ಪದ್ಯಾಣ ಪ್ರಶಸ್ತಿಗೆ ಭಾಗವತದ್ವಯರು ಆಯ್ಕೆ | ದಿನೇಶ ಅಮ್ಮಣ್ಣಾಯ, ಪುತ್ತಿಗೆ ರಘುರಾಮ ಹೊಳ್ಳರಿಗೆ ಪ್ರಶಸ್ತಿ | ಅಕ್ಟೋಬರ್ 23ರಂದು ಪ್ರಶಸ್ತಿ ಪ್ರದಾನ |

October 17, 2022
9:25 PM

ತೆಂಕುತಿಟ್ಟು ಯಕ್ಷಗಾನದ ಹಿರಿಯ ಭಾಗವತರಾದ  ದಿನೇಶ ಅಮ್ಮಣ್ಣಾಯ ಹಾಗೂ  ಪುತ್ತಿಗೆ ರಘುರಾಮ ಹೊಳ್ಳರು ‘ಪದ್ಯಾಣ ಪ್ರಶಸ್ತಿ’ಗೆ ಆಯ್ಕೆಗೊಂಡಿದ್ದಾರೆ. ಕೀರ್ತಿಶೇಷ ಭಾಗವತ ಪದ್ಯಾಣ ಗಣಪತಿ ಭಟ್ಟರ ನೆನಪಿನಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಅಕ್ಟೋಬರ್ 23, ರವಿವಾರದಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ‘ಶ್ರೀ ನಟರಾಜ’ ವೇದಿಕೆಯಲ್ಲಿ ನಡೆಯುವ ಪದ್ಯಾಣ ಸ್ಮೃ ತಿ ‘ಗಾನ ಗಣಪತಿ’ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಎಡನೀರು ಮಠಾಧೀಶ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಭಾಗವಹಿಸುವರು.

ಕರ್ನಾಟಕ ಲೋಕ ಸೇವಾ ಆಯೋಗದ ಮಾಜಿ ಅಧ್ಯಕ್ಷ, ಕಲಾಪೋಷಕ ಡಾ.ಟಿ.ಶ್ಯಾಮ್ ಭಟ್ ಅವರ ಅಧ್ಯಕ್ಷತೆಯಲ್ಲಿ ಸಮಾರಂಭ ಸಂಪನ್ನವಾಗಲಿದೆ. ಪುತ್ತೂರು ಶಾಸಕ  ಸಂಜೀವ ಮಠಂದೂರು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ  ಕೇಶವ ಪ್ರಸಾದ್ ಮುಳಿಯ ಮುಖ್ಯ ಅತಿಥಿಗಳು. ಪದ್ಯಾಣ ಗಣಪತಿ ಭಟ್ಟರ ಸ್ಮೃತಿಯನ್ನು ಯಕ್ಷ ವಿದ್ವಾಂಸ ಡಾ.ಎಂ.ಪ್ರಭಾಕರ ಜೋಶಿ ಮಾಡಲಿದ್ದಾರೆ. ಸುಳ್ಯ ಪ್ರತಿಭಾ ವಿದ್ಯಾಲಯದ ಪ್ರಾಚಾರ್ಯ  ವೆಂಕಟರಾಮ ಭಟ್ಟರು ಪ್ರಶಸ್ತಿ ಪುರಸ್ಕೃತರನ್ನು ನುಡಿಹಾರಗಳ ಮೂಲಕ ಅಭಿನಂದಿಸಲಿದ್ದಾರೆ.

ಈ ಸಂದರ್ಭದಲ್ಲಿ ಶ್ರೀ ಹನುಮಗಿರಿ ಮೇಳದ ಭಾಗವತ  ರವಿಚಂದ್ರ ಕನ್ನಡಿಕಟ್ಟೆ ಅವರಿಗೆ ‘ಪದ್ಯಾಣ ಶಿಷ್ಯ ಸಂಮಾನ’ ಹಾಗೂ ಯಕ್ಷಗಾನ ಅರ್ಥದಾರಿ  ರಾಮ ಜೋಯಿಸ್ ಬೆಳ್ಳಾರೆ ಅವರಿಗೆ ‘ಅಭಿಮಾನಿ ಶಿಷ್ಯ ಸಂಮಾನ’ವನ್ನು ನೀಡಲಾಗುತ್ತದೆ. ದಿನಪೂರ್ತಿ ನಡೆಯುವ ಕಲಾಪದಲ್ಲಿ ಯಕ್ಷಗಾನ ವಾದ-ಸಂವಾದ, ಗಾನ ವೈಭವ, ನೃತ್ಯ ವೈಭವ, ಪ್ರದರ್ಶನ.. ಹೀಗೆ ವೈವಿಧ್ಯ ಕಾರ್ಯಹೂರಣ ಸಂಪನ್ನವಾಗಲಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ
August 22, 2026
2:07 PM
by: ಸಾಯಿಶೇಖರ್ ಕರಿಕಳ
ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ
August 22, 2026
6:47 AM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ
August 21, 2026
4:04 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror