ಸುದ್ದಿಗಳು

ಜು.9 ಪದ್ಯಾಣ ಗಣಪತಿ ಭಟ್‌ ಸಂಸ್ಮರಣೆ | ಚೊಕ್ಕಾಡಿಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪದ್ಯಾಣ ಗಣಪತಿ ಭಟ್‌ ಅವರ ಸಂಸ್ಮರಣಾ ಕಾರ್ಯಕ್ರಮವು ಜುಲೈ 9 ರಂದು ಶನಿವಾರ ಚೊಕ್ಕಾಡಿಯ ಶ್ರೀ ರಾಮದೇವಾಲಯದ ಸಭಾಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶುಕ್ರವಾರ ಚೊಕ್ಕಾಡಿ ಶ್ರೀ ರಾಮದೇವಾಲಯದ ವಠಾರದಲ್ಲಿ ಶ್ರೀರಾಮ ಸೇವಾ ಸಮಿತಿಯ ಅಧ್ಯಕ್ಷರಾದ ಮಹೇಶ್ ಚೂಂತಾರು ಬಿಡುಗಡೆಗೊಳಿಸಿದರು.

Advertisement
Advertisement

ಜುಲೈ 9 ರಂದು ಬೆಳಗ್ಗಿನಿಂದ ಕಾರ್ಯಕ್ರಮ ಆರಂಭವಾಗಲಿದೆ. ಬೆಳಗ್ಗೆ 8.30 ಕ್ಕೆ ನಡೆಯುವ ಸಭಾಕಾರ್ಯಕ್ರಮದಲ್ಲಿ ಕವಿ ಸುಬ್ರಾಯ ಚೊಕ್ಕಾಡಿ ಸಭಾಧ್ಯಕ್ಷತೆ ವಹಿಸುವರು. ಅರ್ಥಧಾರಿ ಉಡುವೆಕೋಡಿ ಸುಬ್ಬಪ್ಪಯ್ಯ ದೀಪಪ್ರಜ್ವಲನ ಮಾಡುವರು. ಅತಿಥಿಗಳಾಗಿ ಸಾಮಾಜಿಕ ಮುಂದಾಳು ಆನೆಕಾರ ಗಣಪ್ಪಯ್ಯ ಭಾಗವಹಿಸುವರು. ಕಲಾವಿದ ವೆಂಕಟ್ರಾಮ ಭಟ್ ಸುಳ್ಯ ಹಾಗೂ ಗಣರಾಜ ಕುಂಬ್ಳೆ ಪದ್ಯಾಣ ಸಂಸ್ಮರಣೆ ಮಾಡುವರು. ಶ್ರೀರಾಮ ಸೇವಾ ಸಮಿತಿಯ ಅಧ್ಯಕ್ಷರಾದ ಮಹೇಶ್ ಚೂಂತಾರು ಉಪಸ್ಥಿತರಿರುವರು. ಸಂಜೆ .6.30 ರಿಂದ ಸಂಸ್ಮರಣೆ ಹಾಗೂ  ಸಭಾ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗಿನಿಂದ ಸಂಜೆಯವರೆಗೆ ನಿರಂತರವಾಗಿ ತಾಳಮದ್ದಳೆ ನಡೆಯಲಿದೆ. ಸಂಜೆ  ಗಾನಾರ್ಚನೆ , ಯಕ್ಷಗಾನ ಬಯಲಾಟ ನಡೆಯಲಿದೆ.

ಕಾರ್ಯಕ್ರಮವನ್ನು ದೇರಾಜೆ ಸೀತಾರಾಮಯ್ಯ ಸಾಂಸ್ಕೃತಿಕ ಕೇಂದ್ರ ಚೊಕ್ಕಾಡಿ, ಶ್ರೀ ರಾಮ ಸೇವಾ ಸಮಿತಿ ಚೊಕ್ಕಾಡಿ ಹಾಗೂ ಗಣಪ್ಫಣ್ಣ ಅಭಿಮಾನಿ ಬಳಗ ಆಯೋಜಿಸಿದೆ.

ಆಮಂತ್ರಣ ಪತ್ರಿಕೆ ಬಿಡುಗಡೆ ಸಂದರ್ಭ ಕಾರ್ಯಕ್ರಮ ಸಂಘಟಕ ರಾಮಾ ಜೋಯಿಸ್ ಬೆಳ್ಳಾರೆ, ಪ್ರಮುಖರಾದ  ಕೃಷ್ಣಮೂರ್ತಿ ನೇಣಾರು, ಸತ್ಯವೆಂಕಟೇಶ ಹೆಬ್ಬಾರ್ ಶೇಣಿ, ಗಣಪ್ಪಯ್ಯ ವಾಲ್ತಾಜೆ, ಸುದೇಷ ದೇರಾಜೆ, ಕಾರ್ತಿಕೇಶ ಶೇಣಿ, ಸುಬ್ಬಪ್ಪಯ್ಯ ದಡ್ಡಾಲಡ್ಕ, ಶಾಂಭವಿ ದಡ್ಡಾಲಡ್ಕ,  ದೇವಸ್ಥಾನದ ಅರ್ಚಕರು ರಘುರಾಮ ಶರ್ಮ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಿಮ್ಮಲ್ಲಿ ಎಳೆ ಅಡಿಕೆ ಬೀಳ್ತಾ ಇದೆಯಾ…? ಕೇಳಲು ಶುರು ಮಾಡಿದ್ದಾರೆ ಅಡಿಕೆ ಬೆಳೆಗಾರರು..!

ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.‌10 ಕಳೆಯುವ ಹೊತ್ತಿಗೆ ವಾತಾವರಣ…

43 minutes ago

ಹವಾಮಾನ ವರದಿ | 11-06-2025 | ಮುಂದಿನ 2 ದಿವಸಗಳ ಕಾಲ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆ | ಮುನ್ಸೂಚನೆಯಂತೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಇಲ್ಲ |

ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ…

2 hours ago

ಒಂದೇ ರಾಶಿಯಲ್ಲಿ 3 ಗ್ರಹ…..| ತ್ರಿಗ್ರಾಹಿ ಯೋಗವು 50 ವರ್ಷಗಳ ನಂತರ ಸಂಭವಿಸುತ್ತಿದೆ | 5 ರಾಶಿಯವರಿಗೆ ಬಂಪರ್‌ ಲಾಟರಿ..!

ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…

9 hours ago

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…

18 hours ago

ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…

18 hours ago

ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…

18 hours ago