Advertisement
ಸುದ್ದಿಗಳು

ಜು.9 ಪದ್ಯಾಣ ಗಣಪತಿ ಭಟ್‌ ಸಂಸ್ಮರಣೆ | ಚೊಕ್ಕಾಡಿಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ |

Share

ಪದ್ಯಾಣ ಗಣಪತಿ ಭಟ್‌ ಅವರ ಸಂಸ್ಮರಣಾ ಕಾರ್ಯಕ್ರಮವು ಜುಲೈ 9 ರಂದು ಶನಿವಾರ ಚೊಕ್ಕಾಡಿಯ ಶ್ರೀ ರಾಮದೇವಾಲಯದ ಸಭಾಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶುಕ್ರವಾರ ಚೊಕ್ಕಾಡಿ ಶ್ರೀ ರಾಮದೇವಾಲಯದ ವಠಾರದಲ್ಲಿ ಶ್ರೀರಾಮ ಸೇವಾ ಸಮಿತಿಯ ಅಧ್ಯಕ್ಷರಾದ ಮಹೇಶ್ ಚೂಂತಾರು ಬಿಡುಗಡೆಗೊಳಿಸಿದರು.

ಜುಲೈ 9 ರಂದು ಬೆಳಗ್ಗಿನಿಂದ ಕಾರ್ಯಕ್ರಮ ಆರಂಭವಾಗಲಿದೆ. ಬೆಳಗ್ಗೆ 8.30 ಕ್ಕೆ ನಡೆಯುವ ಸಭಾಕಾರ್ಯಕ್ರಮದಲ್ಲಿ ಕವಿ ಸುಬ್ರಾಯ ಚೊಕ್ಕಾಡಿ ಸಭಾಧ್ಯಕ್ಷತೆ ವಹಿಸುವರು. ಅರ್ಥಧಾರಿ ಉಡುವೆಕೋಡಿ ಸುಬ್ಬಪ್ಪಯ್ಯ ದೀಪಪ್ರಜ್ವಲನ ಮಾಡುವರು. ಅತಿಥಿಗಳಾಗಿ ಸಾಮಾಜಿಕ ಮುಂದಾಳು ಆನೆಕಾರ ಗಣಪ್ಪಯ್ಯ ಭಾಗವಹಿಸುವರು. ಕಲಾವಿದ ವೆಂಕಟ್ರಾಮ ಭಟ್ ಸುಳ್ಯ ಹಾಗೂ ಗಣರಾಜ ಕುಂಬ್ಳೆ ಪದ್ಯಾಣ ಸಂಸ್ಮರಣೆ ಮಾಡುವರು. ಶ್ರೀರಾಮ ಸೇವಾ ಸಮಿತಿಯ ಅಧ್ಯಕ್ಷರಾದ ಮಹೇಶ್ ಚೂಂತಾರು ಉಪಸ್ಥಿತರಿರುವರು. ಸಂಜೆ .6.30 ರಿಂದ ಸಂಸ್ಮರಣೆ ಹಾಗೂ  ಸಭಾ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗಿನಿಂದ ಸಂಜೆಯವರೆಗೆ ನಿರಂತರವಾಗಿ ತಾಳಮದ್ದಳೆ ನಡೆಯಲಿದೆ. ಸಂಜೆ  ಗಾನಾರ್ಚನೆ , ಯಕ್ಷಗಾನ ಬಯಲಾಟ ನಡೆಯಲಿದೆ.

ಕಾರ್ಯಕ್ರಮವನ್ನು ದೇರಾಜೆ ಸೀತಾರಾಮಯ್ಯ ಸಾಂಸ್ಕೃತಿಕ ಕೇಂದ್ರ ಚೊಕ್ಕಾಡಿ, ಶ್ರೀ ರಾಮ ಸೇವಾ ಸಮಿತಿ ಚೊಕ್ಕಾಡಿ ಹಾಗೂ ಗಣಪ್ಫಣ್ಣ ಅಭಿಮಾನಿ ಬಳಗ ಆಯೋಜಿಸಿದೆ.

ಆಮಂತ್ರಣ ಪತ್ರಿಕೆ ಬಿಡುಗಡೆ ಸಂದರ್ಭ ಕಾರ್ಯಕ್ರಮ ಸಂಘಟಕ ರಾಮಾ ಜೋಯಿಸ್ ಬೆಳ್ಳಾರೆ, ಪ್ರಮುಖರಾದ  ಕೃಷ್ಣಮೂರ್ತಿ ನೇಣಾರು, ಸತ್ಯವೆಂಕಟೇಶ ಹೆಬ್ಬಾರ್ ಶೇಣಿ, ಗಣಪ್ಪಯ್ಯ ವಾಲ್ತಾಜೆ, ಸುದೇಷ ದೇರಾಜೆ, ಕಾರ್ತಿಕೇಶ ಶೇಣಿ, ಸುಬ್ಬಪ್ಪಯ್ಯ ದಡ್ಡಾಲಡ್ಕ, ಶಾಂಭವಿ ದಡ್ಡಾಲಡ್ಕ,  ದೇವಸ್ಥಾನದ ಅರ್ಚಕರು ರಘುರಾಮ ಶರ್ಮ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

3 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

10 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

11 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

11 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

19 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

20 hours ago