ತೆಂಕುತಿಟ್ಟು ಯಕ್ಷಗಾನದ ಹಿರಿಯ ಭಾಗವತರಾದ ದಿನೇಶ ಅಮ್ಮಣ್ಣಾಯ ಹಾಗೂ ಪುತ್ತಿಗೆ ರಘುರಾಮ ಹೊಳ್ಳರು ‘ಪದ್ಯಾಣ ಪ್ರಶಸ್ತಿ’ಗೆ ಆಯ್ಕೆಗೊಂಡಿದ್ದಾರೆ. ಕೀರ್ತಿಶೇಷ ಭಾಗವತ ಪದ್ಯಾಣ ಗಣಪತಿ ಭಟ್ಟರ ನೆನಪಿನಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಅಕ್ಟೋಬರ್ 23, ರವಿವಾರದಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ‘ಶ್ರೀ ನಟರಾಜ’ ವೇದಿಕೆಯಲ್ಲಿ ನಡೆಯುವ ಪದ್ಯಾಣ ಸ್ಮೃ ತಿ ‘ಗಾನ ಗಣಪತಿ’ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಎಡನೀರು ಮಠಾಧೀಶ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಭಾಗವಹಿಸುವರು.
ಕರ್ನಾಟಕ ಲೋಕ ಸೇವಾ ಆಯೋಗದ ಮಾಜಿ ಅಧ್ಯಕ್ಷ, ಕಲಾಪೋಷಕ ಡಾ.ಟಿ.ಶ್ಯಾಮ್ ಭಟ್ ಅವರ ಅಧ್ಯಕ್ಷತೆಯಲ್ಲಿ ಸಮಾರಂಭ ಸಂಪನ್ನವಾಗಲಿದೆ. ಪುತ್ತೂರು ಶಾಸಕ ಸಂಜೀವ ಮಠಂದೂರು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೇಶವ ಪ್ರಸಾದ್ ಮುಳಿಯ ಮುಖ್ಯ ಅತಿಥಿಗಳು. ಪದ್ಯಾಣ ಗಣಪತಿ ಭಟ್ಟರ ಸ್ಮೃತಿಯನ್ನು ಯಕ್ಷ ವಿದ್ವಾಂಸ ಡಾ.ಎಂ.ಪ್ರಭಾಕರ ಜೋಶಿ ಮಾಡಲಿದ್ದಾರೆ. ಸುಳ್ಯ ಪ್ರತಿಭಾ ವಿದ್ಯಾಲಯದ ಪ್ರಾಚಾರ್ಯ ವೆಂಕಟರಾಮ ಭಟ್ಟರು ಪ್ರಶಸ್ತಿ ಪುರಸ್ಕೃತರನ್ನು ನುಡಿಹಾರಗಳ ಮೂಲಕ ಅಭಿನಂದಿಸಲಿದ್ದಾರೆ. ಈ ಸಂದರ್ಭದಲ್ಲಿ ಶ್ರೀ ಹನುಮಗಿರಿ ಮೇಳದ ಭಾಗವತ ರವಿಚಂದ್ರ ಕನ್ನಡಿಕಟ್ಟೆ ಅವರಿಗೆ ‘ಪದ್ಯಾಣ ಶಿಷ್ಯ ಸಂಮಾನ’ ಹಾಗೂ ಯಕ್ಷಗಾನ ಅರ್ಥದಾರಿ ರಾಮ ಜೋಯಿಸ್ ಬೆಳ್ಳಾರೆ ಅವರಿಗೆ ‘ಅಭಿಮಾನಿ ಶಿಷ್ಯ ಸಂಮಾನ’ವನ್ನು ನೀಡಲಾಗುತ್ತದೆ. ದಿನಪೂರ್ತಿ ನಡೆಯುವ ಕಲಾಪದಲ್ಲಿ ಯಕ್ಷಗಾನ ವಾದ-ಸಂವಾದ, ಗಾನ ವೈಭವ, ನೃತ್ಯ ವೈಭವ, ಪ್ರದರ್ಶನ.. ಹೀಗೆ ವೈವಿಧ್ಯ ಕಾರ್ಯಹೂರಣ ಸಂಪನ್ನವಾಗಲಿದೆ.
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…