Advertisement
ಸುದ್ದಿಗಳು

ಪದ್ಯಾಣ ಪ್ರಶಸ್ತಿಗೆ ಭಾಗವತದ್ವಯರು ಆಯ್ಕೆ | ದಿನೇಶ ಅಮ್ಮಣ್ಣಾಯ, ಪುತ್ತಿಗೆ ರಘುರಾಮ ಹೊಳ್ಳರಿಗೆ ಪ್ರಶಸ್ತಿ | ಅಕ್ಟೋಬರ್ 23ರಂದು ಪ್ರಶಸ್ತಿ ಪ್ರದಾನ |

Share

ತೆಂಕುತಿಟ್ಟು ಯಕ್ಷಗಾನದ ಹಿರಿಯ ಭಾಗವತರಾದ  ದಿನೇಶ ಅಮ್ಮಣ್ಣಾಯ ಹಾಗೂ  ಪುತ್ತಿಗೆ ರಘುರಾಮ ಹೊಳ್ಳರು ‘ಪದ್ಯಾಣ ಪ್ರಶಸ್ತಿ’ಗೆ ಆಯ್ಕೆಗೊಂಡಿದ್ದಾರೆ. ಕೀರ್ತಿಶೇಷ ಭಾಗವತ ಪದ್ಯಾಣ ಗಣಪತಿ ಭಟ್ಟರ ನೆನಪಿನಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಅಕ್ಟೋಬರ್ 23, ರವಿವಾರದಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ‘ಶ್ರೀ ನಟರಾಜ’ ವೇದಿಕೆಯಲ್ಲಿ ನಡೆಯುವ ಪದ್ಯಾಣ ಸ್ಮೃ ತಿ ‘ಗಾನ ಗಣಪತಿ’ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಎಡನೀರು ಮಠಾಧೀಶ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಭಾಗವಹಿಸುವರು.

ಕರ್ನಾಟಕ ಲೋಕ ಸೇವಾ ಆಯೋಗದ ಮಾಜಿ ಅಧ್ಯಕ್ಷ, ಕಲಾಪೋಷಕ ಡಾ.ಟಿ.ಶ್ಯಾಮ್ ಭಟ್ ಅವರ ಅಧ್ಯಕ್ಷತೆಯಲ್ಲಿ ಸಮಾರಂಭ ಸಂಪನ್ನವಾಗಲಿದೆ. ಪುತ್ತೂರು ಶಾಸಕ  ಸಂಜೀವ ಮಠಂದೂರು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ  ಕೇಶವ ಪ್ರಸಾದ್ ಮುಳಿಯ ಮುಖ್ಯ ಅತಿಥಿಗಳು. ಪದ್ಯಾಣ ಗಣಪತಿ ಭಟ್ಟರ ಸ್ಮೃತಿಯನ್ನು ಯಕ್ಷ ವಿದ್ವಾಂಸ ಡಾ.ಎಂ.ಪ್ರಭಾಕರ ಜೋಶಿ ಮಾಡಲಿದ್ದಾರೆ. ಸುಳ್ಯ ಪ್ರತಿಭಾ ವಿದ್ಯಾಲಯದ ಪ್ರಾಚಾರ್ಯ  ವೆಂಕಟರಾಮ ಭಟ್ಟರು ಪ್ರಶಸ್ತಿ ಪುರಸ್ಕೃತರನ್ನು ನುಡಿಹಾರಗಳ ಮೂಲಕ ಅಭಿನಂದಿಸಲಿದ್ದಾರೆ.
ಈ ಸಂದರ್ಭದಲ್ಲಿ ಶ್ರೀ ಹನುಮಗಿರಿ ಮೇಳದ ಭಾಗವತ  ರವಿಚಂದ್ರ ಕನ್ನಡಿಕಟ್ಟೆ ಅವರಿಗೆ ‘ಪದ್ಯಾಣ ಶಿಷ್ಯ ಸಂಮಾನ’ ಹಾಗೂ ಯಕ್ಷಗಾನ ಅರ್ಥದಾರಿ  ರಾಮ ಜೋಯಿಸ್ ಬೆಳ್ಳಾರೆ ಅವರಿಗೆ ‘ಅಭಿಮಾನಿ ಶಿಷ್ಯ ಸಂಮಾನ’ವನ್ನು ನೀಡಲಾಗುತ್ತದೆ. ದಿನಪೂರ್ತಿ ನಡೆಯುವ ಕಲಾಪದಲ್ಲಿ ಯಕ್ಷಗಾನ ವಾದ-ಸಂವಾದ, ಗಾನ ವೈಭವ, ನೃತ್ಯ ವೈಭವ, ಪ್ರದರ್ಶನ.. ಹೀಗೆ ವೈವಿಧ್ಯ ಕಾರ್ಯಹೂರಣ ಸಂಪನ್ನವಾಗಲಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

3 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

7 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

1 day ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

1 day ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

2 days ago