃತಿ

ಪಡುಕಾನ ತಿಮ್ಮಯ್ಯ ಆಚಾರ್ ಸ್ಮೃತಿ | ಹೊಸ ತಲೆಮಾರಿಗೆ ಗತಿಸಿದ ಸಾಧಕರನ್ನು ಪರಿಚಯಿಸಬೇಕು –  ನಾ. ಕಾರಂತ ಪೆರಾಜೆ

Share
ಒಂದೊಂದು ಕಾಲಘಟ್ಟದಲ್ಲಿ ಯಕ್ಷಗಾನವನ್ನು ಮನಸಾ ಆರಾಧಿಸಿ, ಅದನ್ನು ಜನಮಾನಸದಲ್ಲಿ ಹಬ್ಬಿಸಿದ ಅನೇಕರು ಗತಿಸಿದ್ದಾರೆ. ಅವರ ಕೊಡುಗೆಗಳು ದಾಖಲಾಗಲಿಲ್ಲ. ದಾಖಲು ಮಾಡಬೇಕಾದ ಸಂಪನ್ಮೂಲಗಳು ವಿರಳವಾಗಿದ್ದುವು. ಅವರ ಸಾಂಗತ್ಯದಲ್ಲಿದ್ದ ಬೆರಳೆಣಿಕೆಯ ಮಂದಿ ಅಂತಹ ಹಿರಿಯರನ್ನು ಜ್ಞಾಪಿಸಿ, ಹೊಸ ತಲೆಮಾರಿಗೆ ಪರಿಚಯಿಸುವುದು ಕಲೆಯ ಅಭಿವೃದ್ಧಿಯ ಹಿನ್ನೆಲೆಯಲ್ಲಿ ಬದ್ಧತೆಯಲ್ಲಿ ಮಾಡಬೇಕಾದ ಕಾಯಕವಾಗಿದೆ.” ಎಂದು ಕಲಾವಿದ, ಲೇಖಕ ನಾ. ಕಾರಂತ ಪೆರಾಜೆ ಹೇಳಿದರು.
ಅವರು ಪುತ್ತೂರು ಸನಿಹದ ದೊಡ್ಡಡ್ಕದ ಪಾಲೆಚ್ಚಾರು ಗೋವಿಂದ ನಾಯಕರ ‘ಶಿವಕೃಪಾ ನಿವಾಸ’ದಲ್ಲಿ ಜರುಗಿದ ಕೀರ್ತಿಶೇಷ ಮದ್ದಲೆಗಾರ ಪಡುಕಾನ ತಿಮ್ಮಯ್ಯ ಆಚಾರ್ ಅವರ ಸ್ಮೃತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, “ಪಡುಕಾನ ತಿಮ್ಮಯ್ಯರು ಗತಿಸಿ ನಾಲ್ಕು ದಶಕದ ಹತ್ತಿರವಾದರೂ ಅವರನ್ನು ಸ್ಮರಿಸಿ ಗೌರವಿಸುವ ಮೂಲಕ ಅವರ ಶಿಷ್ಯ ಗೋವಿಂದ ನಾಯಕರು ನಿಜಾರ್ಥದ ಗುರುವಂದನೆಯನ್ನು ಸಲ್ಲಿಸಿದ್ದಾರೆ” ಎಂದರು.
ಯಕ್ಷಗಾನ ಹಿಮ್ಮೇಳದ ಭಾಷಾವಿದ ಪದ್ಯಾಣ ಶಂಕರನಾರಾಯಣ ಭಟ್ ಹಾಗೂ ಅರ್ಥಧಾರಿ, ವೇಷಧಾರಿ ಗುಂಡ್ಯಡ್ಕ ಈಶ್ವರ ಭಟ್ ಜತೆಯಾಗಿ ಸಮಾರಂಭವನ್ನು ದೀಪಜ್ವಲನದ ಮೂಲಕ ಉದ್ಘಾಟಿಸಿದರು. ತಿಮ್ಮಯ್ಯ ಆಚಾರ್ ಅವರ ಚಿರಂಜೀವಿ ಕೃಷ್ಣಯ್ಯ ಆಚಾರ್ ಉಪಸ್ಥಿತರಿದ್ದರು. ಗೋವಿಂದ ನಾಯಕ್ ಎಲ್ಲರನ್ನೂ ಸ್ವಾಗತಿಸಿ, ವಂದಿಸಿದರು. ದುರ್ಗಾಪ್ರಸಾದ್, ಗಣಪತಿ ನಾಯಕ್  ಅತಿಥಿಗಳನ್ನು ಗೌರವಿಸಿದರು.
ಪೂರ್ವಾಹ್ನ ದೇವತಾರಾಧನೆಯ ಜತೆಗೆ ಬಾಲ ಕಲಾವಿದರಿಂದ ಸಂಗೀತ, ಸ್ಮೃತಿ ಕಲಾಪದ ಕೊನೆಗೆ ‘ಶ್ರೀಕೃಷ್ಣ ರಾಯಭಾರ, ಸುಧನ್ವ ಮೋಕ್ಷ’ ಪ್ರಸಂಗಗಳ ತಾಳಮದ್ದಳೆಗಳು ಜರುಗಿದ್ದುವು. ಕಲಾವಿದರಾಗಿ – ಪಾಲೆಚ್ಚಾರು ಗೋವಿಂದ ನಾಯಕ್, ಶ್ರೀಪತಿ ನಾಯಕ್ ಆಜೇರು,  ಅಮೃತಾ ಅಡಿಗ (ಭಾಗವತರು), ಪದ್ಯಾಣ ಶಂಕರನಾರಾಯಣ ಭಟ್, ಮುರಾರಿ ಕಡಂಬಳಿತ್ತಾಯ, ಕೌಶಿಕ್ ರಾವ್ ಪುತ್ತಿಗೆ, ಕೃಷ್ಣಪ್ರಕಾಶ ಉಳಿತ್ತಾಯ, ಪಿ.ಜಿ.ಜಗನ್ನಿವಾಸ ರಾವ್, ಮುರಳೀಧರ ಕಲ್ಲೂರಾಯ, ಕೃಷ್ಣಯ್ಯ ಆಚಾರ್, ಸತ್ಯನಾರಾಯಣ ಅಡಿಗ (ಚೆಂಡೆ, ಮದ್ದಳೆ), ಪಕಳಕುಂಜ ಶ್ಯಾಮ ಭಟ್, ಗುಂಡ್ಯಡ್ಕ ಈಶ್ವರ ಭಟ್, ನಾ. ಕಾರಂತ ಪೆರಾಜೆ, ಗುಡ್ಡಪ್ಪ ಬಲ್ಯ, ಭಾಸ್ಕರ ಶೆಟ್ಟಿ ಸಾಲ್ಮರ, ಕೇಶವ ಭಟ್ ಕೇಕಣಾಜೆ, ಅಶೋಕ ಸುಬ್ರಹ್ಮಣ್ಯ ಭಟ್ ಪೆರುವಡಿ, ಸಚ್ಚಿದಾನಂದ ಪ್ರಭು (ಅರ್ಥದಾರಿಗಳು) ಭಾಗವಹಿಸಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

6 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

16 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

17 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

17 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

23 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago